ಶಿವಮೊಗ್ಗದಲ್ಲಿ ನೂರಾರು ಬಾವಲಿಗಳ ಸಾವು; ಜನರಲ್ಲಿ ಆತಂಕ
ಶಿವಮೊಗ್ಗ, ಮಾರ್ಚ್ 23: ಕೊರೊನಾದ ಭಯದಲ್ಲಿ ಜನರು ಜೀವನ ನಡೆಸುತ್ತಿದ್ದು, ಈ ನಡುವೆ ತೀರ್ಥಹಳ್ಳಿ ಪಟ್ಟಣದ ಕುವೆಂಪು ಮಾರ್ಗದಲ್ಲಿರುವ ಪ್ರವಾಸಿ ಮಂದಿರದ ಸುತ್ತ ಬಾವಲಿಗಳು ಸಾವನ್ನಪ್ಪಿದ್ದರಿಂದ ಜನರಿಗೆ ಆತಂಕ ಹೆಚ್ಚಾಗಿದೆ.
ಒಮ್ಮೆಲೇ ನೂರಾರು ಸಂಖ್ಯೆಯ ಬಾವಲಿಗಳು ಮೃತಪಟ್ಟಿರುವುದು ಜನರ ಆತಂಕಕ್ಕೆ ಕಾರಣವಾಗಿದ್ದು, ಬಾವಲಿಗಳ ಶವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಶಿವಮೊಗ್ಗ ಪಶು ವೈದ್ಯಕೀಯ ಕಾಲೇಜಿನ ಮುಖ್ಯಸ್ಥ ಡಾ.ಪ್ರಕಾಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ತಜ್ಞರು ಭೇಟಿ ನೀಡಿದ್ದಾರೆ.
ತಹಶೀಲ್ದಾರ್ ಶ್ರೀಪಾದ್ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ಮಾಡಿದ್ದಾರೆ. ಬಾಹುಬಲಿಗಳು ಬಿದ್ದಿದ್ದ ಸ್ಥಳದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಬಾವಲಿ ಶವವನ್ನು ಬೆಂಗಳೂರಿನ ಲ್ಯಾಬ್ ಗೆ ಪರೀಕ್ಷೆಗಾಗಿ ಕಳುಹಿಸಲಾಗಿದೆ. ಸತ್ತಿರುವ ಬಾವಲಿಗಳನ್ನು ಕಚ್ಚಿಕೊಂಡು ನಾಯಿಗಳು ಪಟ್ಟಣದ ಒಳಗೆ ಬರುತ್ತಿವೆ.

ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ತೀರ್ಥಹಳ್ಳಿ ಪಟ್ಟಣದ ಜನತೆ ಈಗಾಗಲೇ ಮಂಗನಕಾಯಿಲೆ, ಎಚ್1ಎನ್1 ರೋಗದಿಂದ ಕಂಗಾಲಾಗಿರುವ ಜನರು, ಬಾವಲಿಗಳ ಸಾವಿನಿಂದ ಬೇರೆ ಇನ್ಯಾವುದಾದರೂ ರೋಗ ಹರಡಬಹುದೆಂಬ ಆತಂಕದಲ್ಲಿ ಜನರು ಬದುಕುತ್ತಿದ್ದಾರೆ.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications