ನಾನೇಕೆ ಜೆಡಿಎಸ್ ಪಕ್ಷ ಸೇರಿದೆ: ರಾಜ್ ಸೊಸೆ ಗೀತಾ
ಗೀತಾ ಶಿವರಾಜ್ ಕುಮಾರ್ ಅವರು ಮಾತನಾಡುತ್ತಾ, ನನಗೆ ರಾಜಕೀಯ ಹೊಸದಲ್ಲ. ನಮ್ಮ ತಂದೆಯವರ ಜೊತೆಗೆ ರಾಜಕೀಯದ ಏಳುಬೀಳುಗಳನ್ನು ತುಂಬ ಹತ್ತಿರದಿಂದ ನೋಡುತ್ತಾ ಬಂದಿದ್ದೇನೆ. ಮೊದಲು ನಮ್ಮ ತಂದೆಯವರು ರಾಜಕೀಯಕ್ಕೆ ಬಂದಾಗ ನನಗೆ ಕೇವಲ ಎರಡು ವರ್ಷ. ಬಳಿಕ ಬುದ್ಧಿ ತಿಳಿದಾಗಿನಿಂದ ಎಲ್ಲವನ್ನೂ ಗಮನಿಸುತ್ತಾ ಬಂದಿದ್ದೇನೆ.
ನಾನು ರಾಜಕೀಯಕ್ಕೆ ಬರಲು ಒಂದೇ ಕಾರಣ. ನಮ್ಮ ತಂದೆಯವರ ಹೆಸರು ಉಳೀಬೇಕು. ಅವರ ರಾಜಕೀಯ ಕೆಲಸಕಾರ್ಯಗಳನ್ನು ಮುಂದುವರಿಸಬೇಕು. ಅವರು ತುಂಬಾ ಕೆಲಸ ಮಾಡಿದ್ದಾರೆ. ಅವರು ಮಾಡಲು ಆಗದೆ ಇರುವುದು ಇನ್ನೂ ಬಹಳಷ್ಟಿದೆ. ಬೇರೆ ಯಾವುದೇ ದುರುದ್ದೇಶವನ್ನಿಟ್ಟುಕೊಂಡು ತಾನು ರಾಜಕೀಯಕ್ಕೆ ಬಂದಿಲ್ಲ. [ಶಿವಮೊಗ್ಗ ಜೆಡಿಎಸ್ ಅಭ್ಯರ್ಥಿ ಗೀತಾ ಶಿವಣ್ಣ ಸಂದರ್ಶನ]

ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯಬೇಕು ಎಂಬುದು ಒಂದೇ ಆಸೆ ನನಗಿರುವುದು. ಇನ್ನು ನನಗೆ ಹುಟ್ಟಿದ ಮನೆ ಮೆಟ್ಟಿದ ಮನೆ ಎರಡರಲ್ಲೂ ನನಗೇನು ಕಮ್ಮಿ ಆಗಿಲ್ಲ. ಇವೆರಡು ನನಗೆ ಶಾಲೆ ಇದ್ದಂತೆ. ನಮ್ಮ ತಂದೆತಾಯಿ ಒಳ್ಳೆ ಬುದ್ಧಿ ಗುಣ ನಡತೆ ಹೇಳಿ ಕಳುಹಿಸಿದ್ದಾರೆ. ಅಲ್ಲಿ ಅಪ್ಪಾಜಿಯಿಂದ ಇನ್ನಷ್ಟು ಒಳ್ಳೆಯದನ್ನು ಕಲಿತೆ.
ಇನ್ನು ಜೆಡಿಎಸ್ ಪಕ್ಷಕ್ಕೆ ಯಾಕೆ ಸೇರ್ಪಡೆಯಾದೆ ಎಂದರೆ ನಮ್ಮ ತಂದೆಯವರು ಕೊನೆಗಾಲದಲ್ಲಿದ್ದ ಪಕ್ಷ. ನನ್ನ ತಮ್ಮನಿಗೆ ಸ್ಥಾನಮಾನ ಕೊಟ್ಟು ಅವನಿಗೆ ಉತ್ತಮ ಭವಿಷ್ಯ ರೂಪಿಸಿದ ಪಕ್ಷ ಅದು. ಈ ಕಾರಣಕ್ಕಾಗಿ ತಾನು ಜೆಡಿಎಸ್ ಪಕ್ಷಕ್ಕೆ ಬಂದಿದ್ದೇನೆ ಎಂದರು. ಬಳಿಕ ಒಂದೊಂದಾಗಿ ಗೀತಾ ಅವರಿಗೆ ಪತ್ರಕರ್ತರಿಂದ ಪ್ರಶ್ನೆಗಳು ತೂರಿಬಂದವು.
ಗೀತಾ ಅವರು ಎಲ್ಲ ಪ್ರಶ್ನೆಗಳಿಗೂ ಸಮರ್ಥವಾಗಿಯೇ ಉತ್ತರ ನೀಡಿದರು. ಕೆಲವು ಪ್ರಶ್ನೆಗಳಿಗೆ ಈ ಬಗ್ಗೆ ತಮಗೇನು ಗೊತ್ತಿಲ್ಲ ಎಂದು ನೇರವಾಗಿ ಹೇಳಿದರು. ಇನ್ನೂ ಕೆಲವು ಕಡೆ ತೂರಿ ಬರುತ್ತಿದ್ದ ಪ್ರಶ್ನೆಯ ಬಾಣಗಳಿಗೆ ಶಿವಣ್ಣ ಸಮಾಧಾನಚಿತ್ತದಿಂದ ಉತ್ತರಿಸಿದರು. ಒಟ್ಟಾರೆಯಾಗಿ ಶಿವಣ್ಣ ಹಾಗೂ ಗೀತಾ ಅವರದು ರಕ್ಷಣಾತ್ಮಕ ಆಟವಾಗಿತ್ತು. ಕೆಲವು ಕಡೆ ಗೀತಾ ಅವರು ಚುಟುಕಾಗಿ ಉತ್ತರಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications