ಶಿವಮೊಗ್ಗದಲ್ಲಿ ರಾಜ್ಯದಲ್ಲಿಯೇ ದೊಡ್ಡ ಮೀನುಮರಿ ಉತ್ಪಾದನೆ ಘಟಕ
ಶಿವಮೊಗ್ಗ, ಸೆ 7: ಶಿವಮೊಗ್ಗ ಜಿಲ್ಲೆಯ ಭದ್ರಾ ಪ್ರಾಜೆಕ್ಟ್ ಮೆಣಸಿನ ಹಳ್ಳಿಯಲ್ಲಿರುವ 130 ಎಕರೆ ಪ್ರದೇಶದಲ್ಲಿಯ ಮೀನುಮರಿ ಉತ್ಪಾದನಾ ಕೇಂದ್ರಕ್ಕೆ ಮೀನುಗಾರಿಕೆ, ಬಂದರು, ಒಳನಾಡು ಜಲಸಾರಿಗೆ, ಹಿಂದೂ ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಭೇಟಿ ನೀಡಿ ಪರಿಶೀಲಿಸಿದರು.
ಮೀನು ಮರಿಗಳ ಉತ್ಪಾದನೆ ಮತ್ತು ಸಾಕಾಣಿಕೆ ಕೆರೆಗಳ ನಿರ್ಮಾಣದಲ್ಲಿ ಆಗಿರುವ ಲೋಪದೋಷ, ಕೆ.ಆರ್.ಐ.ಡಿ.ಎಲ್ ಮೂಲಕ ನಡೆಯುತ್ತಿರುವ ಕಾಮಗಾರಿ ವಿಳಂಬದಿಂದಾಗಿ ಮರಿಗಳ ಉತ್ಪಾದನೆಯಲ್ಲಿ ಕುಂಠಿತ, ಸಿಬ್ಬಂದಿಗಳ ಸಮಸ್ಯೆಗಳ ಸಹಿತ ಇನ್ನಿತರ ವಿಚಾರಗಳ ಕುರಿತಾಗಿ ಸಮಗ್ರವಾಗಿ ಸಚಿವರು ಪರಿಶೀಲನೆ ನಡೆಸಿದರು.
ಹಿರಿಯ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸಿ, ನೆನೆಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಲು ಸಚಿವ ಕೋಟ ಪೂಜಾರಿ ಸೂಚಿಸಿದರು. ಸ್ವಯಂ ಉದ್ಯೋಗಕ್ಕಾಗಿ, ಮೀನುಗಾರಿಕೆ ತರಬೇತಿ ಪಡೆಯಲು ನಿರ್ಮಾಣವಾಗುತ್ತಿರುವ ಮೀನುಗಾರಿಕೆ ತರಬೇತಿ ಸಂಸ್ಥೆಯನ್ನು ಸಚಿವರು ಈ ಸಂದರ್ಭದಲ್ಲಿ ಪರಿಶೀಲಿಸಿದರು.

ಸಂಸ್ಥೆಯ ನೂತನ ಕಟ್ಟಡವನ್ನು ಇನ್ನೆರಡು ವಾರದಲ್ಲಿ ಲೋಕಾರ್ಪಣೆ ಮಾಡಲು ಸೂಚಿಸಿದ ಸಚಿವರಿಗೆ, ಮೀನುಮರಿಗಳ ಉತ್ಪಾದನೆ ಕುರಿತು ಮಾಹಿತಿ ನೀಡಿದ ಹಿರಿಯ ಅಧಿಕಾರಿಗಳು, ಉತ್ಪಾದನಾ ಘಟಕಕ್ಕೆ ಅಗತ್ಯವಾಗಿ ಬೇಕಾಗಿರುವ ಮೂಲಭೂತ ಸೌಕರ್ಯಗಳಿಗೆ ಅನುದಾನದ ಬಗ್ಗೆ ಮಾಹಿತಿ ಒದಗಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಕೋಟ, ಒಳನಾಡು ಮೀನುಗಾರಿಕೆಯಲ್ಲಿ ಭಾರತದಲ್ಲಿ ಕರ್ನಾಟಕ 9ನೇ ಸ್ಥಾನದಲ್ಲಿದ್ದು, ಗುಣಮಟ್ಟದ ಮೀನುಮರಿಗಳ ಸರಬರಾಜಿನಲ್ಲಿ ಆಗುತ್ತಿರುವ ಕೊರತೆ, ಮೀನು ಉತ್ಪಾದನೆಗೆ ತೊಡಕಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೇ ಬಹುದೊಡ್ಡ ಮೀನುಮರಿ ಉತ್ಪಾದನೆ ಘಟಕವನ್ನು ಶಿವಮೊಗ್ಗದಲ್ಲಿ ಸ್ಥಾಪಿಸುವ ಮೂಲಕ ಎರಡು ಪಟ್ಟು ಹೆಚ್ಚಿನ ಬೇಡಿಕೆ ಇರುವ ಮೀನುಮರಿಗಳ ಉತ್ಪಾದನೆ ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲು ಸದ್ಯದಲ್ಲಿ ಅಭಿವೃದ್ಧಿಯ ಪೂರ್ಣಪ್ರಮಾಣದ ಯೋಜನಾ ವರದಿ ತಯಾರಿಸಿ ರಾಜ್ಯ ಸರ್ಕಾರಕ್ಕೆ ಮಂಡಿಸಲು ಸೂಚಿಸಿದರು.

ಈ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಅನುದಾನವನ್ನು ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದರು. ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ದಿನೇಶ್ ಕುಮಾರ್, ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications