ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತುಂಗಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ ಪ್ರಕರಣ: ಇನ್ನೂ ಸಿಗದ ಮೃತದೇಹ!

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜುಲೈ.17: ಗಂಡನ ಸಾವಿನಿಂದ ಮನನೊಂದ ಹೆಂಡತಿ ತುಂಗಾ ನದಿಗೆ ಹಾರಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿತ್ರಮ್ಮ (58) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರ ಮೃತದೇಹಕ್ಕಾಗಿ ಅಗ್ನಿ ಶಾಮಕದಳ ಮತ್ತು ಕೋಟೆ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ.

ಸಾವಿತ್ರಮ್ಮ ಮಗ ಕಿರಣ್ ಜೊತೆ ಮೊಬೈಲ್ ನಲ್ಲಿ ಮಾತನಾಡುತ್ತಾ 'ನೀವೆಲ್ಲರೂ ಚೆನ್ನಾಗಿ ಬಾಳಿ' ಎಂದು ಹಾರೈಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಗರದ ತುಂಗಾ ನದಿಯ ಕೋರ್ಪಾಲಯ್ಯ ಮಂಟಪದ ಬಳಿ ಈ ಘಟನೆ ನಡೆದಿದೆ.

Woman body was not found in Tunga River

ಮೃತ ಪೌರಕಾರ್ಮಿಕ ಸುಬ್ರಮಣಿ ಸಾವಿನ ಹಿಂದಿದೆ ಮನಕಲಕುವ ಕತೆಮೃತ ಪೌರಕಾರ್ಮಿಕ ಸುಬ್ರಮಣಿ ಸಾವಿನ ಹಿಂದಿದೆ ಮನಕಲಕುವ ಕತೆ

ಸಾವಿತ್ರಮ್ಮ ಆಲ್ಕೋಳದ ನಿವಾಸಿಯಾಗಿದ್ದು, ಅವರ ಮೃತ ದೇಹ ಇದುವರೆಗೂ ಪತ್ತೆಯಾಗಿಲ್ಲ. ಅಪಾಯಮಟ್ಟ ಮೀರಿ ತುಂಗಾ ನದಿ ಹರಿಯುತ್ತಿರುವುದರಿಂದ ಕಾರ್ಯಾಚರಣೆಗೆ ಅಗ್ನಿ ಶಾಮಕದಳದ ಸಿಬ್ಬಂದಿಗಳು ಸ್ವಲ್ಪ ಹಿಂದೇಟು ಹಾಕುತ್ತಿದ್ದಾರೆ.

Woman body was not found in Tunga River

ಆದರೆ ತುಂಗಾ ನದಿಯಲ್ಲಿ ತಾಯಿ ಮೃತದೇಹ ಹುಡುಕಲು ಅವರ ಮಕ್ಕಳು ಸ್ನೇಹಿತರೊಂದಿಗೆ ಪ್ರಾಣದ ಹಂಗು ತೊರೆದು ಹುಡುಕುತ್ತಿದ್ದಾರೆ. ಈ ಕುರಿತು ಮಾತನಾಡಿದ ಕೋಟೆ ವೃತ್ತ ನಿರೀಕ್ಷಕ ದೇವರಾಜ್ ಶೋಧ ಕಾರ್ಯವನ್ನು ಮುಂದುವರೆಸುವುದಾಗಿ ಭರವಸೆ ನೀಡಿದ್ದಾರೆ.

English summary
Woman committed suicide in Tunga River and her body was not found yet.Savitramma (58) jumped into the river and committed suicide. Shivamogga kote police continue searching dead body.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X