ವಿಡಿಯೋ; ಸಿಗಂದೂರು ಲಾಂಚ್ನಿಂದ ನದಿಗೆ ಹಾರಿದ ಮಹಿಳೆ ರಕ್ಷಣೆ
ಶಿವಮೊಗ್ಗ, ಜೂನ್ 27; ಸಿಗಂದೂರು ಲಾಂಚ್ನಿಂದ ಶರಾವತಿ ನದಿಗೆ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಲಾಂಚ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಮಹಿಳೆ ಬದುಕುಳಿದಿದ್ದಾರೆ. ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಾವೇರಿ ಜಿಲ್ಲೆ ಹಿರೇಕೆರೂರಿನ ರೇಣುಕಾ (46) ಎಂಬ ಮಹಿಳೆ ಭಾನುವಾರ ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದು ಪಡೆದು ಮರಳುತ್ತಿದ್ದರು. ಹೊಳೆಬಾಗಿಲು ಕಡೆಯಿಂದ ಕಳಸವಳ್ಳಿ ಕಡೆಗೆ ಲಾಂಚ್ ಹತ್ತಿದ್ದರು.
ಹೊಳೆಬಾಗಿಲು ಕಡೆಯಿಂದ ಕಳಸವಳ್ಳಿ ಕಡೆಗೆ ಹೊರಟಾಗ ರೇಣುಕಾ ಲಾಂಚ್ ಹತ್ತಿದ್ದರು. ಹೊಳೆಯ ಮಧ್ಯೆ ಭಾಗಕ್ಕೆ ಬರುತ್ತಿದ್ದಂತೆ ದಿಢೀರನೆ ಲಾಂಚ್ನಿಂದ ಜಿಗಿದಿದ್ದಾರೆ. ಮಹಿಳೆಯ ಜಿಗಿದಿದ್ದನ್ನು ಗಮನಿಸಿದ ಲಾಂಚ್ನ ಪ್ರಯಾಣಿಕರು ಭಯಗೊಂಡಿದ್ದಾರೆ.

ಹೇಗಿತ್ತು ರಕ್ಷಣಾ ಕಾರ್ಯ?; ಮಳೆಯಿಂದಾಗಿ ಶರಾವತಿ ನದಿಯಲ್ಲಿ ನೀರಿನ ಮಟ್ಟ ಸ್ವಲ್ಪ ಏರಿಕೆಯಾಗಿದೆ. ಇನ್ನು ಹೊಳೆಯ ಮಧ್ಯ ಭಾಗವಾಗದ್ದರಿಂದ ಆಳವು ಹೆಚ್ಚು. ಹೀಗಿದ್ದು ಲಾಂಚ್ನಿಂದ ಮಹಿಳೆಯ ಜಿಗಿಯುತ್ತಿದ್ದಂತೆ ಸ್ಥಳೀಯರಾದ ಪ್ರಕಾಶ್ ಬೆಳಮಕ್ಕಿ ರಕ್ಷಣೆಗೆ ಮುಂದಾಗಿದ್ದಾರೆ. ಇವರಿಗೆ ಲಾಂಚ್ ಸಿಬ್ಬಂದಿ ನೆರವಾಗಿದ್ದಾರೆ.
ಮಹಿಳೆಯ ರಕ್ಷಣೆಗೆ ಮತ್ತು ಪ್ರಕಾಶ್ ಅವರಿಗೆ ಸೇಫ್ಟಿ ಟ್ಯೂಬ್ಗಳನ್ನು ನೀರಿಗೆ ಹಾಕಲಾಗಿತ್ತು. ಅಲ್ಲದೆ ಲಾಂಚ್ ಅನ್ನು ಮಹಿಳೆ ಬಳಿಗೆ ಕೊಂಡೊಯ್ಯಲಾಯಿತು. ಟ್ಯೂಬ್ ಸಹಾಯ ಮತ್ತು ಪ್ರಕಾಶ್ ನೆರವಿನಿಂದ ರೇಣುಕಾ ರಕ್ಷಣೆ ಮಾಡಲಾಗಿದೆ.
ಸಿಬ್ಬಂದಿಯಿಂದ ಪ್ರಾಥಮಿಕ ಆರೈಕೆ; ರೇಣುಕಾರನ್ನು ಲಾಂಚ್ ಮೇಲೆ ಕರೆತಂದು ಪ್ರಾಥಮಿಕ ಆರೈಕೆ ಮಾಡಲಾಯಿತು. ಲೈಫ್ ಜಾಕೆಟ್ ಹಾಕಲಾಯಿತು. ಲಾಂಚ್ ಅನ್ನು ದಡಕ್ಕೆ ತಂದು ರೇಣುಕಾರನ್ನು ಕೂಡಲೆ ಆಸ್ಪತ್ರೆಗೆ ಕಳುಹಿಸಲಾಯಿತು. ಸದ್ಯ ರೇಣುಕಾ ಪ್ರಾಣಾಪಾಯದಿಂದ ಪಾರಾಗಿದ್ದರೆ.
ಸಮಯ ಪ್ರಜ್ಞೆ, ದಿಟ್ಟತನ ಮೆರೆದ ಸಿಬ್ಬಂದಿ; ಮಹಿಳೆ ಲಾಂಚ್ನಿಂದ ಜಿಗಿಯುತ್ತಿದ್ದಂತೆ ಸ್ಥಳೀಯರಾದ ಪ್ರಕಾಶ್ ದಿಟ್ಟತನ ತೋರಿಸಿದ್ದಾರೆ. ಕೂಡಲೇ ಹೊಳೆಗೆ ಜಿಗಿದಿದ್ದಾರೆ. ಸ್ಥಳೀಯರಾದ ಪ್ರಶಾಂತ್ ಸಿಗಂದೂರು, ಸುಧಾಕರ್, ಲಾಂಚ್ ಸಿಬ್ಬಂದಿಗಳಾದ ಗಜಕೋಶ, ಮಂಜುನಾಥ, ಬಲರಾಮ, ಜಗದೀಶ್ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ್ದರು. ಇವರ ದಿಟ್ಟತನ ಮತ್ತು ಸಮಯ ಪ್ರಜ್ಞೆಯಿಂದ ಮಹಿಳೆ ಬದುಕುಳಿದಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳಲು ಶರಾವತಿ ನದಿಯ ಮಧ್ಯ ಭಾಗಕ್ಕೆ ಜಿಗಿದವರ ರಕ್ಷಣೆಯಾಗಿ, ಪ್ರಾಣ ಉಳಿದಿರುವುದು ಇದೇ ಮೊದಲು ಎಂದು ಹೇಳಲಾಗುತ್ತಿದೆ. ವಿಚಾರ ತಿಳಿದು ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮಾಹಿತಿ ಪಡೆದಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications