ವಿಡಿಯೋ; ಸಿಗಂದೂರು ಲಾಂಚ್ನಿಂದ ನದಿಗೆ ಹಾರಿದ ಮಹಿಳೆ ರಕ್ಷಣೆ
ಶಿವಮೊಗ್ಗ, ಜೂನ್ 27; ಸಿಗಂದೂರು ಲಾಂಚ್ನಿಂದ ಶರಾವತಿ ನದಿಗೆ ಜಿಗಿದು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಲಾಂಚ್ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ಮಹಿಳೆ ಬದುಕುಳಿದಿದ್ದಾರೆ. ತಕ್ಷಣ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಹಾವೇರಿ ಜಿಲ್ಲೆ ಹಿರೇಕೆರೂರಿನ ರೇಣುಕಾ (46) ಎಂಬ ಮಹಿಳೆ ಭಾನುವಾರ ಸಂಜೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ಪಡೆದು ಪಡೆದು ಮರಳುತ್ತಿದ್ದರು. ಹೊಳೆಬಾಗಿಲು ಕಡೆಯಿಂದ ಕಳಸವಳ್ಳಿ ಕಡೆಗೆ ಲಾಂಚ್ ಹತ್ತಿದ್ದರು.
ಹೊಳೆಬಾಗಿಲು ಕಡೆಯಿಂದ ಕಳಸವಳ್ಳಿ ಕಡೆಗೆ ಹೊರಟಾಗ ರೇಣುಕಾ ಲಾಂಚ್ ಹತ್ತಿದ್ದರು. ಹೊಳೆಯ ಮಧ್ಯೆ ಭಾಗಕ್ಕೆ ಬರುತ್ತಿದ್ದಂತೆ ದಿಢೀರನೆ ಲಾಂಚ್ನಿಂದ ಜಿಗಿದಿದ್ದಾರೆ. ಮಹಿಳೆಯ ಜಿಗಿದಿದ್ದನ್ನು ಗಮನಿಸಿದ ಲಾಂಚ್ನ ಪ್ರಯಾಣಿಕರು ಭಯಗೊಂಡಿದ್ದಾರೆ.

ಹೇಗಿತ್ತು ರಕ್ಷಣಾ ಕಾರ್ಯ?; ಮಳೆಯಿಂದಾಗಿ ಶರಾವತಿ ನದಿಯಲ್ಲಿ ನೀರಿನ ಮಟ್ಟ ಸ್ವಲ್ಪ ಏರಿಕೆಯಾಗಿದೆ. ಇನ್ನು ಹೊಳೆಯ ಮಧ್ಯ ಭಾಗವಾಗದ್ದರಿಂದ ಆಳವು ಹೆಚ್ಚು. ಹೀಗಿದ್ದು ಲಾಂಚ್ನಿಂದ ಮಹಿಳೆಯ ಜಿಗಿಯುತ್ತಿದ್ದಂತೆ ಸ್ಥಳೀಯರಾದ ಪ್ರಕಾಶ್ ಬೆಳಮಕ್ಕಿ ರಕ್ಷಣೆಗೆ ಮುಂದಾಗಿದ್ದಾರೆ. ಇವರಿಗೆ ಲಾಂಚ್ ಸಿಬ್ಬಂದಿ ನೆರವಾಗಿದ್ದಾರೆ.
ಮಹಿಳೆಯ ರಕ್ಷಣೆಗೆ ಮತ್ತು ಪ್ರಕಾಶ್ ಅವರಿಗೆ ಸೇಫ್ಟಿ ಟ್ಯೂಬ್ಗಳನ್ನು ನೀರಿಗೆ ಹಾಕಲಾಗಿತ್ತು. ಅಲ್ಲದೆ ಲಾಂಚ್ ಅನ್ನು ಮಹಿಳೆ ಬಳಿಗೆ ಕೊಂಡೊಯ್ಯಲಾಯಿತು. ಟ್ಯೂಬ್ ಸಹಾಯ ಮತ್ತು ಪ್ರಕಾಶ್ ನೆರವಿನಿಂದ ರೇಣುಕಾ ರಕ್ಷಣೆ ಮಾಡಲಾಗಿದೆ.
ಸಿಬ್ಬಂದಿಯಿಂದ ಪ್ರಾಥಮಿಕ ಆರೈಕೆ; ರೇಣುಕಾರನ್ನು ಲಾಂಚ್ ಮೇಲೆ ಕರೆತಂದು ಪ್ರಾಥಮಿಕ ಆರೈಕೆ ಮಾಡಲಾಯಿತು. ಲೈಫ್ ಜಾಕೆಟ್ ಹಾಕಲಾಯಿತು. ಲಾಂಚ್ ಅನ್ನು ದಡಕ್ಕೆ ತಂದು ರೇಣುಕಾರನ್ನು ಕೂಡಲೆ ಆಸ್ಪತ್ರೆಗೆ ಕಳುಹಿಸಲಾಯಿತು. ಸದ್ಯ ರೇಣುಕಾ ಪ್ರಾಣಾಪಾಯದಿಂದ ಪಾರಾಗಿದ್ದರೆ.
ಸಮಯ ಪ್ರಜ್ಞೆ, ದಿಟ್ಟತನ ಮೆರೆದ ಸಿಬ್ಬಂದಿ; ಮಹಿಳೆ ಲಾಂಚ್ನಿಂದ ಜಿಗಿಯುತ್ತಿದ್ದಂತೆ ಸ್ಥಳೀಯರಾದ ಪ್ರಕಾಶ್ ದಿಟ್ಟತನ ತೋರಿಸಿದ್ದಾರೆ. ಕೂಡಲೇ ಹೊಳೆಗೆ ಜಿಗಿದಿದ್ದಾರೆ. ಸ್ಥಳೀಯರಾದ ಪ್ರಶಾಂತ್ ಸಿಗಂದೂರು, ಸುಧಾಕರ್, ಲಾಂಚ್ ಸಿಬ್ಬಂದಿಗಳಾದ ಗಜಕೋಶ, ಮಂಜುನಾಥ, ಬಲರಾಮ, ಜಗದೀಶ್ ರಕ್ಷಣಾ ಕಾರ್ಯದಲ್ಲಿ ಭಾಗವಹಿಸಿದ್ದರು. ಇವರ ದಿಟ್ಟತನ ಮತ್ತು ಸಮಯ ಪ್ರಜ್ಞೆಯಿಂದ ಮಹಿಳೆ ಬದುಕುಳಿದಿದ್ದಾರೆ.
ಆತ್ಮಹತ್ಯೆ ಮಾಡಿಕೊಳ್ಳಲು ಶರಾವತಿ ನದಿಯ ಮಧ್ಯ ಭಾಗಕ್ಕೆ ಜಿಗಿದವರ ರಕ್ಷಣೆಯಾಗಿ, ಪ್ರಾಣ ಉಳಿದಿರುವುದು ಇದೇ ಮೊದಲು ಎಂದು ಹೇಳಲಾಗುತ್ತಿದೆ. ವಿಚಾರ ತಿಳಿದು ಸಾಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಮಾಹಿತಿ ಪಡೆದಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications