ತಲಾಖ್ ಬೇಡ, ಗಂಡನನ್ನು ಹುಡುಕಿಕೊಡಿ ಎಂದು ಡಿಸಿ ಕಚೇರಿ ಎದುರು ಪತ್ನಿ ಪ್ರತಿಭಟನೆ
ಶಿವಮೊಗ್ಗ, ಅಕ್ಟೋಬರ್ 14: "ನನ್ನ ಗಂಡ ನನಗೆ ತಲಾಖ್ ನೀಡಿದ್ದಾನೆ. ಆದರೆ ನನಗೆ ಮತ್ತು ಮಗಳಿಗೆ ಜೀವನ ನಡೆಸುವುದು ಕಷ್ಟವಾಗಿದೆ. ನನಗೆ ನನ್ನ ಗಂಡನನ್ನು ಹುಡುಕಿಕೊಡಿ" ಎಂದು ಜಿಲ್ಲಾಧಿಕಾರಿ ಮೊರೆ ಹೋಗಿದ್ದಾರೆ ಶಿವಮೊಗ್ಗದ ಈ ಮಹಿಳೆ.
ಇದೇ ಸೆಪ್ಟೆಂಬರ್ ನಲ್ಲಿ ಶಿವಮೊಗ್ಗದ ಈ ಮುಸ್ಲಿಂ ದಂಪತಿ ನಡುವೆ ಬಿರುಕು ಮೂಡಿತ್ತು. ಪ್ರೀತಿಸಿ ಮದುವೆಯಾಗಿ 20 ವರ್ಷಗಳಿಂದ ಯಾವುದೇ ಸಮಸ್ಯೆ ಇಲ್ಲದೆ ಸಾಮರಸ್ಯದಿಂದ ಜೀವನ ಸಾಗಿಸುತ್ತಿದ್ದ ಪತಿ ಮುಸ್ತಫಾ ವಾಟ್ಸಪ್ ಮೂಲಕ ತಲಾಖ್ ನೀಡಿದ್ದನು. ಇದನ್ನು ವಿರೋಧಿಸಿ ಪೊಲೀಸ್ ಠಾಣೆಯಲ್ಲಿ ಪತ್ನಿ ದೂರು ನೀಡಿದ್ದರು. ಆದರೂ ಈ ಬಗ್ಗೆ ಗಂಡನಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ಬೇಸತ್ತು ಆಯೇಷಾ ಮತ್ತು ಮಗಳು ನ್ಯಾಯ ಕೊಡಿಸಿ ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದರು ಇಂದು ಧರಣಿ ನಡೆಸಿದರು.

ವಾಟ್ಸಪ್ ಮೂಲಕ ತ್ರಿವಳಿ ತಲಾಖ್ ನೀಡಿದ್ದ ಮುಸ್ತಫಾ ಬೇಗ್ ದುಬೈನಲ್ಲಿ ಕುಳಿತಿದ್ದಾನೆ. ಇವರ ಸ್ನೇಹಿತರ ಪ್ರಕಾರ ಮುಸ್ತಫಾ ದುಬೈ ಬಿಟ್ಟು ಬರುವುದಿಲ್ಲವೆಂದು ತಿಳಿದುಬಂದಿದೆ. "21 ವರ್ಷ ನಾನು ಮುಸ್ತಫಾ ಬೇಗ್ ಜೊತೆ ಸಂಸಾರ ಮಾಡಿದ್ದೇನೆ. ಏಕಾಏಕಿ ತ್ರಿವಳಿ ತಲಾಖ್ ನೀಡಿರುವುದು ನ್ಯಾಯಸಮ್ಮತವೇ" ಎಂದು ಆಯೆಷಾ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
"ಮಗಳ ಭವಿಷ್ಯಕ್ಕೆ ಮುಸ್ತಫಾ ನಡವಳಿಕೆ ತೊಂದರೆಯಾಗುತ್ತದೆ. ಹಾಗಾಗಿ ಮತ್ತೆ ನಾನು ಮುಸ್ತಫಾ ಜೊತೆ ಬಾಳಲು ಅನುಕೂಲ ಮಾಡಿಕೊಡಿ" ಎಂದು ಆಯೇಷಾ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications