ಸಿಗಂದೂರು ಸೇತುವೆ ಕಾಮಗಾರಿಗೆ ನಿತೀನ್ ಗಡ್ಕರಿ ಚಾಲನೆ
ಸಾಗರ, ಫೆಬ್ರವರಿ 19 : ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಸಿಂಗಂದೂರಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕಾಮಗಾರಿಗೆ ಕೇಂದ್ರ ಭೂ ಸಾರಿಗೆ ಸಚಿವ ನಿತೀನ್ ಗಡ್ಕರಿ ಸೋಮವಾರ ಚಾಲನೆ ನೀಡಿದರು.
ಗಡ್ಕರಿ ಈ ಕಾಮಗಾರಿ ಉದ್ಘಾಟನೆ ಮಾಡುವ ಮೂಲಕ 7 ಸಾವಿರ ಕೋಟಿಗೂ ಅಧಿಕ ಮೊತ್ತದ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸಿಗಂದೂರು ಸೇತುವೆ ನಿರ್ಮಾಣಕ್ಕಾಗಿಯಡಿಯೂರಪ್ಪ ಅವರ ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂಧಿಸಿ ಗಡ್ಕರಿ ಅವರು ಅನುಮೋದನೆ ನೀಡಿರುವುದು ಈ ಭಾಗದ ಜನತೆಯಲ್ಲಿ ಸಂತಸವನ್ನು ತಂದಿದೆ.
ಸೇತುವೆಯಿಂದ ಲಕ್ಷಾಂತರ ಜನರಿಗೆ ಉಪಯೋಗವಾಗಲಿದೆ . ಈ ಜನೋಪಕಾರಿ ಕಾರ್ಯದಿಂದ ಕರ್ನಾಟಕದ ಪರಿವರ್ತನೆಗೆ ನಾವು ಬದ್ಧರಾಗಿದ್ದೇವೆ ಎಂದು ಯಡಿಯೂರಪ್ಪ ಅವರು ಸಂದೇಶ ನೀಡಿದ್ದಾರೆ. ಸಂದರ್ಭದಲ್ಲಿ ಕಾಗೋಡು ತಿಮ್ಮಪ್ಪ, ಬಿ.ವೈ ರಾಘವೇಂದ್ರ, ರುದ್ರೇಗೌಡ, ಆಯನೂರು ಮಂಜುನಾಥ್ ಉಪಸ್ಥಿತರಿದ್ದರು.

ಸೇತುವೆ ಹೇಗಿರುತ್ತದೆ, ಪ್ಲಾನಿಂಗ್ ಏನು: ಅಂಬಾರಗೋಡ್ಲು-ಕಳಸವಳ್ಳಿ ಮಧ್ಯೆ 2.16 ಕಿ,ಮೀ ಉದ್ದದ ಸೇತುವೆ ನಿರ್ಮಾಣವಾಗಲಿದೆ. ಇನ್ನು, ಸೇತುವೆ ನಿರ್ಮಾಣಕ್ಕೆ2 ಮೀಟರ್ ಸುತ್ತಳತೆಯ , 40 ಮೀಟರ್ ಎತ್ತರದ 21 ಪಿಲ್ಲರ್ ಹಾಕಲಾಗುತ್ತಿದೆ. ಇದರ ಮೇಲೆ16 ಮೀಟರ್ ಅಗಲದ ಸೇತುವೆ ನಿರ್ಮಿಸಲಾಗುತ್ತದೆ. ವಿಶೇಷ ಎಂದರೆ ಸೇತುವೆ ಎರಡೂ ಬದಿಯಲ್ಲಿ 1.50 ಮೀಟರ್ ಅಗಲದ ಫುಟ್ ಪಾತ್ ಗಳಿರಲಿವೆ.
ಇದಿಷ್ಟೇ ಅಲ್ಲ, ತೂಗು ಸೇತುವೆ ಮಾದರಿಯಲ್ಲಿ ಪ್ರತಿ ಪಿಲ್ಲರ್ ಗೂ ಕಬ್ಬಿಣದ ರೋಪ್ ಗಳನ್ನು ಕಟ್ಟಲಾಗುತ್ತದೆ. ಇದು ಸಿಗಂದೂರು ಸೇತುವೆಯ ಲುಕ್ ಹೆಚ್ಚಿಸಲಿದೆ. ಅಲ್ಲದೆ, ಸೇತುವೆ ಸಮತೋಲನದಿಂದ ಇರುವಂತೆ ನೋಡಿಕೊಳ್ಳುತ್ತದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications