ವಿಶ್ವದ ಅತೀ ಹೆಚ್ಚು ಅವಧಿಯ ಆಡಿಯೋ ಡಿವಿಡಿ ಮೇ 24 ಕ್ಕೆ ಲೋಕಾರ್ಪಣೆ
28 ಗಂಟೆ 8 ನಿಮಿಷ 38 ಸೆಕೆಂಡ್ ಧ್ವನಿಮುದ್ರಣವಾಗಿರುವ ವಿಶ್ವದ ಅತಿ ಹೆಚ್ಚು ಅವಧಿಯ ಆಡಿಯೋ ಡಿ.ವಿ.ಡಿ ಮೇ 24 ಬುಧವಾರದಂದು ಹರಿಹರದ ಶ್ರೀಸಮರ್ಥ ನಾರಾಯಣಾಶ್ರಮದಲ್ಲಿ ಲೋಕಾರ್ಪಣೆಗೊಳ್ಳಲಿದೆ.
ಸಾಗರ(ಶಿವಮೊಗ್ಗ), ಮೇ 20: ಯುವ ಸಂಗೀತ ನಿರ್ದೇಶಕ ಚಿನ್ಮಯ ಎಂ.ರಾವ್ ಅವರ ಕಂಠದಲ್ಲಿ ಒಟ್ಟು 28 ಗಂಟೆ 8 ನಿಮಿಷ 38 ಸೆಕೆಂಡ್ ಧ್ವನಿಮುದ್ರಣವಾಗಿರುವ ವಿಶ್ವದ ಅತಿ ಹೆಚ್ಚು ಅವಧಿಯ ಆಡಿಯೋ ಡಿ.ವಿ.ಡಿ ಇದೇ ಮೇ 24 ಬುಧವಾರದಂದು ಹರಿಹರದ ಶ್ರೀ ಸಮರ್ಥ ನಾರಾಯಣಾಶ್ರಮದಲ್ಲಿ ಲೋಕಾರ್ಪಣೆಗೊಳ್ಳಲಿದೆ.
ಚಿತ್ರದುರ್ಗದ ಹಿರಿಯ ಜ್ಯೋತಿಷಿ ಶ್ರೀ ಎಸ್ ಶ್ರೀಧರ ಮೂರ್ತಿ ನಿರ್ಮಾಣದ ಈ ಆಡಿಯೋ ಡಿ.ವಿ.ಡಿಯನ್ನು ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿ ಹೊರತರುತ್ತಿದೆ.

'ಶ್ರೀ ಗುರುಸಂಹಿತಾ' ಎಂಬ ಹೆಸರಿನ ಶ್ರೀ ವಾಸುದೇವಾನಂದ ಸರಸ್ವತಿ ವಿರಚಿತ ಈ ಪವಿತ್ರ ಗ್ರಂಥದಲ್ಲಿ ಒಟ್ಟು 6621 ಸಂಸ್ಕೃತ ಶ್ಲೋಕಗಳು 52 ಅಧ್ಯಾಯಗಳಲ್ಲಿದೆ. ಮೂಲತಃ ಮರಾಠಿ ಭಾಷೆಯ ಗಂಗಾಧರ ಸರಸ್ವತಿ ಎಂಬ ಕವಿಯಿಂದ ರಚಿಸಲ್ಪಟ್ಟ ಶ್ರೀ ಗುರುಚರಿತ್ರಾ ಎಂಬ ಈ ಪವಿತ್ರ ಗ್ರಂಥ ಇಂದಿಗೂ ಮಹರಾಷ್ಟ್ರದಾದ್ಯಂತ ಪ್ರಚಲಿತವಾಗಿದೆ.

ಶ್ರೀ ಗುರುಚರಿತ್ರೆಯು, ಶ್ರೀ ದತ್ತಾತ್ರೇಯರ, ಶ್ರೀಪಾದಶ್ರೀವಲ್ಲಭರ, ಶ್ರೀ ನೃಸಿಂಹ ಸರಸ್ವತಿಗಳ ಅದ್ಭುತವೂ ಪರಮಾನಂದವೂ ಆದ ದಿವ್ಯ ಚರಿತ್ರೆ. ಶ್ರೀ ವಾಸುದೇವಾನಂದ ಸರಸ್ವತಿಗಳು ದತ್ತನ ಪ್ರೇರಣೆಯಿಂದ ಸಂಸ್ಕೃತ ಭಾಷೆಗೆ ಇದನ್ನು ಅನುವಾದಿಸಿದ್ದಾರೆ.
ಅನುಷ್ಟುಪ್ ಛಂಧಸ್ಸಿನಲ್ಲಿರುವ ಒಟ್ಟು 6621 ಶ್ಲೋಕಗಳನ್ನೂ ತಮ್ಮ ಹೊನಗೋಡಿನ ಮನೆಯಲ್ಲಿರುವ ಪುಟ್ಟ ಸ್ಟೂಡಿಯೋದಲ್ಲಿ ತಾವೇ ಧ್ವನಿಮುದ್ರಣ ಮಾಡಿಕೊಂಡು ಹಾಡಿರುವ ಚಿನ್ಮಯ ಎಂ.ರಾವ್ ಇದರ ಸಂಕಲನದ ಕೆಲಸವನ್ನೂ ತಾವೇ ಮಾಡಿಕೊಂಡು ಅಂತಿಮ ಹಂತದ ಮಾಸ್ಟರ್ ಡಿ.ವಿ.ಡಿ ಸಿದ್ಧಪಡಿಸಿ ಬಿಡುಗಡೆ ಮಾಡುತ್ತಿರುವುದು ಇದರ ವಿಶೇಷ. ಯುವ ಸಂಗೀತ ನಿರ್ದೇಶಕ ಚಿನ್ಮಯ ಎಂ.ರಾವ್ ಶಿವಮೊಗ್ಗ ಜಿಲ್ಲೆಯ ಸಾಗರ ಸಮೀಪದ ಹೊನಗೋಡಿನವರು.
{promotion-urls}
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications