ಬಿ. ಎಸ್. ಯಡಿಯೂರಪ್ಪ ಸಂಪುಟ ; ಶಿವಮೊಗ್ಗದಿಂದ ಯಾರು ಸಚಿವರು?
ಶಿವಮೊಗ್ಗ, ಜುಲೈ 26 : ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಗೆ ವೇದಿಕೆ ಸಿದ್ಧವಾಗಿದೆ. ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ತವರು ಜಿಲ್ಲೆ ಶಿವಮೊಗ್ಗದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
ಶಿವಮೊಗ್ಗ ಜಿಲ್ಲೆ ಬಿಜೆಪಿಯ ಭದ್ರಕೋಟೆ. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ಅವರ ಸಂಪುಟದಲ್ಲಿ ತವರು ಜಿಲ್ಲೆಯ ಯಾವ ಶಾಸಕರು ಸ್ಥಾನ ಪಡೆಯಲಿದ್ದಾರೆ? ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿರುವ 7 ವಿಧಾನಸಭಾ ಕ್ಷೇತ್ರಗಳ ಪೈಕಿ 6 ಕ್ಷೇತ್ರಗಳಲ್ಲಿ ಬಿಜೆಪಿಯ ಶಾಸಕರಿದ್ದಾರೆ. ಇಬ್ಬರು ವಿಧಾನ ಪರಿಷತ್ ಸದಸ್ಯರು ಇದ್ದಾರೆ. ಇವರಲ್ಲಿ ಯಾರು-ಯಾರು ಸಂಪುಟ ಸೇರಲಿದ್ದಾರೆ ಎಂಬ ಲೆಕ್ಕಾಚಾರ ಆರಂಭವಾಗಿದೆ.
ಕೆ. ಎಸ್. ಈಶ್ವರಪ್ಪ, ಕುಮಾರ್ ಬಂಗಾರಪ್ಪ, ಹರತಾಳು ಹಾಲಪ್ಪ, ಆರಗ ಜ್ಞಾನೇಂದ್ರ ಪಕ್ಷದಿಂದ ಆಯ್ಕೆಯಾಗಿರುವ ಹಿರಿಯ ಶಾಸಕರು. ಆಯನೂರು ಮಂಜುನಾಥ್, ರುದ್ರೇಗೌಡ ವಿಧಾನ ಪರಿಷತ್ ಸದಸ್ಯರಾಗಿದ್ದಾರೆ. ಜಿಲ್ಲೆಗೆ ಎಷ್ಟು ಸಚಿವ ಸ್ಥಾನ ಸಿಗಲಿದೆ ಎಂಬುದು ಈಗ ಎದ್ದಿರುವ ಪ್ರಶ್ನೆ....

ಜಿಲ್ಲೆಯ ಬಿಜೆಪಿ ಶಾಸಕರ ಪಟ್ಟಿ
* ಸಾಗರ - ಹರತಾಳು ಹಾಲಪ್ಪ
* ಶಿವಮೊಗ್ಗ ನಗರ - ಕೆ. ಎಸ್. ಈಶ್ವರಪ್ಪ
* ತೀರ್ಥಹಳ್ಳಿ - ಆರಗ ಜ್ಞಾನೇಂದ್ರ
* ಸೊರಬ - ಕುಮಾರ್ ಬಂಗಾರಪ್ಪ
* ಶಿವಮೊಗ್ಗ ಗ್ರಾಮಾಂತರ - ಅಶೋಕ್ ನಾಯ್ಕ್
* ಶಿಕಾರಿಪುರ - ಬಿ. ಎಸ್. ಯಡಿಯೂರಪ್ಪ
* ಆಯನೂರು ಮಂಜುನಾಥ್ - ಪರಿಷತ್ ಸದಸ್ಯ
* ರುದ್ರೇಗೌಡ - ಪರಿಷತ್ ಸದಸ್ಯ

ಕೆ.ಎಸ್.ಈಶ್ವರಪ್ಪಗೆ ಸಚಿವ ಸ್ಥಾನ ಖಚಿತ
ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಉಪ ಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ ಯಡಿಯೂರಪ್ಪ ಸಂಪುಟ ಸೇರುವುದು ಖಚಿತ. ಇಂಧನ, ಜಲಸಂಪನ್ಮೂಲ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಶಿವಮೊಗ್ಗದಿಂದ ಸಚಿವ ಸ್ಥಾನ ಪಡೆಯುವ ಶಾಸಕರ ಪಟ್ಟಿಯಲ್ಲಿ ಈಶ್ವರಪ್ಪ ಮೊದಲ ಸ್ಥಾನದಲ್ಲಿದ್ದಾರೆ.

ಶಾಸಕ ಆರಗ ಜ್ಞಾನೇಂದ್ರ
ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಎಂದೂ ಪಕ್ಷ ನಿಷ್ಠೆ ಬದಲಿಸಿದವರಲ್ಲ. ಹಿಂದೆಯೇ ಆರಗ ಜ್ಞಾನೇಂದ್ರ ಸಚಿವರಾಗಬೇಕಿತ್ತು. ಆದರೆ, ಹಿರಿಯರು ಎಂಬ ಕಾರಣಕ್ಕೆ ಸಮ್ಮಿಶ್ರ ಸರ್ಕಾರದಲ್ಲಿ ಡಿ. ಎಚ್. ಶಂಕರಮೂರ್ತಿ, ಕೆ. ಎಸ್. ಈಶ್ವರಪ್ಪ ಸಚಿವ ಸ್ಥಾನ ಪಡೆದರು. ಈ ಬಾರಿ ಜ್ಞಾನೇಂದ್ರ ಹೆಸರು ಮುಂಚೂಣಿಯಲ್ಲಿ ಕೇಳಿ ಬರುತ್ತಿದೆ.

ಕುಮಾರ್ ಬಂಗಾರಪ್ಪ
ಕಾಂಗ್ರೆಸ್ನಲ್ಲಿದ್ದ ಕುಮಾರ್ ಬಂಗಾರಪ್ಪರನ್ನು ಬಿಜೆಪಿಗೆ ಕರೆ ತಂದಿದ್ದೆ ಯಡಿಯೂರಪ್ಪ. 2018ರ ಚುನಾವಣೆಯಲ್ಲಿ ಅವರು ಸೊರಬ ಕ್ಷೇತ್ರದಲ್ಲಿ ಗೆದ್ದಿದ್ದಾರೆ. ಎಸ್. ಎಂ. ಕೃಷ್ಣ ಅವರ ಅವಧಿಯಲ್ಲಿ ಸಚಿವರಾಗಿದ್ದ ಕುಮಾರ್ ಬಂಗಾರಪ್ಪ ಈ ಬಾರಿಯೂ ಸಚಿವರಾಗುವ ನಿರೀಕ್ಷೆ ಇದೆ.

ಹರತಾಳು ಹಾಲಪಪ್ಪಗೆ ಸಚಿವ ಸ್ಥಾನ?
ಸಾಗರ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಯಡಿಯೂರಪ್ಪ ಆಪ್ತರಲ್ಲಿ ಒಬ್ಬರು. ಹಿಂದೆ ಸಹ ಸಚಿವರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. ಈ ಬಾರಿಯೂ ಅವರ ಹೆಸರು ಕೇಳಿಬರುತ್ತಿದೆ. ಹಾಲಪ್ಪ, ಕುಮಾರ್ ಬಂಗಾರಪ್ಪ ಇಬ್ಬರಲ್ಲಿ ಒಬ್ಬರು ಸಚಿವರಾಗುವುದು ಖಂಡಿತ.

ಆಯನೂರು ಮಂಜುನಾಥ್
ಮಾಜಿ ಸಂಸದ ಆಯನೂರು ಮಂಜುನಾಥ್ ಮತ್ತು ರುದ್ರೇಗೌಡ ವಿಧಾನ ಪರಿಷತ್ ಸದಸ್ಯರು. ಇಬ್ಬರೂ ಸಹ ಯಡಿಯೂರಪ್ಪ ಆಪ್ತರು. ಈ ಇಬ್ಬರಲ್ಲಿ ಯಾರು ಸಚಿವರಾಗಬಹುದು? ಎಂಬ ಚರ್ಚೆಗಳು ನಡೆದಿವೆ.
-
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
ಇಂಧನ ಪೂರೈಕೆ ಕೊರತೆ ಭೀತಿ: 2026ರಲ್ಲಿ ನೀವು ಖರೀದಿಸಬಹುದಾದ ಟಾಪ್ ಎಲೆಕ್ಟ್ರಿಕ್ ಸ್ಕೂಟರ್ ಗಳು ಇಲ್ಲಿವೆ -
Water4Life: ಅತ್ಯಮೂಲ್ಯ ಜಲಮೂಲಗಳ ಸಂರಕ್ಷಣೆಗೆ ರಿಲಯನ್ಸ್ ಫೌಂಡೇಷನ್ನಿಂದ ಜನ ಚಳವಳಿ, ಡಿಟೇಲ್ಸ್ ಇಲ್ಲಿದೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications