ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅವಿಶ್ವಾಸ ಮಂಡನೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ: ಯಡಿಯೂರಪ್ಪ

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜುಲೈ.20: ಸಂಸತ್ ನಲ್ಲಿ ವಿರೋಧ ಪಕ್ಷಗಳು ಒಂದಾಗಿ ಅವಿಶ್ವಾಸ ಮಂಡನೆ ಮಾಡಿರುವುದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸೊರಬ ಮತ್ತು ಸಾಗರದ ಇತರೆ ಭಾಗಗಳಲ್ಲಿ ಮಳೆಯಿಂದಾಗಿ ಉಂಟಾಗಿರುವ ಬೆಳೆ ನಾಶ ಹಾಗೂ ಹಾನಿಗಳ ಬಗ್ಗೆ ವೀಕ್ಷಣೆ ನಡೆಸಿ ನಂತರ ಮಾದ್ಯಮಗಳೊಂದಿಗೆ ಮಾತನಾಡಿದರು.

ಅವಿಶ್ವಾಸ ನಿರ್ಣಯ LIVE: ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಮಂಡನೆಅವಿಶ್ವಾಸ ನಿರ್ಣಯ LIVE: ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಮಂಡನೆ

ಭಾರತ ಪ್ರಪಂಚದಲ್ಲಿ 6 ನೇ ಶ್ರೀಮಂತ ರಾಷ್ಟ್ರವಾಗಿ ಬೆಳೆಯುತ್ತಿದೆ. ಜಿಎಸ್ ಟಿ ಇಂದ ದೇಶದ ಆರ್ಥಿಕ ಸ್ಥಿತಿ ಉತ್ತಮಗೊಂಡಿದೆ. ಹೀಗಿರುವಾಗ ವಿರೋಧ ಪಕ್ಷಗಳು ಸಮಯ ಹಾಳು ಮಾಡಲು ಸಂಸತ್ ನಲ್ಲಿ ಅವಿಶ್ವಾಸ ಮಂಡನೆ ಮಾಡಿರುವುದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲವೆಂದು ಬಿ.ಎಸ್.ಯಡಿಯೂರಪ್ಪ ಹೇಳಿದರು.

Yeddyurappa says opposition parties spoil time in Parliament

ಸಮಸ್ಯೆ ಇದ್ದಿದ್ದರೆ ಕುಳಿತು ಚರ್ಚೆ ಮಾಡಬಹುದಿತ್ತು. ಆದರೆ ಆ ಬಗ್ಗೆ ವಿಚಾರ ಮಾಡದ ವಿರೋಧ ಪಕ್ಷದವರು ಕೇವಲ ಸಮಯ ಹಾಳು ಮಾಡುವ ಕೆಲಸಮಾಡಿದ್ದಾರೆ. ನಮಗೆ ಸ್ಪಷ್ಟ ಬಹುಮತವಿದೆ. ಆದರೂ ಇಂತಹ ಕೆಲಸಕ್ಕೆ ವಿರೋಧ ಪಕ್ಷ ಕೈ ಹಾಕಿದೆ. ಅವರು ಗೆಲ್ಲೊಲ್ಲ ಎಂದರು.

ಸೊರಬದಲ್ಲಿ ಅತಿ ಹೆಚ್ಚು ಬೆಳೆ ನಾಶವಾಗಿದೆ. ಸುಮಾರು 5 ಸಾವಿರ ಎಕರೆ ಬೆಳೆ ನಾಶಗೊಂಡಿದೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಸಂಕ ಕಾಲುವೆಯಲ್ಲಿ ಸಾವನ್ನಪ್ಪಿದ ವಿದ್ಯಾರ್ಥಿನಿಗೂ ಪರಿಹಾರ ನೀಡಬೇಕು ಹಾಗೂ ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಇರಲು ತಿಳಿಸಿದರು.

English summary
Former Chief Minister BS Yeddyurappa said that opposition parties are making an no confidence motion in Parliament to spoil time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X