ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗಕ್ಕೆ ಭರ್ಜರಿ ಉಡುಗೊರೆ ಕೊಟ್ಟ ಸಿಎಂ ಯಡಿಯೂರಪ್ಪ

|
Google Oneindia Kannada News

Recommended Video

ಶಿವಮೊಗ್ಗಕ್ಕೆ ಭರ್ಜರಿ ಉಡುಗೊರೆ ಕೊಟ್ಟ ಸಿಎಂ ಯಡಿಯೂರಪ್ಪ | B. S. Yeddyurappa

ಶಿವಮೊಗ್ಗ, ಆಗಸ್ಟ್ 16 : ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗಕ್ಕೆ ಹಲವಾರು ಕೊಡುಗೆ ನೀಡಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ 1, 279 ಕೋಟಿ ರೂ. ಗಳ ಯೋಜನೆಗೆ ಒಪ್ಪಿಗೆ ನೀಡಲಾಗಿದೆ. ವಿವಿಧ ತಾಲೂಕುಗಳಿಗೆ ಸೇರಿದ ಯೋಜನೆಗಳು ಇದರಲ್ಲಿವೆ.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಯೋಜನೆಗಳಿಗೆ ಒಪ್ಪಿಗೆ ಕೊಡಲಾಗಿದೆ. ಶಿವಮೊಗ್ಗಕ್ಕೆ ಭೇಟಿ ನೀಡಿದಾಗ ಯಡಿಯೂರಪ್ಪ 50 ಕೋಟಿ ರೂ.ಗಳನ್ನು ಜಿಲ್ಲೆಯ ಅಭಿವೃದ್ಧಿಗೆ ಘೋಷಣೆ ಮಾಡಿದ್ದರು.

ಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪಅಂಜನಾಪುರ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಯಡಿಯೂರಪ್ಪ

ಆಗಸ್ಟ್ 13ರಂದು ಶಿಕಾರಿಪುರದಲ್ಲಿ ಮಾತನಾಡಿದ್ದ ಯಡಿಯೂರಪ್ಪ, "ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಲಾಗುತ್ತದೆ. ಶಿಕಾರಿಪುರ ಹಾಗೂ ಸೊರಬ ತಾಲೂಕಿನ ನೀರಾವರಿ ಯೋಜನೆಗಳಿಗೆ 1, 300 ಕೋಟಿ. ರೂ. ಬಿಡುಗಡೆಯಾಗಿದೆ" ಎಂದು ಹೇಳಿದ್ದರು.

ಚಿತ್ರಗಳು : ಶಿವಮೊಗ್ಗದಲ್ಲಿ ಯಡಿಯೂರಪ್ಪ ಪ್ರವಾಹ ಪರಿಸ್ಥಿತಿ ವೀಕ್ಷಣೆಚಿತ್ರಗಳು : ಶಿವಮೊಗ್ಗದಲ್ಲಿ ಯಡಿಯೂರಪ್ಪ ಪ್ರವಾಹ ಪರಿಸ್ಥಿತಿ ವೀಕ್ಷಣೆ

Yediyurappa Big Gift For Shivamogga District

ಯೋಜನೆಗಳ ವಿವರ

* ಶಿವಮೊಗ್ಗ-ಶಿಕಾರಿಪುರ-ರಾಣೆಬೆನ್ನೂರು ರೈಲ್ವೆ ಮಾರ್ಗ 956 ಕೋಟಿ
* ಸಾಗರ ತಾಲೂಕಿನ 66 ಕೆರೆಗಳನ್ನು ವರದಾ ನದಿ ನೀರಿನ ಮೂಲಕ ತುಂಬಿಸುವುದು 285 ಕೋಟಿ
* ಚಿಕ್ಕ ವಿಮಾನಗಳ ಲ್ಯಾಂಡಿಂಗ್‌ಗಾಗಿ ರನ್‌ ವೇ ನಿರ್ಮಾಣ 38 ಕೋಟಿ

English summary
In a cabinet meeting Karnataka Chief Minister B.S.Yediyurappa approved for various projects to political home ground Shivamogga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X