ಯಡಿಯೂರಪ್ಪ ಕುಟುಂಬದಲ್ಲಿ ವಿವಾಹದ ಸಂಭ್ರಮ, ಮೊಮ್ಮಗನ ನಿಶ್ಚಿತಾರ್ಥ
ಶಿವಮೊಗ್ಗ, ಮಾರ್ಚ್ 25: ಮಾಜಿ ಮುಖ್ಯಮಂತ್ರಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಬಿ. ಎಸ್. ಯಡಿಯೂರಪ್ಪ ಕುಟುಂಬದಲ್ಲಿ ವಿವಾಹ ಸಂಭ್ರಮ. ಯಡಿಯೂರಪ್ಪ ಮೊಮ್ಮಗ, ಶಿವಮೊಗ್ಗದ ಸಂಸದ ಬಿ. ವೈ. ರಾಘವೇಂದ್ರ ಪುತ್ರ ಸುಭಾಷ್ ನಿಶ್ಚಿತಾರ್ಥ ಕಲಬುರಗಿಯಲ್ಲಿ ಸೋಮವಾರ ನಡೆದಿದೆ. ವಿವಿಧ ಪಕ್ಷಗಳ ಹಲವು ನಾಯಕರು, ಯಡಿಯೂರಪ್ಪ ಅಭಿಮಾನಿಗಳು ನಿಶ್ಚಿತಾರ್ಥದಲ್ಲಿ ಪಾಲ್ಗೊಂಡು ಶುಭ ಹಾರೈಸಿದರು.
ಬಿ. ವೈ. ರಾಘವೇಂದ್ರ ಪುತ್ರ ಸುಭಾಷ್ ಮತ್ತು ಶ್ರಾವಣಾ ವಿವಾಹ ನಿಶ್ಚಿತಾರ್ಥ ಸೋಮವಾರ ಕಲಬುರಗಿಯಲ್ಲಿ ನಡೆಯಿತು. ಬಿ. ಎಸ್. ಯಡಿಯೂರಪ್ಪ ನಿಶ್ಚಿತಾರ್ಥದಲ್ಲಿ ಪಾಲ್ಗೊಳ್ಳಲು ಬಿ. ವೈ. ವಿಜಯೇಂದ್ರ ಜೊತೆ ಭಾನುವಾರವೇ ಕಲಬುರಗಿ ನಗರಕ್ಕೆ ಆಗಮಿಸಿ ವಾಸ್ತವ್ಯ ಹೂಡಿದ್ದರು.

ಸೋಮವಾರ ಬಿ. ವೈ. ರಾಘವೇಂದ್ರ ಸಹೋದರ, ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ, ವಿಧಾನ ಪರಿಷತ್ ಸದಸ್ಯರಾದ ಡಾ. ಬಿ. ಜಿ. ಪಾಟೀಲ್, ಎನ್. ರವಿ ಕುಮಾರ್ ಸೇರಿದಂತೆ ಹಾಲಿ, ಮಾಜಿ ಶಾಸಕರು ಕಲಬುರಗಿ ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ನಿಶ್ಚಿತಾರ್ಥ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಕಲಬುರಗಿಯೊಂದಿಗೆ ಸಂಬಂಧ: ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಪುತ್ರ ಸುಭಾಷ್ ಕಲಬುರಗಿಯ ಮಹಾದಾಸೋಹಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜಪ್ಪ ಅಪ್ಪ-ದೀಪಾಲಿ ದಂಪತಿಯ ಪುತ್ರಿ ಶ್ರಾವಣ ಅವರನ್ನು ವಿವಾಹವಾಗುತ್ತಿದ್ದಾರೆ. ನಿಶ್ಚಿತಾರ್ಥ ನಡೆದಿದ್ದು, ವಿವಾಹದ ದಿನಾಂಕ, ಸ್ಥಳವನ್ನು ಇನ್ನೂ ಸಹ ತಿಳಿದುಬಂದಿಲ್ಲ. ಈ ನಿಶ್ಚಿತಾರ್ಥದ ಮೂಲಕ ಯಡಿಯೂರಪ್ಪ ಕುಟುಂಬ ಕಲಬುರಗಿ ಜೊತೆ ಮತ್ತೆ ಸಂಬಂಧವನ್ನು ಬೆಳೆಸಿದೆ.
ಭಾನುವಾರ ಕಲಬುರಗಿಯಲ್ಲಿ ಮಾತನಾಡಿದ್ದ ಯಡಿಯೂರಪ್ಪ, "ಈಗಾಗಲೇ ಸೊಸೆ (ಬಿ. ವೈ. ವಿಜಯೇಂದ್ರ ಪತ್ನಿ) ಕಲಬುರಗಿಯವರೇ ಆಗಿದ್ದಾರೆ. ಈಗ ಮೊಮ್ಮಗನಿಗೆ ಸಹ ಕಲಬುರಗಿ ಶರಣಬಸವೇಶ್ವರ ಸಂಸ್ಥಾನದ ಲಿಂಗರಾಜಪ್ಪ ಅಪ್ಪ ಅವರ ಸುಪುತ್ರಿಯೊಂದಿಗೆ ವಿವಾಹ ನಿಶ್ಚಿಯವಾಗಿದೆ. ಇಂತಹ ಸಂಬಂಧಗಳು ಪಕ್ಷ ಬೆಳೆಯಲು ಸಹ ಅನುಕೂಲವಾಗುತ್ತದೆ" ಎಂದು ಹೇಳಿದ್ದರು.
"ಕಲಬುರಗಿಯ ಜೊತೆ ಮತ್ತೆ ಸಂಬಂಧ ಬೆಳೆಸುತ್ತಿರುವುದು ಸಂತಸ ತಂದಿದೆ. ಇಂತಹ ಸಂಬಂಧಗಳು ರಾಜಕೀಯವಾಗಿ ಬೆಳೆಯಲು ಸಹ ಪೂರಕವಾಗುತ್ತದೆ" ಎಂದು ಬಿ. ಎಸ್. ಯಡಿಯೂರಪ್ಪ ತಿಳಿಸಿದ್ದರು.
ಯಡಿಯೂರಪ್ಪ ಜೊತೆ ಆಗಮಿಸಿದ್ದ ಬಿ. ವೈ. ವಿಜಯೇಂದ್ರ ಮಾತನಾಡಿ, "ಯಡಿಯೂರಪ್ಪ ಅವರಿಗೂ ಕಲಬುರಿಗೂ ಅವಿನಾಭಾವ ಸಂಬಂಧವಿದೆ. ನಾನು ಕೂಡ ಇಲ್ಲಿಯ ಅಳಿಯನಾಗಿದ್ದೇನೆ. ನನ್ನ ಅಣ್ಣನ ಮಗನಿಗೆ ಲಿಂಗರಾಜಪ್ಪ ಅಪ್ಪ ಅವರ ಮಗಳನ್ನು ತರುತ್ತಿದ್ದೇವೆ" ಎಂದರು.
ಬಿ. ವೈ. ರಾಘವೇಂದ್ರ ಶಿವಮೊಗ್ಗದ ಸಂಸದರು. ಅವರ ಸಹೋದರ ಬಿ. ವೈ. ವಿಜಯೇಂದ್ರ ಕರ್ನಾಟಕ ಬಿಜೆಪಿಯ ಅಧ್ಯಕ್ಷರು ಮತ್ತು ಶಿಕಾರಿಪುರದ ಶಾಸಕರು. ಬಿ. ವೈ. ರಾಘವೇಂದ್ರ ಪುತ್ರ ಸುಭಾಷ್ ರಾಜಕೀಯದಲ್ಲಿಲ್ಲ. ಮಂದಿನ ದಿನಗಳಲ್ಲಿ ರಾಜಕೀಯಕ್ಕೆ ಪ್ರವೇಶ ಮಾಡಲಿದ್ದಾರೆಯೇ? ಎಂದು ಕಾದು ನೋಡಬೇಕಿದೆ.
ಸದ್ಯದ ಮಾಹಿತಿಗಳ ಪ್ರಕಾರ ಬಿ. ವೈ. ರಾಘವೇಂದ್ರ ಪುತ್ರ ಸುಭಾಷ್ ಮತ್ತು ಶ್ರಾವಣಾ ವಿವಾಹ ಜೂನ್ ತಿಂಗಳಿನಲ್ಲಿ ಬೆಂಗಳೂರಿನಲ್ಲಿ ನಡೆಯಲಿದೆ. ಕಲಬುರಗಿಯಲ್ಲಿ ನಡೆದ ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ವಿವಿಧ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications