ಸಿಎಂ ಸ್ಥಾನಕ್ಕೆ ಬಿಎಸ್ವೈ ರಾಜೀನಾಮೆ ನೀಡಲು ಕಾರಣರಾದ ನಾಲ್ವರ ಹೆಸರು ಬಹಿರಂಗ
ಶಿವಮೊಗ್ಗ, ಜುಲೈ 25: ನಾಳೆಗೆ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಒಂದು ವರ್ಷ. ಆದರೂ, ಅವರು ವಿದಾಯ ಭಾಷಣದಲ್ಲಿ ಹಾಕಿದ ಕಣ್ಣೀರು, ರಾಜೀನಾಮೆ ನೀಡುವಂತ ಪ್ರಸಂಗ ಎದುರಾದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ.
ಎರಡು ದಿನಗಳ ಕೆಳಗೆ ಯಡಿಯೂರಪ್ಪನವರು ಚುನಾವಣಾ ರಾಜಕೀಯದಿಂದ ಹಿಂದಕ್ಕೆ ಸರಿಯುವುದಾಗಿ ಘೋಷಿಸಿದ್ದರು. ತಮ್ಮ ಪುತ್ರ ಬಿ.ವೈ.ವಿಜಯೇಂದ್ರ ಅವರನ್ನು ಶಿಕಾರಿಪುರದಿಂದ ಕಣಕ್ಕಿಳಿಸುವ ಇಂಗಿತವನ್ನು ವ್ಯಕ್ತ ಪಡಿಸಿದ್ದರು.
ಯಡಿಯೂರಪ್ಪನವರ ನಿವೃತ್ತಿಯ ಬಗ್ಗೆ ಕಾಂಗ್ರೆಸ್ಸಿನ ಹಲವು ನಾಯಕರು ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಬಿಜೆಪಿಯ ವರಿಷ್ಠರು ಅವರನ್ನು ಸರಿಯಾಗಿ ನಡೆಸಿಕೊಂಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರಾದಿಯಾಗಿ ಹಲವರು ಬೇಸರ ವ್ಯಕ್ತ ಪಡಿಸಿದ್ದಾರೆ.
ಒಂದು ಕಾಲದಲ್ಲಿ ಬಿಜೆಪಿಯಲ್ಲಿದ್ದು, ಟಿಕೆಟ್ ಸಿಗದ ನಂತರ ಕಾಂಗ್ರೆಸ್ ಸೇರಿಕೊಂಡು ಈಗ ವಕ್ತಾರರಾಗಿರುವ ಬೇಳೂರು ಗೋಪಾಲಕೃಷ್ಣ, ಯಡಿಯೂರಪ್ಪನವರ ನಿವೃತ್ತಿಯ ಬಗ್ಗೆ ಮಾತನಾಡಿದ್ದಾರೆ. ನಾಲ್ವರು ಪಾಪಿಗಳಿಂದ ಬಿಎಸ್ವೈ ಸಿಎಂ ಸ್ಥಾನದಿಂದ ಕೆಳಗಿಳಿಯುವಂತಾಯಿತು ಎಂದು ಹೇಳಿದ್ದಾರೆ.

ಕಣ್ಣೀರು ಹಾಕಿ ಇಳಿಸಿದ್ದಾರೆ - ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿಕೆ
"ಯಡಿಯೂರಪ್ಪನವರು ನಿವೃತ್ತಿ ಘೋಷಿಸಿರುವುದು ಸಂಚಲನವನ್ನು ಮೂಡಿಸಿದೆ. ಬಿಜೆಪಿಯನ್ನು ಕಟ್ಟಿ, ಬೆಳೆಸಿ ಈಶ್ವರಪ್ಪನಂತವರನ್ನು ಮುಖಂಡರನ್ನಾಗಿ ಮಾಡಿದ್ದ ಯಡಿಯೂರಪ್ಪನವರನ್ನು ನಿವೃತ್ತಿಗೊಳಿಸಲಾಗಿದೆ. ಈ ಹಿಂದೆ ಮುಖ್ಯಮಂತ್ರಿ ಪದವಿಯಿಂದಲೂ ಇಳಿಸಿದರು, ಸುಮ್ಮನೇ ಇಳಿಸದೇ ಕಣ್ಣೀರು ಹಾಕಿ ಇಳಿಸಿದ್ದಾರೆ. ಯಡಿಯೂರಪ್ಪನವರಿಗೆ ಇಂತಹ ಪರಿಸ್ಥಿತಿಯನ್ನು ತಂದದ್ದು ಬೇರೆಯಾರೂ ಅಲ್ಲ, ಅವರದೇ ಪಕ್ಷದ ನಾಲ್ವರು ಪಾಪಿಗಳು" ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

ಯಡಿಯೂರಪ್ಪನವರ ರಾಜಕೀಯ ಭವಿಷ್ಯ ಹಾಳು ಮಾಡಿದ್ದು ನಾಲ್ವರು
"ಯಡಿಯೂರಪ್ಪನವರ ರಾಜಕೀಯ ಭವಿಷ್ಯ ಹಾಳು ಮಾಡಿದ್ದು ನಾಲ್ವರು. ಅವರು ಯಾರೆಂದರೆ, ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ಕೆ.ಎಸ್.ಈಶ್ವರಪ್ಪ. ಯಡಿಯೂರಪ್ಪನವರ ಕಣ್ಣೀರಿನ ಶಾಪ ಇವರನ್ನೆಲ್ಲಾ ಸುಮ್ಮನೆ ಬಿಡುವುದಿಲ್ಲ"ಎಂದು ಬೇಳೂರು ಗೋಪಾಲಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ.

ವೃಥಾ ಆರೋಪವನ್ನು ದೆಹಲಿಯಲ್ಲಿ ಕಣ್ಣೀರು ಸುರಿಸಿ ಮಾಡುತ್ತಿದ್ದರು
"ಯಡಿಯೂರಪ್ಪನವರು ಹಿರಿಯರಿದ್ದರು, ಇನ್ನಷ್ಟು ದಿನ ಮುಖ್ಯಮಂತ್ರಿಯಾಗಿದ್ದರೆ ನಮ್ಮ ಜಿಲ್ಲೆ ಇನ್ನಷ್ಟು ಅಭಿವೃದ್ದಿಯನ್ನು ಕಾಣಬಹುದಿತ್ತು. ಆದರೆ, ಅವರನ್ನು ಬಲವಂತದಿಂದ ಕೆಳಗಿಸಲಾಯಿತು. ಅವರ ಬಗ್ಗೆ ವೃಥಾ ಆರೋಪವನ್ನು ದೆಹಲಿಯಲ್ಲಿ ಕಣ್ಣೀರು ಸುರಿಸಿ ಈ ನಾಲ್ವರು ಮುಖಂಡರು ಮಾಡುತ್ತಿದ್ದರು. ಇದನ್ನೆಲ್ಲಾ ತಿರುಗಿ ಎದುರಿಸುವ ದಿನ ಖಂಡಿತ ಬರಲಿದೆ"ಎಂದು ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

ಯಡಿಯೂರಪ್ಪನವರು ಜನನಾಯಕ ಎನ್ನುವುದರಲ್ಲಿ ಎರಡು ಮಾತಿಲ್ಲ
"ಯಡಿಯೂರಪ್ಪನವರು ಜನನಾಯಕ ಎನ್ನುವುದರಲ್ಲಿ ಎರಡು ಮಾತಿಲ್ಲ. ನಾನದನ್ನು ಒಪ್ಪಿಕೊಳ್ಳುತ್ತೇನೆ. ಬಿಜೆಪಿಯಲ್ಲಿ ಒಳಹೊಕ್ಕು ಬಂದಿದ್ದೇನೆ. ಅವರಲ್ಲಿ ಗುಂಪುಗಾರಿಕೆ ಜಾಸ್ತಿ, ಒಂದು ಸಂಘ ಪರಿವಾರದ ಶಕ್ತಿ. ಮಧ್ಯದಲ್ಲಿ ಬಂದು ಸೇರಿಕೊಂಡವರದ್ದು ಒಂದು ಗುಂಪಿದೆ. ಕೊನೆಗೆ, ಬಾಂಬೆ ಫ್ರೆಂಡ್ಸ್ ಗುಂಪೊಂದಿದೆ. ಗರ್ಭಗುಡಿ ಸಂಸ್ಕೃತಿಯಂತೆ ಬಿಜೆಪಿಯಲ್ಲಿ ಸಂಘ ನಿಷ್ಟರನ್ನು ಹೊರತು ಪಡಿ
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?











Click it and Unblock the Notifications