ಶಿವಮೊಗ್ಗ: ಚಲಿಸುತ್ತಿದ್ದ ರೈಲಿನಿಂದ ತುಂಗಾ ನದಿಗೆ ಬಿದ್ದ ಯುವತಿ
ಶಿವಮೊಗ್ಗ, ನವೆಂಬರ್ 13: ಚಲಿಸುತ್ತಿರುವ ರೈಲಿನಿಂದ ತುಂಗಾ ನದಿಗೆ ಯುವತಿಯೊಬ್ಬಳು ಬಿದ್ದಿರುವ ಘಟನೆ ನ.12ರ ಗುರುವಾರ ರಾತ್ರಿ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಜನಶತಾಬ್ದಿ ರೈಲಿನಿಂದ ಯುವತಿ ನದಿಗೆ ಬಿದ್ದಿದ್ದಾಳೆ.
ಗುರುವಾರ ರಾತ್ರಿ ಸುಮಾರು 10.45ಕ್ಕೆ ಈ ಘಟನೆ ನಡೆದಿದ್ದು, ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಬರುವ ರೈಲಿನಲ್ಲಿ ಯುವತಿ ಸಹನಾ (24) ತನ್ನ ತಂದೆ ತಾಯಿ ಜೊತೆ ಪ್ರಯಾಣಿಸುತ್ತಿದ್ದಳು. ರೈಲು ಶಿವಮೊಗ್ಗದ ತುಂಗಾ ಸೇತುವೆ ಮೇಲೆ ಬರುತ್ತಿದ್ದ ವೇಳೆಗೆ ಸಹನಾ ನದಿಗೆ ಬಿದ್ದಿದ್ದಾಳೆ.
ಯುವತಿ ಗಾಡಿಕೊಪ್ಪದ ನಿವಾಸಿಯಾಗಿದ್ದು, ನದಿಗೆ ಹಾರಿದ್ದಾಳೋ ಅಥವಾ ರೈಲಿನಿಂದ ಕಾಲು ಜಾರಿ ಬಿದ್ದಿದ್ದಾಳೋ ಎಂಬುದರ ಬಗ್ಗೆ ಮಾಹಿತಿ ತಿಳಿದುಬರಬೇಕಿದೆ.

ಘಟನೆ ನಡೆದ ತಕ್ಷಣವೇ ಯುವತಿಯ ತಂದೆ ತಾಯಿ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೈಲ್ವೆ ಪೊಲೀಸ್ ಸಿಬ್ಬಂದಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ ಶೋಧಕಾರ್ಯದಲ್ಲಿ ತೊಡಗಿದ್ದಾರೆ. ನದಿಯಲ್ಲಿ ನೀರಿನ ಪ್ರಮಾಣ ನಿರೀಕ್ಷೆಯಷ್ಟು ಇಲ್ಲವಾದುದರಿಂದ ಬೋಟ್ ಮೂಲಕ ಹೋಗುವುದು ಅಗ್ನಿಶಾಮಕದಳದವರಿಗೆ ಕಷ್ಟವಾಗಿದೆ.
ಶೋಧಕಾರ್ಯದಲ್ಲಿ ಡಿಎಫ್ ಒ ಅಶೋಕ್ ಕುಮಾರ್, ಠಾಣಾಧಿಕಾರಿ ಪ್ರವೀಣ್ ಸಿಬ್ಬಂದಿ ದೇವೇಂದ್ರನಾಯಕ್, ಸತೀಶ್ ಮಂಜುನಾಥ್, ರಮೇಶ್, ಯೋಗೀಶ್ ಹಾಗೂ ವಿನಯ್ ಶೋಧಕಾರ್ಯದಲ್ಲಿ ತೊಡಗಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications