ಸಿಂಗಪುರ ಸಂಸತ್ತಿನಲ್ಲಿ ನೆಹರೂ ಹೊಗಳಿದ ಪ್ರಧಾನಿ ಲೂಂಗ್
ಸಿಂಗಪುರ, ಫೆಬ್ರವರಿ 17: ಸಿಂಗಾಪುರ ಸಂಸತ್ತಿನಲ್ಲಿ ಜವಾಹರ್ಲಾಲ್ ನೆಹರೂ ಅವರನ್ನು ಉಲ್ಲೇಖ ಮಾಡಲಾಗಿದ್ದು, ಪ್ರಜಾಪ್ರಭುತ್ವದ ಕುರಿತು ಅವರ ಚಿಂತನೆಯನ್ನು ಪ್ರಧಾನಿ ಲೀ ಸೀನ್ ಲೂಂಗ್ ಹೊಗಳಿದ್ದಾರೆ.
ಉನ್ನತ ಚಿಂತನೆಗಳು ಮತ್ತು ಶ್ರೇಷ್ಠ ಮೌಲ್ಯಗಳ ಆಧಾರದಲ್ಲಿ ಹೆಚ್ಚಿನ ರಾಷ್ಟ್ರಗಳು ನಿರ್ಮಾಣಗೊಂಡಿರುತ್ತವೆ. ಆದರೆ ಸಮಯ ಕಳೆದಂತೆ ಹಾಗೆಯೇ ಉಳಿಯುವುದಿಲ್ಲ, ದಶಕಗಳು ಮತ್ತು ತಲೆಮಾರುಗಳು ಕಳೆದಂತೆ ಸ್ಥಾಪಕ ನಾಯಕರನ್ನು ಮತ್ತು ಆರಂಭದ ತಲೆಮಾರನ್ನು ಮೀರಿ ವಿಚಾರಗಳು ಬದಲಾಗುತ್ತವೆ ಎಂದಿದ್ದಾರೆ.
ಸ್ವತಂತ್ರ ಭಾರತಕ್ಕೆ ಅತ್ಯುನ್ನತ ಆದರ್ಶ ಮತ್ತು ಶ್ರೇಷ್ಠ ಮೌಲ್ಯಗಳ ಅಡಿಪಾಯ ಹಾಕಲಾಗಿದೆ ಎಂದು ಲಿ ಸೇನ್ ಲೂಂಗ್ ಹೇಳಿದ್ದಾರೆ. ಸಿಂಗಾಪುರ್ನ ವರ್ಕರ್ಸ್ ಪಾರ್ಟಿಯ ಮಾಜಿ ಸಂಸದೆ ರಯೀಸಾ ಖಾನ್ ಅವರು ಇತ್ತೀಚೆಗೆ ತನ್ನ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಸಂಸತ್ತಿನಲ್ಲಿ ಹೇಳಿದ್ದರು. ಆದರೆ ಅದು ಕಟ್ಟುಕತೆಯಾಗಿತ್ತು. ನಂತರ ಇದೇ ಎಡವಟ್ಟಿನ ಕಾರಣಕ್ಕೆ ಅವರು ರಾಜೀನಾಮೆಯನ್ನೂ ಕೊಟ್ಟಿದ್ದಾರೆ.

ಆದರೆ ರಯೀಸಾ ಖಾನ್ ಹೇಳಿಕೆಗಳನ್ನು ಪರಿಶೀಲಿಸಿ, ತನಿಖೆ ನಡೆಸುವ ಸಂಬಂಧ ಒಂದು ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿ ಫೆ.10ರಂದು ತನ್ನ ತನಿಖಾ ವರದಿ ನೀಡಿದ್ದು, ಸದ್ಯ ಸಿಂಗಾಪುರ ಸಂಸತ್ತಿನಲ್ಲಿ ಈ ವರದಿ ಮೇಲೆ ಚರ್ಚೆ ನಡೆಯುತ್ತಿದೆ. ಇದೇ ವೇಳೆ ಮಾತನಾಡಿದ ಪ್ರಧಾನಮಂತ್ರಿ ಭಾರತ ಮತ್ತು ಅದರ ಮೊದಲ ಪ್ರಧಾನಮಂತ್ರಿ ಬಗ್ಗೆ ಉಲ್ಲೇಖಿಸಿದ್ದಾರೆ.
ಉತ್ಸಾಹದ ತೀವ್ರತೆಯಲ್ಲಿ ಹೋರಾಟಗಳು ಮೊಳಕೆಯೊಡೆಯುತ್ತವೆ, ಸ್ವಾತಂತ್ರ್ಯಕ್ಕಾಗಿ ಹೋರಾಟದಲ್ಲಿ ಜಯಸಾಧಿಸಿದ ನಾಯಕರು, ಸಾಮಾನ್ಯವಾಗಿ ಮಹಾನ್ ಧೈರ್ಯ, ಬಹುಸಂಸ್ಕೃತಿ ಮತ್ತು ಅಪರಿಮಿತ ಸಾಮರ್ಥ್ಯಗಳನ್ನು ಹೊಂದಿದ್ದ ಅಸಾಧಾರಣ ವ್ಯಕ್ತಿಗಳಾಗಿದ್ದರು.
ಅವರು ಕಠಿಣ ಪರಿಸ್ಥಿತಿಯನ್ನು ಎದುರಿಸಿದರು, ರಾಷ್ಟ್ರ ನಾಯಕರಾಗಿ ಹೊರಹೊಮನ್ಮಿದರು, ಡೇವಿಡ್ ಬೆನ್ ಗುರಿಯನ್ ಜವಾಹರ್ಲಾಲ್ ನೆಹರು ಅಂತಹ ನಾಯಕರು, ನಮ್ಮ ರಾಷ್ಟ್ರದಲ್ಲಾಂತಹ ನಾಯಕರು ಇದ್ದಾರೆ ಎಂದು ಲೂಂಗಾ ತಿಳಿಸಿದ್ದಾರೆ.
ಹೆಚ್ಚಿನ ರಾಜಕೀಯ ವ್ಯವಸ್ಥೆಗಳಲ್ಲಿ ಸ್ಥಾಪಕ ನಾಯಕರ ಆಶಯಗಳು ಕಡೆಗಣನೆಗೆ ಒಳಗಾಗುತ್ತವೆ, ಬೆನ್ ಗುರಿಯನ್ ಅವರ ಇಸ್ರೇಲ್ ಚಿತ್ರಣವು ಬದಲಾಗಿದೆ. ಎರಡು ವರ್ಷದಲ್ಲಿ ನಾಲ್ಕು ಚುನಾವಣೆಗಳನ್ನು ಕಂಡಿದೆ. ಹಿರಿಯ ರಾಜಕಾರಣಿಗಳು ಮತ್ತು ಅಧಿಕಾರಿಗಳು ಗಂಭೀರ ಅಪರಾಧ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಕೆಲವರು ಜೈಲು ಪಾಲಾಗಿದ್ದಾರೆ ಎಂದರು.
ಹಾಗೆಯೇ ನೆಹರೂ ಅವರು ಭಾರತದಲ್ಲಿ, ಮಾಧ್ಯಮ ವರದಿಗಳ ಪ್ರಕಾರ ಲೋಕಸಭೆಯ ಸುಮಾರು ಅರ್ಧದಷ್ಟು ಸಂಸದರು ಅತ್ಯಾಚಾರ ಮತ್ತು ಕೊಲೆ ಸೇರಿದಂತೆ ಅನೇಕ ಗಂಭೀರ ಅಪರಾಧ ಪ್ರಕರಣಗಳು ಕೋರ್ಟ್ನಲ್ಲಿ ಬಾಕಿ ಇವೆ. ಹೆಚ್ಚಿನವು ರಾಜಕೀಯ ಪ್ರೇರಿತ ಆರೋಪಗಳು ಎಂದು ಕೇಳಿಬಂದಿವೆ ಎಂದು ಅವರು ಹೇಳಿದ್ದಾರೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications