ವಿಡಿಯೋ: ಟೈಗರ್ ಜಿಂದಾ ಹೈ ಎಂದು ಅಮರ್ ಸಿಂಗ್ ಹೇಳಿದ್ದೇಕೆ?
ಸಿಂಗಪುರ, ಮಾರ್ಚ್ 03: ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ ಅವರು ತಮ್ಮ ಸಾವಿನ ಬಗ್ಗೆ ಹಬ್ಬಿದ್ದ ಗಾಳಿಸುದ್ದಿಗೆ ಸ್ಪಷ್ಟಣೆ ನೀಡಿದ್ದಾರೆ. ನನ್ನ ಹಿತೈಷಿಗಳಿಗೆ ಈ ಸುದ್ದಿ ನಿಜವಾಗಬೇಕು ಎನಿಸಿದೆ, ಆದರೆ ನಾನು ಜೀವಂತವಿದ್ದೇನೆ, ಹುರುಪಿನಿಂದ ಇದ್ದೇನೆ ಎಂಡು ಟ್ವಿಟ್ಟರ್ ಮೂಲಕ ವಿಡಿಯೋ ಹಂಚಿಕೊಂಡಿದ್ದಾರೆ.
Recommended Video
ಹಿರಿಯ ರಾಜಕಾರಣಿ ಅಮರ್ ಸಿಂಗ್ ಅವರು ಸದ್ಯ ಸಿಂಗಪುರದಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ವೈದ್ಯರ ಚಿಕಿತ್ಸೆಯಿಂದಾಗಿ 10 ವರ್ಷ ವಯಸ್ಸಿನ ಮಗುವಿನಂಥ ಚುರುಕಾದ ಮೆದುಳು ಹೊಂದಿದ್ದೇನೆ ಎಂದಿದ್ದಾರೆ.

ಟ್ವಿಟ್ಟರ್ ನಲ್ಲಿ ಏನು ಹೇಳಿಕೊಂಡಿದ್ದಾರೆ?:
"ನಾನು ಅಮರ್ ಸಿಂಗ್, ಸಿಂಗಪುರದಿಂದ ಮಾತನಾಡುತ್ತಿದ್ದೇನೆ, ನನ್ನ ಗೆಳೆಯರೇ, ಹಿತೈಷಿಗಳೆ, ನಾನು ಮೃತರಾಗಿರುವ ಸುದ್ದಿ ಕೇಳಿರಬಹುದು, ಆದರೆ ನಾನು ಜೀವಂತವಾಗಿದ್ದು, ಗಾಳಿಸುದ್ದಿ ನಂಬಬೇಡಿ" ಎಂಬರ್ಥದಲ್ಲಿ ವಿಡಿಯೋದಲ್ಲಿ ಹೇಳಿದ್ದಾರೆ.
ನನ್ನ ಶಸ್ತ್ರಚಿಕಿತ್ಸೆಯಾದ ನಂತರ ನಾನು ಹಿಂತಿರುಗುತ್ತೇನೆ, ನಾನು ಇಲ್ಲಿ ತನಕ ಹೇಗೆ ಜೀವಿಸಿದ್ದೆನೋ ಹಾಗೆ ಜೀವಿಸುವೆ, ವಿಮಾನದಿಂದ ಬಿದ್ದ ಬಳಿಕ 13 ದಿನಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ್ದೇನೆ ಎಂದಿದ್ದಾರೆ.
Tiger Zinda Hai!! pic.twitter.com/YWm3Sb0Yuw
— Amar Singh (@AmarSinghTweets) March 2, 2020
ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಹಾಗೂ ಕುಟುಂಬದ ಜೊತೆ ನಡೆದುಕೊಂಡ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದ ಅಮರ್ ಸಿಂಗ್ ಅವರು ತಮ್ಮ ಅಧಿಕೃತ ಫೇಸ್ಬುಕ್ ಪುಟದಲ್ಲಿ ವಿಡಿಯೋ ಮಾಡಿ ಹಾಕಿದ್ದರು.
ಅಮರ್ ಸಿಂಗ್, ಬಚ್ಚನ್ ಕುಟುಂಬ ಹಾಗೂ ಅನಿಲ್ ಅಂಬಾನಿ ಅನ್ಯೋನ್ಯವಾಗಿ 2016ರ ಸುಮಾರಿಗೆ ಕಾಣಿಸಿಕೊಂಡಿದ್ದರು. ನಂತರ ರಾಜಕೀಯ ಕಾರಣಕ್ಕಾಗಿ ಬಚ್ಚನ್ ಕುಟುಂಬದ ಜೊತೆ ವೈಮನಸ್ಯ ಬೆಳೆಸಿಕೊಂಡಿದ್ದು ಈಗ ಇತಿಹಾಸ.
-
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications