ಪಾಸಿಟಿವ್ ಸುದ್ದಿ: ಒಂದೇ ಕುಟುಂಬದ 18 ಮಂದಿ ಕೋವಿಡ್ನಿಂದ ಗುಣಮುಖ
ಶಿರಸಿ, ಮೇ 25: ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಸರಕುಳಿ ಗ್ರಾಮದ ಒಂದೇ ಕುಟುಂಬದ 18 ಮಂದಿಗೆ ಕೋವಿಡ್ ಸೋಂಕು ತಗುಲಿದ್ದರೂ, ಆತ್ಮಸ್ಥೆರ್ಯ ಹಾಗೂ ಒಗ್ಗಟ್ಟಿನಿಂದ ಪರಿಸ್ಥಿತಿಯನ್ನು ಎದುರಿಸಿ ಎಲ್ಲರೂ ಗುಣಮುಖರಾಗಿ ಇದೀಗ ಸಂತಸವನ್ನೂ ಹಂಚಿಕೊಂಡಿದ್ದಾರೆ.
ಸರಕುಳಿ ಗ್ರಾಮದ ಲೋಕೇಶ್ವರ ಹೆಗಡೆಯವರ ಮನೆಯಲ್ಲಿ ಒಬ್ಬರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು, ಪರೀಕ್ಷೆ ಮಾಡಿಸಿದಾಗ ಕೋವಿಡ್ ದೃಢಪಟ್ಟಿತ್ತು. ಸುಮಾರು 3 ವರ್ಷದಿಂದ 70 ವರ್ಷದ ಎಲ್ಲ ವಯೋಮಾನದವರಿರುವ ಈ ಕುಟುಂಬದಲ್ಲಿ ಎಲ್ಲರೂ ಸ್ವಯಂ ಪ್ರೇರಣೆಯಿಂದ ಕೋವಿಡ್ ಪರೀಕ್ಷೆ ಮಾಡಿಸಿದಾಗ ಉಳಿದ 17 ಜನರಿಗೂ ಸೋಂಕು ತಗುಲಿರುವುದು ದೃಢಪಟ್ಟಿತ್ತು.
ಯಾರೂ ಧೃತಿಗೆಡದೆ ಒಗ್ಗಟ್ಟಿನಿಂದ ಸರ್ಕಾರದ ಹಾಗೂ ವೈದ್ಯಕೀಯ ನಿಯಮಗಳನ್ನು ಪಾಲಿಸಿ ಮನೆಯಲ್ಲಿಯೇ ಅಗತ್ಯವಿರುವ ಚಿಕಿತ್ಸೆ ಪಡೆದು ತಾವುಗಳೂ ಗುಣಮುಖರಾಗಿ, ಸೋಂಕು ಊರಿನಲ್ಲಿ ಹರಡದಂತೆ ಜಾಗ್ರತೆ ವಹಿಸಿರುವುದು ಇಂದಿಗೂ ಮುಂದುವರೆದಿರುವ ಅವಿಭಕ್ತ ಕುಟುಂಬಗಳ ಒಗ್ಗಟ್ಟು ಹಾಗೂ ಸಾಮಾಜಿಕ ಕಳಕಳಿಗೆ ಸಾಕ್ಷಿಯಾಗಿದೆ.

Recommended Video
ಕುಟುಂಬದವರೆಲ್ಲರಿಗೂ ಸೋಂಕು ತಗುಲಿದರೂ ಧೈರ್ಯವಾಗಿ ಕೋವಿಡ್ನ್ನು ಹಿಮ್ಮೆಟ್ಟಿಸಿದ್ದೇವೆ. ಯಾರೂ ಹೆದರದೆ ಸರ್ಕಾರ ಹಾಗೂ ವೈದ್ಯಕೀಯ ನಿಯಮಾವಳಿಗಳನ್ನು ಪಾಲಿಸಿ ಪರಿಸ್ಥಿತಿಯನ್ನು ಎದುರಿಸಿ ಕೋವಿಡ್ ಸೋಂಕನ್ನು ಹೋಗಲಾಡಿಸುವಲ್ಲಿ ಸಹಕರಿಸಿ ಎಂದು ಕುಟುಂಬದ ಹಿರಿಯ ಸದಸ್ಯ ಲೋಕೇಶ್ವರ ಹೆಗಡೆ ಕರೆ ನೀಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications