ನಮ್ಮ ನಾಡಿನ ವಿಶಿಷ್ಟ ನದಿ 'ಅಘನಾಶಿನಿ' ಸಾಕ್ಷ್ಯಚಿತ್ರ ಬಿಡುಗಡೆ
ಬೆಂಗಳೂರು, ಆಗಸ್ಟ್ 03: ಕಳೆದ ಐದು ವರುಷಗಳಿಂದ ಭಾರತ ಭೂದೃಶ್ಯಗಳ ಅನನ್ಯ ಛಾಯಾಗ್ರಹಣದಲ್ಲಿ ತೊಡಗಿಕೊಂಡಿರುವ ಲ್ಯಾಂಡ್ಸ್ಕೇಪ್ ವಿಝಾರ್ಡ್ಸ್ ತಂಡದಿಂದ ಹೊರಬರುತ್ತಿರುವ ಸಾಕ್ಷ್ಯ ಚಿತ್ರ "ಅಘನಾಶಿನಿ' ಇದೇ ಭಾನುವಾರ ತೆರೆಕಾಣಲಿದೆ.
ಪಶ್ಚಿಮ ಘಟ್ಟದ ನದಿಗಳಲ್ಲೇ ಬಹು ವಿಶೇಷವಾದದ್ದು ಅಘನಾಶಿನಿ. ಅಭಿವೃದ್ಧಿಯ ನೆಪದಲ್ಲಿ ನಡೆಯುವ ಎಲ್ಲ ಹಿಂಸೆಗಳಿಂದ ಅದೃಷ್ಟವಶಾತ್ ತಪ್ಪಿಸಿಕೊಂಡು ಸಾವಿರಾರು ವರುಷಗಳಿಂದ ತನ್ನದೇ ಹರಿವಿನಲ್ಲಿ ಸಾಗುತ್ತಿದೆ.

ತನ್ನತನ ಮತ್ತು ಪಾವಿತ್ರ್ಯತೆ ಕಾಪಾಡಿಕೊಂಡಿರುವ ಅಘನಾಶಿನಿ ಅನೇಕ ಕೌತುಕಮಯ ಸಂಗತಿಯನ್ನು ಒಳಗೊಂಡಿದೆ. ಅವುಗಳಲ್ಲಿ ಕೆಲವು ವಿಶ್ವದಲ್ಲೇ ಎಲ್ಲಿಯೂ ಕಾಣಸಿಗದಂತವು.
ಅಂತವುಗಳಲ್ಲಿ ಹಲವು ವಿಶೇಷ ಕಥೆಗಳನ್ನು ಆಯ್ದುಕೊಂಡು ನದಿಯ ನಿರೂಪಣೆಯಲ್ಲೇ ಚಿತ್ರ ಮೂಡಿಸಿರುವುದು ಈ ಸಾಕ್ಷ್ಯಚಿತ್ರದ ಹೆಗ್ಗಳಿಕೆ.
ಅಶ್ವಿನಿ ಕುಮಾರ ಭಟ್ ನಿರ್ದೇಶನದಲ್ಲಿ ರೂಪುಗೊಂಡಿರುವ 'ಅಘನಾಶಿನಿ' ಯು ರೋಹಿಣಿ ನಿಲೇಕಣಿ ಫಿಲಾನಥ್ರೋಪಿಸ್ ಸಹಭಾಗಿತ್ವದಲ್ಲಿ ಮತ್ತು ಕ್ರೌಡ್ ಫಂಡಿಂಗ್ ನಲ್ಲಿ ನಿರ್ಮಾಣ ಗೊಂಡಿದೆ.
ಶ್ರೀಮತಿ ರೋಹಿಣಿ ನಿಲೇಕಣಿ, ಪ್ರಸಿದ್ಧ ಪತ್ರಕರ್ತ ಮತ್ತು ಪರಿಸರ ಅಂಕಣಕಾರ ನಾಗೇಶ್ ಹೆಗಡೆ, ಐ. ಎಫ್. ಎಸ್. ವಿಜಯ್ ಮೋಹನ ರಾಜ್ ಇನ್ನಿತರ ಪ್ರಮುಖರ ಸಮ್ಮುಖದಲ್ಲಿ ಎಂ. ಜಿ. ರೋಡ್ ಬಳಿಯಿರುವ ಮದರ್ ಟೆಕ್ಲಾ ಸಭಾಂಗಣದಲ್ಲಿ ಆಗಸ್ಟ್ 6ರ ಸಂಜೆ 4 ರಿಂದ 7 ರವೆರೆಗೆ ಸಾಕ್ಷ್ಯಚಿತ್ರದ ಇಂಗ್ಲಿಷ್ ಆವೃತ್ತಿಯ ಬಿಡುಗಡೆ ನಡೆಯಲಿದೆ.
More From
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications