ಶಿರಸಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೀಟನಾಶಕದ ಬದಲು ಕಳೆನಾಶಕ ಸಿಂಪಡಿಸಿದ ರೈತ; ಭತ್ತದ ಬೆಳೆ ನಾಶ

By ಕಾರವಾರ ಪ್ರತಿನಿಧಿ
|
Google Oneindia Kannada News

ಶಿರಸಿ, ಅಕ್ಟೋಬರ್ 20: ರೈತನೊಬ್ಬ ಕೀಟನಾಶಕದ ಬದಲು ಕಳೆನಾಶಕ ಸಿಂಪಡಿಸಿದ್ದರಿಂದ ಎರಡೂವರೆ ಎಕರೆ ಭತ್ತದ ಬೆಳೆ ನಾಶವಾಗಿರುವ ಘಟನೆ ಶಿರಸಿ ತಾಲೂಕಿನ ಮರಗುಂಡಿಯಲ್ಲಿ ನಡೆದಿದೆ.

ಶಿರಸಿಯ ಹಲಗದ್ದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರಗುಂಡಿಯ ದತ್ತು ಉಳ್ಳಪ್ಪ ನಾಯ್ಕ ಎಂಬುವವರು ಕಣ್ತಪ್ಪಿನಿಂದ ಗದ್ದೆಗೆ ಕೀಟನಾಶಕವನ್ನು ಸಿಂಪಡಿಸುವ ಬದಲು ಕಳೆನಾಶಕವನ್ನು ಸಿಂಪಡಿಸಿದ್ದಾರೆ. ಇದರ ಪರಿಣಾಮ, ಫಸಲಿಗೆ ಬಂದಿದ್ದ ಭತ್ತದ ಬೆಳೆ ನಾಶವಾಗಿ ಹೋಗಿದೆ.

ನಾಲ್ಕು ಎಕರೆ ಮೆಕ್ಕೆಜೋಳ ಬೆಳೆಗೆ ಕಳೆನಾಶಕ ಸಿಂಪಡಿಸಿದ ಕಿಡಿಗೇಡಿಗಳುನಾಲ್ಕು ಎಕರೆ ಮೆಕ್ಕೆಜೋಳ ಬೆಳೆಗೆ ಕಳೆನಾಶಕ ಸಿಂಪಡಿಸಿದ ಕಿಡಿಗೇಡಿಗಳು

ಬಡ ಕೃಷಿಕನಾಗಿರುವ ಉಳ್ಳಪ್ಪ ನಾಯ್ಕ ಅವರು ಎರಡೂವರೆ ಎಕರೆ ಪ್ರದೇಶದಲ್ಲಿ ಭತ್ತ ಬೆಳೆದಿದ್ದರು. ಇದರಿಂದ ಲಾಭದ ನಿರೀಕ್ಷೆಯಲ್ಲಿದ್ದರು. ಆದರೆ ಓದು ಬರಹ ಗೊತ್ತಿಲ್ಲದ ರೈತ ಉಳ್ಳಪ್ಪ ಔಷಧ ಎಂದು ತಿಳಿದು ಕಳೆನಾಶಕವನ್ನು ಸಿಂಪಡಣೆ ಮಾಡಿದ್ದಾರೆ. ಮರು ದಿನದಿಂದಲೇ ಭತ್ತದ ಸಸಿ ಮುರಟು ಹೋಗಲು ಆರಂಭವಾಗಿದೆ. ಆಗ ಅವರಿಗೆ ತಾನು ಮಾಡಿದ ಕೆಲಸ ಗಮನಕ್ಕೆ ಬಂದಿದೆ. ನೋಡನೋಡುತ್ತಿದ್ದಂತೆ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ.

Sirsi: Farmer Sprayed Weed Killer Instead Of Pesticide

ಆದ ಯಡವಟ್ಟಿನಿಂದಾಗಿ ರೈತ ಕಂಗಾಲಾಗಿದ್ದು, ಕಣ್ಣೀರಿಡುತ್ತಿದ್ದಾರೆ. ಇದೇ ತನ್ನ ಜೀವನಾಧಾರವಾಗಿದ್ದು, ಜೀವನವನ್ನು ಸಾಗಿಸುವುದು ಹೇಗೆ ಎಂದು ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾರೆ.

English summary
A two and a half acre paddy crop was burnt by a farmer who sprayed weed killer instead of pesticides by mistake in sirsi,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X