ಸಿದ್ದಾಪುರದಲ್ಲಿ ಮಳೆಯಿಂದ ಮರ ಬಿದ್ದು ಅರಣ್ಯಪಾಲಕ ಸಾವು
ಶಿರಸಿ, ಜುಲೈ 23: ಭಾರಿ ಗಾಳಿ, ಮಳೆಯಿಂದಾಗಿ ಬೃಹತ್ ಮರವೊಂದು ಬಿದ್ದು ಅರಣ್ಯರಕ್ಷಕ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಾವಿನಗುಂಡಿ ರಸ್ತೆಯ ಕುಳಿಬಿಡು ಬಳಿ ನಡೆದಿದೆ.
ಅರಣ್ಯ ರಕ್ಷಕ ಶಶಿಧರ್ (58) ಮೃತ ದುರ್ದೈವಿ. ಇಂದು ಬೆಳಿಗ್ಗೆ ಕರ್ತವ್ಯದ ನಿಮಿತ್ತ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದ ಸಂದರ್ಭ ಮರ ಬಿದ್ದು ಮರದಡಿಗೆ ಸಿಲುಕಿ ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ.

ಬೃಹದಾಕಾರದ ಮರ ಬಿದ್ದಿದ್ದರಿಂದ ರಸ್ತೆ ಸಂಚಾರ ಸ್ಥಗಿತಗೊಂಡಿದೆ. ಭಾರಿ ಗಾತ್ರದ ಮರದ ತೆರವು ಕಾರ್ಯವನ್ನು ನಡೆಸಲಾಗುತ್ತಿದೆ. ಘಟನೆ ಸಂಬಂಧ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.












Click it and Unblock the Notifications