"ನಾನು ಕಾಣೆಯಾಗಿಲ್ಲ" ಎಂದು ಮತ್ತೆ ಶಿವರಾಮ್ ಹೆಬ್ಬಾರ್ ಪೋಸ್ಟ್
Recommended Video
ಶಿರಸಿ, ಜುಲೈ 18: ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಅರಬೈಲ್ ಶಿವರಾಮ್ ಹೆಬ್ಬಾರ್ ಅವರು ಈಚೆಗಷ್ಟೆ ತಮ್ಮ ರಾಜೀನಾಮೆ ಕುರಿತು ತಮ್ಮ ಕ್ಷೇತ್ರದ ಮತದಾರರಿಗೆ ಪತ್ರವೊಂದನ್ನು ಬರೆದಿದ್ದರು. ಇದೀಗ ಮತ್ತೆ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟೊಂದನ್ನು ಹರಿಬಿಟ್ಟಿದ್ದಾರೆ.
ಇದಕ್ಕೆ ಕಾರಣವಿದೆ. ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಅವರನ್ನು ಹುಡುಕಿಕೊಡಿ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಮುಖರು ಬುಧವಾರ ಇಲ್ಲಿನ ಡಿವೈಎಸ್ ಪಿ ಕಚೇರಿಗೆ ಭೇಟಿ ನೀಡಿ, ದೂರು ದಾಖಲಿಸಿದ್ದರು. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ಅತೃಪ್ತರೊಂದಿಗೆ ಇರುವ ಶಾಸಕರನ್ನು ಹುಡುಕಿಕೊಡಿ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ನೇತೃತ್ವದಲ್ಲಿ, ಕಾರ್ಯಕರ್ತರು ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ ಅವರಿಗೆ ದೂರು ನೀಡಿದ್ದರು.
ಹತ್ತು ದಿನಗಳಿಂದ ಶಾಸಕರು ಕಾಣೆಯಾಗಿದ್ದು, ನಮ್ಮ ಸಂಪರ್ಕಕ್ಕೂ ಸಿಕ್ಕಿಲ್ಲ. ಕ್ಷೇತ್ರದ ಜನರು ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾಗಿದ್ದಾರೆ. ಶಾಸಕರನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅಪಹರಣ ಮಾಡಿ, ಅಕ್ರಮ ಹಾಗೂ ಬಲವಂತವಾಗಿ ಕೂಡಿ ಹಾಕಿರಬಹುದೆಂಬ ಸಂಶಯವಿದೆ. ಶಾಸಕರ ಉಪಸ್ಥಿತಿ ಕ್ಷೇತ್ರಕ್ಕೆ ತೀರಾ ಅಗತ್ಯವಾಗಿರುವ ಕಾರಣ, ದೂರು ಸ್ವೀಕರಿಸಿದ ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಶಿವರಾಮ ಹೆಬ್ಬಾರರನ್ನು ಹುಡುಕಿಕೊಡಬೇಕು ಎಂದು ಮನವಿ ಮಾಡಿದ್ದರು.

ಅದಕ್ಕೆ ಶಿವರಾಮ್ ಹೆಬ್ಬಾರ್ ತಮ್ಮ ಫೇಸ್ಬುಕ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. "ನಾನು ಕಾಣೆಯಾಗಿದ್ದೇನೆ, ಹುಡುಕಿಕೊಡಿ ಎಂಬ ಅಭೂತಪೂರ್ವ ರಾಜಕೀಯ ಕಾಳಜಿಯನ್ನು ಭೀಮಣ್ಣ ತೋರಿದ್ದಾರೆ! ಅವರ ಈ ಮನವಿಯ ಹಿಂದಿನ ವಿಶೇಷ ಕಾಳಜಿ ಆಶ್ಚರ್ಯಕರ" ಎಂದಿದ್ದಾರೆ.
"ನಾನು ಕೆಲ ದಿನಗಳಿಂದ ಕ್ಷೇತ್ರದಿಂದ ಹೊರಗಿದ್ದರೂ ಕಾರ್ಯಕರ್ತರ ಹಾಗೂ ಅಧಿಕಾರಿಗಳ ನಿರಂತರ ಸಂಪರ್ಕದಲ್ಲಿದ್ದೇನೆ. ಈ ನಡುವೆ ಮಳೆಯಿಂದಾದ ಹಾನಿ ಹಾಗು ತರ್ತು ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳ ಮೂಲಕ ಕ್ರಮ ಕೈಗೊಂಡಿದ್ದೇನೆ. ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ನನ್ನ ಕಾರ್ಯದರ್ಶಿಗಳು ಸದಾ ಸಿದ್ಧರಿದ್ದಾರೆ. ನಾನೂ ನಿರಂತರ ಸಂಪರ್ಕದಲ್ಲಿರುತ್ತೇನೆ' ಎಂದು ಹೆಬ್ಬಾರ್ ತಿಳಿಸಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications