ಬನವಾಸಿ ಕದಂಬೋತ್ಸವದಲ್ಲಿ ಸನದಿ ನಾಗರಾಜಯ್ಯಗೆ ಪಂಪ ಪ್ರಶಸ್ತಿ ಪ್ರದಾನ
ಶಿರಸಿ, ಫೆಬ್ರವರಿ, 2 : ಪಂಪ ಪ್ರಶಸ್ತಿಗೆ ಆಯ್ಕೆಯಾಗಿರುವ ಹೆಸರಾಂತ ಸಾಹಿತಿ ಬಿ.ಎ.ಸನದಿ .ಪ.ನಾಗರಾಜಯ್ಯ ಅವರಿಗೆ ಫೆಬ್ರವರಿ 18 ಮತ್ತು 19 ರಂದು ಬನವಾಸಿಯಲ್ಲಿ ನಡೆಯುವ ಕದಂಬೋತ್ಸವದಲ್ಲಿ ಪಂಪ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಶಿರಸಿ ಸಹಾಯಕ ಆಯುಕ್ತ ರಾಜು ಮೊಗವೀರ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಫೆಬ್ರವರಿ 18 ಮತ್ತು 19 ರಂದು ಕದಂಬೋತ್ಸವ ನಡೆಯಲಿದ್ದು, ಉತ್ಸವದ ಯಶಸ್ಸಿಗೆ 14 ಸಮಿತಿಗಳನ್ನು ರಚಿಸಲಾಗಿದೆ ಎಂದು ಹೇಳಿದರು.[ಪಂಪ ಪ್ರಶಸ್ತಿ ಪಡೆದ ಅಭಿಜಾತ ಕವಿ ಬಿ.ಎ. ಸನದಿ]

ಅಂದೇ ಸಾಹಿತಿಗಳಿಗೆ ಪಂಪ ಪ್ರಶಸ್ತಿ ನೀಡಲಾಗುತ್ತಿದ್ದು, ಕದಂಬೋತ್ಸವದ ಯಶಸ್ಸಿಗೆ ರಾಜ್ಯದಾದ್ಯಂತ ಮೂರು ದಿನ ಕದಂಬ ಜ್ಯೋತಿಯಾತ್ರೆ ನಡೆಯಲಿದೆ. ಫೆ.16 ರಂದು ಗುಡ್ನಾಪುರದಿಂದ ಜ್ಯೋತಿ ಯಾತ್ರೆ ಹೊರಡಲಿದೆ.
ಗುಡ್ನಾಪುರದಲ್ಲಿ ಬಂಗಾರೇಶ್ವರ ದೇವರಿಗೆ ಪೂಜೆ ಸಲ್ಲಿಸಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು.
ಮುಖ್ಯಮಂತ್ರಿ ಸಿದ್ಧರಾಮಯ್ಯ ಫೆ. 18 ರಂದು ಸಂಜೆ 7 ಕ್ಕೆ ಉದ್ಘಾಟಿಸಲಿದ್ದು, ಸಚಿವರಾದ ಉಮಾಶ್ರೀ, ಪ್ರಿಯಾಂಕ ಖರ್ಗೆ, ಆರ್.ವಿ.ದೇಶಪಾಂಡೆ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿರುವರು.
ಫೆ.17,18 ರಂದು ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಫೆ. 18 ರಂದು ಹಿಂದಿಯ ಖ್ಯಾತ ಗಾಯಕ ಕುನಾಲ ಗಾಂಜಾವಾಲಾ ಅವರ ಮತ್ತು ಫೆ.19 ಎಂ.ಡಿ.ಪಲ್ಲವಿ ಅವರಿಂದ ಸಂಗೀತ ಕಾರ್ಯಕ್ರಮಗಳು ಜರುಗಲಿವೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications