ಎಸ್ಎಸ್ಎಲ್ಸಿ ಫಲಿತಾಂಶ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಶಿರಸಿಯ ಸನ್ನಿಧಿ ಹೆಗಡೆ
ಶಿರಸಿ, ಆಗಸ್ಟ್ 10: ಕೊರೊನಾ ವೈರಸ್ ಆತಂಕದ ನಡುವೆಯೇ ನಡೆದಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಉತ್ತರ ಕನ್ನಡ ಜಿಲ್ಲೆ ಶಿರಸಿಯ ಸನ್ನಿಧಿ ಎಂಬ ವಿದ್ಯಾರ್ಥಿನಿಯು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದವರಲ್ಲಿ ಒಬ್ಬರಾಗಿದ್ದಾರೆ.
Recommended Video
ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ಸನ್ನಿಧಿ ಹೆಗಡೆ, 625ಕ್ಕೆ 625 ಅಂಕ ಪಡೆದಿದ್ದಾರೆ. ಯಾವುದೇ ವಿಶೇಷ ಟ್ಯೂಷನ್ ಪಡೆಯದೇ, ಶಿಕ್ಷಕರು ಹಾಗೂ ಪಾಲಕರ ಮಾರ್ಗದರ್ಶನದಿಂದ ಉತ್ತಮವಾಗಿ ಅಭ್ಯಾಸ ಮಾಡುತ್ತಿದ್ದಳು. ಶಿರಸಿಯ ಪ್ರಗತಿ ನಗರದ ನಿವಾಸಿಯಾಗಿರುವ ಈಕೆಯ ತಂದೆ ಡಾ.ಮಹಾಬಲೇಶ್ವರ ಹೆಗಡೆ ಕಾರವಾರದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ವೈದ್ಯಾಧಿಕಾರಿಯಾಗಿದ್ದಾರೆ.
ಕೋವಿಡ್ ನಿಂದಾಗಿ ಕಾರವಾರದಲ್ಲಿ ಕರ್ತವ್ಯ ನಿರತರಾಗಿರುವ ಅವರು, ಮಗಳು ಪ್ರಥಮ ಸ್ಥಾನ ಬಂದಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. ಶಾಲೆಯಿಂದಲೂ ಉತ್ತಮ ಮಾರ್ಗದರ್ಶನ ಸಿಕ್ಕಿರುವುದಕ್ಕಾಗಿ ಪ್ರಥಮ ಸ್ಥಾನ ಗಳಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

ಕಳೆದ ಹಲವು ವರ್ಷಗಳಿಂದ ಉತ್ತಮ ಸಾಧನೆ ಮಾಡಿಕೊಂಡು ಬಂದಿರುವ ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ಈಕೆ ಹಲವು ಚಟುವಟಿಕೆಗಳಲ್ಲಿ ಸಾಧನೆಗೈದಿದ್ದಾಳೆ.
ಇನ್ನು 625ಕ್ಕೆ 624 ಅಂಕ ಗಳಿಸಿರುವ ಸಿದ್ದಾಪುರದ ಪ್ರಶಾಂತಿ ಇಂಗ್ಲಿಷ್ ಮೀಡಿಯಮ್ ಶಾಲೆಯ ಅನಿರುದ್ಧ್ ಸುರೇಶ್ ಗುಟ್ಟಿಕರ್ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ.
-
SSLC ಪರೀಕ್ಷೆ 2026: ಪರೀಕ್ಷಾ ಹಾಲ್ಗೆ ಹೋಗುವ ಮುನ್ನ ನಿಮ್ಮ ಕೈಯಲ್ಲಿ ಈ ವಸ್ತುಗಳಿವೆಯಾ? ಒಮ್ಮೆ ಚೆಕ್ ಮಾಡಿಕೊಳ್ಳಿ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್ -
SSLC Exam 2026: ಕೊನೆಯ ಕ್ಷಣದಲ್ಲಿ ಒತ್ತಡವಿಲ್ಲದೆ ರಿವಿಷನ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ












Click it and Unblock the Notifications