ಶಿರಸಿ- ಕುಮಟಾ ಮಾರ್ಗದ ಗೊಂದಲ: ರಸ್ತೆ ಬಂದ್ ಮಾಡದೇ ನಡೆಯಲಿದೆ ಕಾಮಗಾರಿ
ಕಾರವಾರ, ಅಕ್ಟೋಬರ್ 14: ಶಿರಸಿ- ಕುಮಟಾ ರಸ್ತೆಯನ್ನು ಮೇಲ್ದರ್ಜೆಗೇರಿಸುವ ಕಾಮಗಾರಿ ಆರಂಭಿಸುವ ಕಾರಣ ರಸ್ತೆಯನ್ನು ಒಂದೂವರೆ ವರ್ಷ ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶಿಸಿರುವುದು ಗೊಂದಲಕ್ಕೆ ಕಾರಣವಾಗಿತ್ತು. ಆದರೆ, ರಸ್ತೆ ಬಂದ್ ಮಾಡದೇ, ಲಘು ವಾಹನಗಳಿಗೆ ಸಂಚರಿಸಲು ಅವಕಾಶ ನೀಡಿ ಕಾಮಗಾರಿ ನಡೆಸುವುದಾಗಿ ಈಗ ಸ್ಪಷ್ಟತೆ ಸಿಕ್ಕಿದೆ.
ಕುಮಟಾ- ಶಿರಸಿ ರಸ್ತೆ ಮೇಲ್ದರ್ಜೆಗೇರಿಸುವ ಕಾಮಗಾರಿ ಸಂಬಂಧ ಜಿಲ್ಲಾಧಿಕಾರಿ ನಿರ್ದೇಶನದ ಮೇರೆಗೆ ಗುತ್ತಿಗೆದಾರರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಎಂಜಿನಿಯರ್ ಗಳ ಸಭೆ ನಡೆಸಿರುವ ಕುಮಟಾ ಉಪವಿಭಾಗಧಿಕಾರಿ ಅಜಿತ್ ರೈ, ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಯಾವುದೇ ಕಾರಣಕ್ಕೂ ಶಿರಸಿ- ಕುಮಟಾ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡುವುದಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ತಿಳಿಸಿದ್ದಾಗಿ ಸ್ಪಷ್ಟನೆ ನೀಡಿದ್ದಾರೆ. ಮುಂದೆ ಓದಿ...

ಲಘು ವಾಹನ ಸಂಚಾರಕ್ಕಿದೆ ಅನುಮತಿ
ಕಾಮಗಾರಿ ಪ್ರಗತಿಯಲ್ಲಿದ್ದರೂ ಲಘು ವಾಹನಗಳು ಇಲ್ಲಿ ಸಂಚರಿಸಬಹುದು. ಒಂದು ವಾರಗಳ ಬಳಿಕ ರಸ್ತೆ ಕಾಮಗಾರಿ ಆರಂಭವಾಗಬಹುದು. ಕಾಮಗಾರಿ ಆರಂಭದ ನಂತರ ಕೂಡ ಲಘು ವಾಹನಗಳು ಸಂಚರಿಸಲು ಪಕ್ಕದಲ್ಲೇ ವ್ಯವಸ್ಥೆ ಮಾಡಿಕೊಡುವುದಾಗಿ ಗುತ್ತಿಗೆದಾರರು ಹಾಗೂ ಎನ್ಎಚ್ಎ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಸದ್ಯ ರಸ್ತೆಯನ್ನು ಸಂಪೂರ್ಣ ಮುಚ್ಚುವುದಿಲ್ಲ. ಭಾರೀ ಪ್ರಮಾಣದ ಸರಕುಗಳನ್ನು ಸಾಗಾಟ ಮಾಡುವ ವಾಹನಗಳಿಗೆ ಪರ್ಯಾಯ ಮಾರ್ಗಗಳಲ್ಲೇ ಸಂಚರಿಸಲು ಸೂಚಿಸಲಾಗುತ್ತದೆ ಎಂದು ತಿಳಿಸಿದರು.

ಭಾಗಶಃ ರಸ್ತೆ ಬಂದ್ ಮಾಡಿ ಕಾಮಗಾರಿ
ಸಮತಟ್ಟಾದ ಜಾಗದಲ್ಲಿ ಕಾಮಗಾರಿ ನಡೆಸುವ ವೇಳೆ ಲಘು ವಾಹನಗಳು ಓಡಾಡಬಹುದು. ಆದರೆ, ಘಟ್ಟ ಪ್ರದೇಶ ಹಾಗೂ ಸೇತುವೆಗಳಿರುವ ಕಡೆಗಳಲ್ಲಿ ಕಾಮಗಾರಿ ಮಾಡುವ ವೇಳೆ ವಾಹನಗಳು ಸಂಚರಿಸಲು ಆಗಷ್ಟು ಜಾಗದ ಕೊರತೆ ಉಂಟಾಗುವುದಿದ್ದರೆ ಮೊದಲೇ ಗುತ್ತಿಗೆದಾರರು ಹಾಗೂ ಎನ್ಎಚ್ಎನವರು ನಮಗೆ ಪತ್ರ ಬರೆಯಲಿದ್ದಾರೆ. ಆ ಪ್ರಕಾರ ಅರಣ್ಯ ಇಲಾಖೆ, ಪೊಲೀಸ್ ಹಾಗೂ ಇತರ ಅಧಿಕಾರಿಗಳೊಂದಿಗೆ ಜಂಟಿ ಪರಿಶೀಲನೆ ನಡೆಸಿ, ಲಘು ವಾಹನಗಳು ಓಡಾಡಲೂ ಸಾಧ್ಯವೇ ಇಲ್ಲವೆಂದ ಪಕ್ಷದಲ್ಲಿ ಮಾತ್ರ ಕಾಮಗಾರಿ ನಡೆಯುವಷ್ಟು ಭಾಗದ ರಸ್ತೆ ಬಂದ್ ಮಾಡಿ ಪ್ರಕಟಣೆ ನೀಡುತ್ತೇವೆ. ಅಲ್ಲಿಗೆ ಸಮೀಪದ ಒಳ ರಸ್ತೆಗಳಿಂದ ಪರ್ಯಾಯ ಮಾರ್ಗ ಕಲ್ಪಿಸಲು ಯೋಜಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

ವಿಚಾರ ಮಾಡಿಯೇ ತೀರ್ಮಾನ; ಶಿವರಾಮ್ ಹೆಬ್ಬಾರ್
ಶಿರಸಿ- ಕುಮಟಾ ರಸ್ತೆಯ ನಡುವೆ, ಶಿರಸಿಯಿಂದ ಅನತಿ ದೂರದಲ್ಲಿ ಟೋಲ್ ಗೇಟ್ ಕೂಡ ಆರಂಭಿಸಲಾಗುತ್ತದೆ ಎಂಬ ಮಾಹಿತಿ ಕೂಡ ಸಭೆಯಲ್ಲಿ ನೀಡಲಾಗಿದೆ. ಇತ್ತ ಶಿರಸಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಕೂಡ, ಶಿರಸಿ- ಕುಮಟಾ ರಸ್ತೆ ಉನ್ನತೀಕರಣ ಕಾಮಗಾರಿಗಾಗಿ ರಸ್ತೆ ಬಂದ್ ಮಾಡುವುದರಿಂದ ಮುಂದೊದಗಬಹುದಾದ ಪರಿಣಾಮಗಳ ಬಗ್ಗೆ ವಿಚಾರ ಮಾಡಿಯೇ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲಿಯವರೆಗೂ ರಸ್ತೆ ಸಂಚಾರಕ್ಕೆ ಮುಕ್ತವಾಗಿರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

"ಜಿಲ್ಲೆಯ ಔದ್ಯೋಗಿಕ ಬೆಳವಣಿಗೆಗೆ ತೊಂದರೆ"
ಎರಡು ವರ್ಷ ಹೆದ್ದಾರಿ ಬಂದ್ ಮಾಡುವುದು ಯೋಚಿಸುವ ವಿಷಯ. ಜಿಲ್ಲೆಯ ಅಭಿವೃದ್ಧಿಗೆ ಈ ರಸ್ತೆ ಸಂಚಾರ ಬಂದ್ ಮಾಡುವುದು ಜನರ ಹಿತದೃಷ್ಟಿಯಿಂದ ಸೂಕ್ತವಲ್ಲ. ಶಿರಸಿ- ಕುಮಟಾ ರಸ್ತೆ ಉನ್ನತೀಕರಿಸುವ ಸಂದರ್ಭದಲ್ಲಿ ಮಾರ್ಗ ಸಂಪೂರ್ಣ ಬಂದ್ ಮಾಡಿದರೆ ಔದ್ಯೋಗಿಕ ಬೆಳವಣಿಗೆಗೆ ತೊಂದರೆಯಾಗುತ್ತದೆ. ಹೀಗಾಗಿ ರಸ್ತೆಯ ಒಂದು ಭಾಗದಲ್ಲಿ ಸಂಚಾರ ಕಲ್ಪಿಸಬಹುದೇ ಎಂಬುದರ ಬಗ್ಗೆ ಸಮಾಲೋಚನೆ ನಡೆಸಲಾಗುತ್ತದೆ ಎಂದಿದ್ದರು.
Recommended Video
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications