ಕಷ್ಟಕ್ಕೆ ಸ್ಪಂದಿಸುವ ವಿಷಯದಲ್ಲಿ ರಾಜಕಾರಣ ಬೇಡ; ವಿಶ್ವೇಶ್ವರ ಹೆಗಡೆ ಕಾಗೇರಿ
ಶಿರಸಿ, ಆಗಸ್ಟ್ 13: "ಜನರ ಸಂಕಷ್ಟಕ್ಕೆ ಸ್ಪಂದಿಸುವ ವಿಷಯದಲ್ಲಿ ರಾಜಕಾರಣ ಮಾಡುವುದು ಬೇಡ. ಯಾರೇ ಸಂಕಷ್ಟದಲ್ಲಿದ್ದರೂ ತಕ್ಷಣ ಸ್ಥಳೀಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಸ್ಪಂದಿಸಲು ಸೂಚಿಸಲಾಗಿದೆ" ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಶಿರಸಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. "ನೆರೆ ಸಂತ್ರಸ್ತರಿಗೆ ತಕ್ಷಣದ ಸಹಾಯಕ್ಕಾಗಿ ತಹಶೀಲ್ದಾರರನ್ನು ಸಂಪರ್ಕಿಸಬಹುದು" ಎಂದರು.
ಉತ್ತರ ಕನ್ನಡ ಜಿಲ್ಲೆಯನ್ನು ನಿರ್ಲಕ್ಷಿಸಲಾಗುತ್ತಿದೆಯೆಂಬ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಉತ್ತರಕನ್ನಡ ಜಿಲ್ಲೆಯ ಪರಿಸ್ಥಿತಿ ಮುಖ್ಯಮಂತ್ರಿಯವರ ಗಮನದಲ್ಲಿದೆ. ಅವಕಾಶಕ್ಕನುಗುಣವಾಗಿ ಪ್ರಾತಿನಿಧ್ಯ ನೀಡುತ್ತಿದ್ದಾರೆ. ಇದೀಗ ಜನರು ತೀವ್ರ ಸಂಕಷ್ಟದಲ್ಲಿರುವಾಗ ಇಂತಹ ರಾಜಕಾರಣ ಮಾಡುವುದು ಬೇಡ. ಜನರ ಸಂಕಷ್ಟಗಳಿಗೆ ಎಲ್ಲರೂ ಸೇರಿ ಸ್ಪಂದಿಸೋಣ" ಎಂದರು.

ಇದೇ ಸಂದರ್ಭದಲ್ಲಿ ಶಿರಸಿಯ ವಿವಿಧ ಸಂಘಟನೆಗಳು ನೆರೆಹಾವಳಿಯ ಸಂತ್ರಸ್ತರಿಗೆ ಸಹಾಯಧನದ ದೇಣಿಗೆಗಳನ್ನು ಹಸ್ತಾಂತರಿಸಿದರು.
More From
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications