ವಿಧಾನ ಪರಿಷತ್ ಸದಸ್ಯರಾಗಿ ಯಲ್ಲಾಪುರದ ಶಾಂತಾರಾಮ ಸಿದ್ಧಿ ಅಚ್ಚರಿ ಆಯ್ಕೆ
ಶಿರಸಿ, ಜುಲೈ 22: ಕರ್ನಾಟಕ ರಾಜ್ಯ ವಿಧಾನ ಪರಿಷತ್ ಗೆ ನಾಮ ನಿರ್ದೇಶಿತ ಸದಸ್ಯರಾಗಿ ಯಲ್ಲಾಪುರದ ಶಾಂತಾರಾಮ ಬುದ್ನಾ ಸಿದ್ಧಿ ಆಯ್ಕೆಯಾಗಿದ್ದಾರೆ. ಈ ಕುರಿತು ಅಧಿಕೃತ ಪ್ರಕಟಣೆಯನ್ನು ರಾಜ್ಯಪಾಲರಾದ ವಜುಬಾಯಿ ವಾಲಾ ಹೊರಡಿಸಿದ್ದಾರೆ.
Recommended Video
ಶಾಂತಾರಾಮ ಸಿದ್ಧಿ ಕಳೆದ ಹಲವಾರು ದಶಕಗಳಿಂದ ಸಂಘ ಪರಿವಾರದಲ್ಲಿ ಸಕ್ರಿಯರಾಗಿದ್ದು, ವನವಾಸಿ ಕಲ್ಯಾಣಾಶ್ರಮದ ವಿವಿಧ ಹಂತದ ಜವಾಬ್ದಾರಿ ನಿರ್ವಹಿಸಿದ್ದರು. ವಿಧಾನ ಪರಿಷತ್ ಗೆ ಅವರನ್ನು ಆಯ್ಕೆ ಮಾಡಿದ್ದು, ಬುಡಕಟ್ಟು ಜನಾಂಗಕ್ಕೆ ನೀಡಿದ ಗೌರವವಾಗಿದೆ ಎಂಬುದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಮೂರು ದಶಕಗಳಿಂದ ಪಶ್ಚಿಮ ಘಟ್ಟದ ವನವಾಸಿಗಳ ನಡುವೆ ಕೆಲಸ ಮಾಡುತ್ತಿರುವ ಶಾಂತಾರಾಮ ಸಿದ್ಧಿಯವರನ್ನು ಮೇಲ್ಮನೆಗೆ ರಾಜ್ಯಪಾಲರು ನಾಮಕರಣ ಮಾಡಿ ಆದೇಶ ಹೊರಡಿಸಿದ್ದಾರೆ.

ಶಾಂತಾರಾಮ ಸಿದ್ಧಿ ಅವರು ಬುಡಕಟ್ಟು ಸಮುದಾಯದ ಮೊದಲ ಪದವೀಧರರಾಗಿದ್ದಾರೆ. 7 ನೇ ತರಗತಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಪ್ರತಿಭಾವಂತರು. ಪದವಿಯ ನಂತರ ವನವಾಸಿಗಳ ನಡುವೆ ಕೆಲಸ ಮಾಡಲು ವನವಾಸಿ ಕಲ್ಯಾಣಾಶ್ರಮದ ಪೂರ್ಣಾವಧಿ ಕಾರ್ಯಕರ್ತರಾದರು.
ಶಿರಸಿ-ಯಲ್ಲಾಪುರ ನಡುವಿನ ಹಿತ್ಲಳ್ಳಿ ಗ್ರಾಮದಲ್ಲಿನ ಪುಟ್ಟ ಮನೆಯಲ್ಲಿ ನೆಲಸಿರುವ ಶಾಂತಾರಾಮ ಸಿದ್ಧಿ, ಈ ಹಿಂದೆ ಪಶ್ಚಿಮ ಘಟ್ಟ ಕಾರ್ಯಪಡೆಯ ಸದಸ್ಯರಾಗಿದ್ದರು. ಕಾಲೇಜು ದಿನಗಳಿಂದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದವರು.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications