ಚಿನ್ಮಯ ರಾವ್ ಅವರ 'ಗುರುಸಂಹಿತಾ' ವರ್ಲ್ಡ್ ರೆಕಾರ್ಡ್ಸ್ ಪಟ್ಟಿಗೆ
ಸಾಗರ, ಫೆಬ್ರವರಿ 14 : ಇತ್ತೀಚೆಗಷ್ಟೇ ವಿಶ್ವದ ಅತಿ ಹೆಚ್ಚು ಅವಧಿಯ ಆಡಿಯೋ ಡಿವಿಡಿ ಎಂದು ಹಲವಾರು ವಿಶ್ವ ದಾಖಲೆಗಳ ಪಟ್ಟಿಗೆ ಸೇರ್ಪಡೆಯಾಗಿದ್ದ ಹೊನಗೋಡಿನ ಚಿನ್ಮಯ ಎಂ.ರಾವ್ ಅವರ ಗಾಯನದ ಶ್ರೀ ಗುರುಸಂಹಿತಾ ಎಂಬ ಆಡಿಯೋ ಡಿ.ವಿ.ಡಿ ಈಗ ತೆಲಂಗಾಣದ ಹೈ ರೇಂಜ್ ಬುಕ್ ಆಫ್ ವರ್ಡ್ ರೆಕಾರ್ಡ್ಸ್ ಪಟ್ಟಿಗೆ ಸೇರ್ಪಡೆಗೊಂಡಿದೆ.
ಚಿನ್ಮಯ ಎಂ.ರಾವ್ ಅತಿ ಹೆಚ್ಚು ಅಂದರೆ 6621 ಶ್ಲೋಕಗಳನ್ನು ಒಂದು ಧ್ವನಿಮುದ್ರಿಕೆಗಾಗಿ ಒಂದೇ ಗಾಯಕ ಹಾಡಿರುವ ವಿಶ್ವದ ಪ್ರಪ್ರಥಮ ಗಾಯಕ ಎಂದು ಪ್ರಶಸ್ತಿ ಪತ್ರದಲ್ಲಿ ನಮೂದಿಸಲಾಗಿದೆ. ಒಟ್ಟು 28 ಗಂಟೆ 8 ನಿಮಿಷ 38 ಸೆಕೆಂಡ್ ಧ್ವನಿಮುದ್ರಣವಾಗಿರುವ ಈ ಡಿ.ವಿ.ಡಿಯನ್ನು 2017ರ ಮೇ ತಿಂಗಳ 24 ರಂದು ಹರಿಹರದ ನಾರಾಯಣಾಶ್ರಮದಲ್ಲಿ ದತ್ತ ಪರಂಪರೆಯ ಶ್ರೀ ಪ್ರಭುದತ್ ಮಹರಾಜ್ ಲೋಕಾರ್ಪಣೆಗೊಳಿಸಿದ್ದರು.
ಶ್ರೀ ಗುರುಸಂಹಿತಾ ಎಂಬ ಹೆಸರಿನ ಶ್ರೀ ವಾಸುದೇವಾನಂದ ಸರಸ್ವತಿ ವಿರಚಿತ ಪವಿತ್ರ ಗ್ರಂಥದಲ್ಲಿನ ೫೨ ಅಧ್ಯಾಯಗಳಲ್ಲಿರುವ ಅನುಷ್ಟುಪ್ ಛಂದಸ್ಸಿನ ಒಟ್ಟು 6,621 ಸಂಸ್ಕೃತ ಶ್ಲೋಕಗಳನ್ನು ಚಿನ್ಮಯ ಎಂ.ರಾವ್ ತಮ್ಮ ಹೊನಗೋಡಿನ ಮನೆಯಲ್ಲಿರುವ ಪುಟ್ಟ ಸ್ಟುಡಿಯೋದಲ್ಲಿ ತಾವೇ ಧ್ವನಿಮುದ್ರಣ ಮಾಡಿಕೊಂಡು ಇದರ ಸಂಕಲನದ ಕೆಲಸವನ್ನೂ ತಾವೇ ಮಾಡಿಕೊಂಡು ಅಂತಿಮ ಹಂತದ ಮಾಸ್ಟರ್ ಡಿ.ವಿ.ಡಿ ಸಿದ್ಧಪಡಿಸಿ ಬಿಡುಗಡೆ ಮಾಡಿದ್ದಾರೆ. ಚಿನ್ಮಯ ಎಂ.ರಾವ್ 2010 ರಿಂದ 2013 ರವರೆಗೆ 3 ವರ್ಷ ಈ ಅಡಕ ಮುದ್ರಿಕೆಯ ಧ್ವನಿಮುದ್ರಣಕ್ಕಾಗಿ ಒಟ್ಟು2,400 ಗಂಟೆಗಳ ಕಾಲ ಕೆಲಸ ಮಾಡಿದ್ದಾರೆ.

ಮೂಲತಹ ಮರಾಠಿ ಭಾಷೆಯ ಗಂಗಾಧರ ಸರಸ್ವತಿ ಎಂಬ ಕವಿಯಿಂದ ರಚಿಸಲ್ಪಟ್ಟ ಶ್ರೀ ಗುರುಚರಿತ್ರಾ ಎಂಬ ಈ ಪವಿತ್ರ ಗ್ರಂಥ ಇಂದಿಗೂ ಮಹಾರಾಷ್ಟ್ರದಾದ್ಯಂತ ಪ್ರಚಲಿತವಾಗಿದೆ. ಶ್ರೀ ಗುರುಚರಿತ್ರೆಯು, ಶ್ರೀ ದತ್ತಾತ್ರೇಯರ, ಶ್ರೀಪಾದಶ್ರೀವಲ್ಲಭರ, ಶ್ರೀ ನೃಸಿಂಹ ಸರಸ್ವತಿಗಳ ಅದ್ಭುತವೂ ಪರಮಾನಂದವೂ ಆದ ದಿವ್ಯ ಚರಿತ್ರೆ. ಶ್ರೀ ವಾಸುದೇವಾನಂದ ಸರಸ್ವತಿಗಳು ದತ್ತನ ಪ್ರೇರಣೆಯಿಂದ ಸಂಸ್ಕೃತ ಭಾಷೆಗೆ ಇದನ್ನು ಅನುವಾದಿಸಿದ್ದಾರೆ. ಚಿತ್ರದುರ್ಗದ ಹಿರಿಯ ಜ್ಯೋತಿಷಿ ಎಸ್ ಶ್ರೀಧರ ಮೂರ್ತಿ ನಿರ್ಮಾಣದ ಈ ಆಡಿಯೋ ಡಿ.ವಿ.ಡಿಯನ್ನು ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿ ಹೊರತಂದಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications