ಶಿರಸಿ: ಕನ್ನಡ ಜಾಗೃತಿಗಾಗಿ ಬೃಹತ್ ಕನ್ನಡ ಧ್ವಜ ಮೆರವಣಿಗೆ
ಶಿರಸಿ, ನವೆಂಬರ್ 01 : ಕನ್ನಡ ಭಾಷಾಭಿಮಾನ ಜನರ ಮನಸ್ಸಿನಲ್ಲಿ ಮತ್ತೆ ಜಾಗೃತಗೊಳಿಸಬೇಕು ಎನ್ನುವ ನಿಟ್ಟಿನಲ್ಲಿ
ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಇಲ್ಲಿನ ರೆಡ್ ಆ್ಯಂಟ್ ಸಂಘಟನೆಯಿಂದ ಬೃಹತ್ ಗಾತ್ರದ ಕನ್ನಡ ಧ್ವಜ ಮೆರವಣಿಗೆ ಹಮ್ಮಿಕೊಂಡಿತ್ತು.
ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ನವೆಂಬರ್ 01(ಬುಧವಾರ) ರೆಡ್ ಆ್ಯಂಟ್ ಸಂಘಟನೆಯಿಂದ 160 ಮೀಟರ್ ಉದ್ದದ ಕನ್ನಡ ಧ್ವಜ ಮೆರವಣಿಗೆ, ಮಾರಿಕಾಂಬಾ ಪ್ರೌಢಶಾಲೆ ಸುಮಾರು 400 ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.
ಕನ್ನಡ ಭಾಷೆ, ಕನ್ನಡಾಭಿಮಾನ, ಕನ್ನಡದ ಕುರಿತು ಜಾಗೃತಿ ಮೂಡಿಸಲು ಶಿರಸಿಯ ರೆಡ್ ಆ್ಯಂಟ್ ಫ್ರೆಂಡ್ಸ್ ಸಂಸ್ಥೆ ಈ ಮಹತ್ ಕಾರ್ಯಕ್ಕೆ ಮುಂದಾಗಿದ್ದು ಜಿಲ್ಲೆಯಲ್ಲಿಯೇ ಪ್ರಥಮ ಬಾರಿಗೆ ಇಷ್ಟೊಂದು ದೊಡ್ಡ ಪ್ರಮಾಣದ ಧ್ವಜ ನಿರ್ಮಾಣವಾಗಿದೆ. ಕನ್ನಡ ರಾಜ್ಯೋತ್ಸವದಂದು ಇದು ನಗರದ ಪ್ರಮುಖ ಬೀದಿಗಳಲ್ಲಿ ರಾರಾಜಿಸಿದೆ.

ಶಿರಸಿ ಮಾರಿಕಾಂಬಾ ಪ್ರೌಢಶಾಲೆಯಿಂದ ಆರಂಭ
ನಗರದ ಮಾರಿಕಾಂಬಾ ಪ್ರೌಢಶಾಲೆಯ ಪ್ರಾಂಗಣದಿಂದ ನವೆಂಬರ್ 01ರ ಬೆಳಿಗ್ಗೆ 8.30 ಕ್ಕೆ ಕನ್ನಡ ಧ್ವಜದ ಮೆರವಣಿಗೆ ಹೊರಟ್ಟಿದ್ದು, ಸಿಪಿ ಬಝಾರ, ನಟರಾಜ ರಸ್ತೆ, ಬಸ್ ಸ್ಟಾಂಡ್ ವೃತ್ತ ಹೀಗೆ ಎಲ್ಲಾ ಕಡೆಗಳಲ್ಲಿ ಕನ್ನಡಾಭಿಮಾನ ಬೆಳಗಿದೆ.

ಶಿಕ್ಷಕರು ಹಾಗೂ ಸಂಘಟಕರು ಪಾಲ್ಗೊಂಡಿದ್ದರು
ಮಾರಿಕಾಂಬಾ ಪ್ರೌಢಶಾಲೆ ಸುಮಾರು 400 ವಿದ್ಯಾರ್ಥಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಅವರೊಂದಿಗೆ ಶಿಕ್ಷಕರು ಹಾಗೂ ಸಂಘಟಕರು ಇರಲಿದ್ದು, ಯಾವುದೇ ಅಡಚಣೆ ಉಂಟಾಗದೇ ಯಶಸ್ವಿಯಾಗುವಂತೆ ಮಾಡಲು ಬೇಕಾದ ಸಕಲ ತಯಾರಿಯನ್ನು ಮಾಡಲಾಗಿತ್ತು.

ಕನ್ನಡ ಪ್ರೇಮದ ಕುರಿತು ರೆಡ್ ಆ್ಯಂಟ್ ಸಂಸ್ಥೆ
ಕನ್ನಡ ಪ್ರೇಮದ ಕುರಿತು ರೆಡ್ ಆ್ಯಂಟ್ ಸಂಸ್ಥೆ ಮುಖ್ಯಸ್ಥ ಮಹೇಶ ನಾಯ್ಕ ಅವರನ್ನು ಸಂಪರ್ಕಿಸಿದಾಗ " ಕನ್ನಡ ಭಾಷಾಭಿಮಾನ ಎಲ್ಲರಲ್ಲಿ ಬೆಳೆಯಬೇಕು. ಅದು ಉಳಿಯಬೇಕು ಎನ್ನುವುದು ನಮ್ಮ ಬಯಕೆಯಾಗಿದೆ.ರೆಡ್ ಆ್ಯಂಟ್ ಸಂಸ್ಥೆಯು 5 ಜನರ ತಂಡವಾಗಿದೆ.

ಒಟ್ಟಾರೆಯಾಗಿ ಕೇವಲ ಪ್ರಚಾರಕ್ಕಾಗಿ ಅಲ್ಲ
ಒಟ್ಟಾರೆಯಾಗಿ ಕೇವಲ ಪ್ರಚಾರಕ್ಕಾಗಿ ಕನ್ನಡ ಭಾಷೆ, ನೆಲ-ಜಲ ವಿಚಾರಗಳನ್ನು ಬಳಸಿಕೊಳ್ಳುವ ರಾಜಕಾರಣಿಗಳ ಮಧ್ಯದಲ್ಲಿ ಇಂತಹ ಒಂದು ಹೊಸ ಕಾರ್ಯ, ಜಾಗೃತಿ ಮೆರವಣಿಗೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಕನ್ನಡ ಪ್ರೇಮಿಗಳೆಲ್ಲರೂ ಮೆರವಣಿಗೆಯಲ್ಲಿ ಭಾಗವಹಿಸುವ ನಿರೀಕ್ಷೆಯನ್ನು ಸಂಘಟಕರು ವ್ಯಕ್ತಪಡಿಸಿದ್ದರು. ಅದರಂತೆ, ಅಪಾರ ಸಂಖ್ಯೆಯಲ್ಲಿ ಕನ್ನಡ ಪ್ರೇಮಿಗಳು ಕಂಡು ಬಂದರು.

15 ಸಾವಿರ ರೂ.ಗಳಷ್ಟು ಖರ್ಚು
ಸ್ವತಃ ತಾವೇ ಕೈಯಿಂದ ಹಣವನ್ನು ಹಾಕಿಕೊಂಡು ಧ್ವಜವನ್ನು ನಿರ್ಮಿಸಿದ್ದಾರೆ. ಈ ಹಿಂದೆಯೂ ಸಹ ಕನ್ನಡ ರಾಜ್ಯೋತ್ಸವದಂದು ಬ್ಲಡ್ ಕ್ಯಾಂಪ್, ಸ್ಮಶಾನ ಸ್ವಚ್ಚತೆ ಸೇರಿದಂತೆ ವಿವಿಧ ಸಾಮಾಜಿಕ ಕೆಲಸವನ್ನು ಮಾಡಲಾಗಿದೆ.
ನಾವು ಗೆಳೆಯರು ಸೇರಿ 15 ಸಾವಿರ ರೂ.ಗಳಷ್ಟು ಖರ್ಚು ಮಾಡಿ ಕನ್ನಡವನ್ನು ಬೆಳೆಸಲು ಮೆರವಣಿಗೆ ಮಾಡಲಾಗುತ್ತಿದೆ. ಇದು ಸಿಲ್ಕ್ ಬಟ್ಟೆಯಾಗಿದ್ದು ಸೂರತ್ ನಿಂದ ತರಲಾಗಿದೆ ಎಂದು ಮಹೇಶ ನಾಯ್ಕ, ರೆಡ್ ಆ್ಯಂಟ್ ಸಂಸ್ಥೆ ಮುಖ್ಯಸ್ಥ ಒನ್ ಇಂಡಿಯಾಕ್ಕೆ ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications