ಫೆಬ್ರವರಿ 9 ರಿಂದ ಮಯೂರ ವರ್ಮ ವೇದಿಕೆಯಲ್ಲಿ ಕದಂಬ ಉತ್ಸವ ಸಂಭ್ರಮ
ಶಿರಸಿ, ಜನವರಿ 18: ಇತಿಹಾಸ ಪ್ರಸಿದ್ಧ ಬನವಾಸಿಯ 2019 ನೇ ಸಾಲಿನ ಕದಂಬೋತ್ಸವ ಕಾರ್ಯಕ್ರಮವನ್ನು ಫೆ.9 ಮತ್ತು 10 ರಂದು ಮಯೂರ ವರ್ಮ ವೇದಿಕೆಯಲ್ಲಿ ಆಯೋಜನೆ ಮಾಡಲಾಗಿದ್ದು, ಫೆ.7 ರಿಂದ ಕದಂಬೋತ್ಸವ ಕದಂಬ ಜ್ಯೋತಿ, ಕ್ರೀಡಾಕೂಟ ಕಾರ್ಯಕ್ರಮಗಳು ನಡೆಯಲಿದೆ.
ನಗರದ ತಹಶೀಲ್ದಾರ ಕಚೇರಿಯಲ್ಲಿ ಕದಂಬೋತ್ಸವ ಪೂರ್ವ ತಯಾರಿ ಸಭೆಯಲ್ಲಿ ಭಾಗವಹಿಸಿ ಮಾಹಿತಿ ನೀಡಿದ ,ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಮುಂಬರುವ ಮಾರ್ಚ್ ತಿಂಗಳಿನಲ್ಲಿ ಲೋಕಸಭಾ ಚುನಾವಣಾ ತಯಾರಿ ನಡೆಯಲಿದ್ದು, ಅದಕ್ಕೂ ಮೊದಲು ಕದಂಬೋತ್ಸವ ಆಚರಣೆ ಮಾಡಲು ನಿರ್ಧರಿಸಲಾಗಿದೆ.
ಫೆ.9 ಮತ್ತು 10 ರಂದು ಎರಡನೇ ಶನಿವಾರ ಹಾಗೂ ಭಾನುವಾರ ಆದ ಕಾರಣ ಬ್ಯಾಂಕ್ ಮತ್ತು ಸರ್ಕಾರಿ ಕಚೇರಿಗಳಿಗೂ ರಜೆ ಇರುವ ಕಾರಣ ಅನುಕೂಲವಾಗಲಿದೆ ಎಂದು ದಿನಾಂಕ ನಿಗದಿ ಮಾಡಲಾಗಿದೆ. ಫೆ.7 ರಂದು ಗುಡ್ನಾಪುರದಿಂದ ಕದಂಬ ಜ್ಯೋತಿ ಹೊರಡಲಿದ್ದು, ಎರಡು ಜ್ಯೋತಿಗಳಲ್ಲಿ ಒಂದು ಜಿಲ್ಲೆಯಲ್ಲಿ ಸಂಚಾರ ಹಾಗೂ ಇನ್ನೊಂದು ಹೊರ ಜಿಲ್ಲೆಯಲ್ಲಿ ಸಂಚಾರ ಮಾಡಲಿದೆ. ಅದೇ ದಿನ ಗುಡ್ನಾಪುರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು.

ಫೆ.9 ರಂದು ಬನವಾಸಿ ದೇವಸ್ಥಾನದಿಂದ ಕಲಾ ತಂಡಗಳಿಂದ ಮೆರವಣಿಗೆ ನಡೆಯಲಿದ್ದು, ಸಂಜೆ 7.30 ಕ್ಕೆ ಉದ್ಘಾಟನೆ ಕಾರ್ಯಕ್ರಮ ಹಾಗೂ ಪಂಪ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.
ಪಂಪ ಪ್ರಶಸ್ತಿ ಆಯ್ಕೆ ಸರ್ಕಾರ ಮಟ್ಟದಲ್ಲಿ ನಡೆಯಲಿದ್ದು, ಅದನ್ನು ನಮ್ಮ ವೇದಿಕೆಯಲ್ಲಿ ನೀಡಲು ಕೋರಲಾಗುವುದು ಎಂದು ತಿಳಿಸಿದ ಅವರು, ಕದಂಬೋತ್ಸವಕ್ಕೆ ಪ್ರವಾಸೋದ್ಯಮ ಇಲಾಖೆಯ ವತಿಯಿಂದ 40 ಲಕ್ಷ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 18.75 ಲಕ್ಷ ರೂ. ಸೇರಿ ಒಟ್ಟೂ 58.75 ಲಕ್ಷ ರೂ. ಬಿಡುಗಡೆಯಾಗಿದ್ದು, ಇನ್ನೂ ಹೆಚ್ಚಿನ ಅನುದಾನಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಪತ್ರ ಬರೆಯಲಾಗಿದೆ ಎಂದರು.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications