ಶಿರಸಿ ಮಾರಿಕಾಂಬಾ ಜಾತ್ರೆಗೆ ಮುಹೂರ್ತ ನಿಗದಿ
ಶಿರಸಿ, ಡಿಸೆಂಬರ್ 24: ರಾಜ್ಯದ ಅತಿದೊಡ್ದ ಹಾಗೂ ಐತಿಹಾಸಿಕ ಶಿರಸಿ ಮಾರಿಕಾಂಬಾ ಜಾತ್ರೆಗೆ ಮುಹೂರ್ತ ನಿಗದಿಯಾಗಿದೆ.
ಫೆಬ್ರವರಿ 27 ರಿಂದ ಮಾರ್ಚ್ 7 ರವರೆಗೆ ಶಿರಸಿಯಲ್ಲಿ ಶ್ರೀಮಾರಿಕಾಂಬಾ ಜಾತ್ರೆ ಜರುಗಲಿದೆ. ಭಾನುವಾರದಂದು ದೇವಾಲಯದಲ್ಲಿ ನಡೆದ ಸಭೆಯಲ್ಲಿ ಜಾತ್ರಾ ಮೂಹೂರ್ತವನ್ನು ಅಧಿಕೃತವಾಗಿ ಘೋಷಿಸಲಾಯಿತು.
ಈ ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ ಜಾತ್ರಾ ದಿನಾಂಕದ ಬಗ್ಗೆ ಮಾಹಿತಿಗಳು ಹರಿದಾಡಿದ್ದರೂ ಇಂದು ದೇವಾಲಯದ ವತಿಯಿಂದ ಅಧಿಕೃತ ಘೋಷಣೆ ಹೊರಬಿದ್ದಿದೆ.

ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ದೇವಾಲಯದ ಆಡಳಿತ ಮಂಡಳಿಯ ಅಧ್ಯಕ್ಷ ವೆಂಕಟೇಶ ನಾಯ್ಕ, ಸದಸ್ಯರಾದ ಮನೋಹರ ಮಲ್ಮನೆ, ಶಶಿಕಲಾ ಚಂದ್ರಪಟ್ಟಣ, ನಗರಸಭೆ ಅಧ್ಯಕ್ಷ ಪ್ರದೀಪ ಶೆಟ್ಟಿ ಹಾಗೂ ಜನಪ್ರತಿನಿಧಿಗಳು ಮತ್ತು ಸರ್ಕಾರಿ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.
ಮಾರಿಜಾತ್ರೆ ಎಂದು ಸ್ಥಳೀಯರಿಂದ ಕರೆಸಿಕೊಳ್ಳುವ ಈ ಜಾತ್ರೆ ಬೇರೆ ಕ್ಷೇತ್ರಗಳ ಜಾತ್ರೆ, ರಥೋತ್ಸವಗಳಿಗಿಂತ ವಿಭಿನ್ನ. ಬೇರೆಡೆ, ಮೂಲ ವಿಗ್ರಹ ದೇವಸ್ಥಾನದಲ್ಲೇ ಇದ್ದು ವಿಶೇಷ ಪೂಜೆ, ಧಾರ್ಮಿಕ ವಿಧಿವಿಧಾನ ನಡೆಯುತ್ತದೆ. ಉತ್ಸವ ಮೂರ್ತಿಯನ್ನು ರಥ ಅಥವಾ ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆ ಮಾಡಲಾಗುತ್ತದೆ.

ಅಂದಿನಿಂದಲೇ ಜಾತ್ರೆ ಆರಂಭ: ಆದರೆ ಶಿರಸಿ ಜಾತ್ರೆಯಲ್ಲಿ ಏಳಡಿ ಎತ್ತರದ ಮೂಲ ದೇವಿಯ ವಿಗ್ರಹವನ್ನೇ ಅಲಂಕಾರ ಸಮೇತ ಹೊರ ತಂದು, ಮದುವೆ ನೆರವೇರಿಸಿ, ಮೆರವಣಿಗೆಯಲ್ಲಿ ಬಿಡಕಿ ಬಯಲಿ'ಗೆ( ಜಾತ್ರಾ ಗದ್ದುಗೆ ಇಡುವ ಸ್ಥಳ) ಕೊಂಡೊಯ್ಯಲಾಗುತ್ತದೆ. ಅಂದಿನಿಂದಲೇ ಜಾತ್ರೆ ಆರಂಭ.
ಅಲ್ಲಿಂದ ಒಂಭತ್ತು ದಿನಗಳ ಕಾಲ ಬಯಲಿನಲ್ಲೇ ನೆಲೆಸಿ ಭಕ್ತರಿಗೆ ಸಮೀಪ ದರ್ಶನ ನೀಡುತ್ತಾಳೆ. ಒಂಭತ್ತು ದಿನಗಳ ಜಾತ್ರಾ ಮಹೋತ್ಸವ, ಪೂಜೆ, ಧಾರ್ಮಿಕ ವಿಧಿ ವಿಧಾನಗಳ ನಂತರ ದೇವಿಯ ವಿಗ್ರಹವನ್ನು ವಾಪಸ್ಸು ಕೊಂಡೊಯ್ಯಲಾಗುತ್ತದೆ. ಅಂದು ಸಾಂಕೇತಿಕ ಬಲಿ ನಡೆದು ಚಪ್ಪರಕ್ಕೆ ಬೆಂಕಿ ಹಚ್ಚಲಾಗುತ್ತದೆ.
ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯಲ್ಲಿ ರಾಜ್ಯದ ವಿವಿಧ ಪ್ರದೇಶಗಳಿಂದ, ಗೋವಾ, ಮಹಾರಾಷ್ಟ್ರ, ಆಂಧ್ರಗಳಿಂದಲೂ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ದೇವಿಯ ಸಮೀಪ ದರ್ಶನದಿಂದ ಭಕ್ತರು ಪುಳಕಿತರಾಗುತ್ತಾರೆ. ಈ ಒಂಭತ್ತು ದಿನ ಶಿರಸಿಯ ಚಹರೆಯೇ ಬದಲಾಗಿಬಿಡುತ್ತದೆ. ಯಕ್ಷಗಾನ, ಬಯಲಾಟ, ನಾಟಕ, ಇಂದ್ರಜಾಲ, ಸರ್ಕಸ್, ಜೈಂಟ್ ವ್ಹೀಲ್ ಸೇರಿದಂತೆ ನಾನಾ ಆಟಗಳು, ಬಣ್ಣಬಣ್ಣದ ಬೆಳಕಿನಲಂಕಾರ ರಾತ್ರಿಹೊತ್ತು ಗಂಧರ್ವ ಲೋಕವನ್ನೇ ಸೃಷ್ಟಿಸಿಬಿಡುತ್ತದೆ.
-
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ












Click it and Unblock the Notifications