ಶಿರಸಿ ತಾಲೂಕು ಕಸಾಪಕ್ಕೆ ನೂತನ ಪದಾಧಿಕಾರಿಗಳು
ಶಿರಸಿ, ಆಗಸ್ಟ್, 02: ಶಿರಸಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಗೆ ಹೊಸ ಪದಾಧಿಕಾರಿಗಳ ನೇಮಕವಾಗಿದೆ. ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಮನೋಹರ ಮಲ್ಮನೆ ನೂತನ ಅಧ್ಯಕ್ಷ ಪ್ರಕಾಶ ಭಾಗವತ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದ್ದಾರೆ.
ಶಿರಸಿಯ ಗಣೇಶ ನೇತ್ರಾಲಯದ ನಯನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕಾರ ಹಸ್ತಾಂತರ ಮಾಡಲಾಯಿತು. ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಭಾಗವಹಿಸಿದ್ದರು.[ಆಮದು ನಿಷೇಧ ಅಡಿಕೆ ಬೆಳೆಗಾರರ ಹಿತ ಕಾಯುವುದೆ?]

ಕನ್ನಡ ಶಾಲೆಗಳನ್ನು ಮುಚ್ಚುವ ಯೋಚನೆಯೇ ಸರಿಯಲ್ಲ. ಇದರ ಬದಲಾಗಿ ಸಂಶೋಧನೆ ಮತ್ತು ಯುವ ಸಾಹಿತಿಗಳಿಗೆ ಪ್ರೋತ್ಸಾಹ ನೀಡುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಅರವಿಂದ ಕರ್ಕಿಕೋಡಿ ಒತ್ತಾಯಿಸಿದರು.[ಅಡಿಕೆ ಧಾರಣೆ ಕುಸಿತಕ್ಕೆ ಸಾರ್ಕ್ ಒಕ್ಕೂಟ ಕಾರಣ ಅಂದ್ರೆ ನಂಬ್ತೀರಾ?]
ಗಣಪತಿ ಭಟ್ ಕಿಬ್ಬಳ್ಳಿ, ಭಾಗೀರಥಿ ಹೆಗಡೆ, ವಿ.ಪಿ. ವೈಶಾಲಿ ಹೆಗಡೆ, ರಘುನಂದನ್ ಭಟ್, ಕೊಡ್ಲು ಆನಂದು ಶಾನಭಾಗ್ಮ ಗುರುಪ್ರಸಾದ್ ಶಾಸ್ತ್ರಿ ಕಾರ್ಯಕ್ರಮದಲ್ಲಿ ಹಾಜರಿದ್ದರು.












Click it and Unblock the Notifications