'ಶಿರಸಿ ಭವನ'ದ ತೇಜಸ್ವಿನಿ ಹೆಗಡೆ- ಸ್ವಸ್ತಿ ಕಾದಂಬರಿ ಸ್ಪರ್ಧೆ ವಿಜೇತೆ
ಕುಮಟಾ, ನವೆಂಬರ್ 27: ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಸ್ವಸ್ತಿ ಪ್ರಕಾಶನ ಆಯೋಜಿಸಿದ್ದ ರಾಜ್ಯ ಮಟ್ಟದ ಕಾದಂಬರಿ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ. ದಟ್ಸ್ ಕನ್ನಡ(ಈಗಿನ ಒನ್ಇಂಡಿಯಾ)ದ 'ಶಿರಸಿ ಭವನ' ಅಂಕಣ ಖ್ಯಾತಿಯ ಶ್ರೀಮತಿ ತೇಜಸ್ವಿನಿ ಹೆಗಡೆ ಅವರು ಈ ಸಾಲಿನ ಪ್ರಶಸ್ತಿ ವಿಜೇತರಾಗಿದ್ದಾರೆ.
ಹೊಸ ಕತೆಗಾರರನ್ನು ಬೆಳಕಿಗೆ ತರುವ ಉದ್ದೇಶದಿಂದ ಪ್ರತಿ ವರ್ಷ ಈ ರೀತಿ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗುತ್ತದೆ. ಪ್ರಶಸ್ತಿ ವಿಜೇತರಿಗೆ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಕೊಟ್ಟು ಅಭಿನಂದಿಸಲಾಗುತ್ತದೆ ಮತ್ತು ಕಾದಂಬರಿ/ಕಥಾ ಸಂಕಲನವನ್ನು ಸ್ವಸ್ತಿ ಪ್ರಕಾಶನವು ಪ್ರಕಟಿಸುತ್ತದೆ. ಪ್ರಶಸ್ತಿಯ ಮೊತ್ತದ ಜೊತೆ 25 ಪುಸ್ತಕಗಳನ್ನು ಅವರು ಪಡೆಯಲಿದ್ದಾರೆ. ಈ ಬಗ್ಗೆ ಪ್ರಿಯಾ ಭಟ್, ಕಲ್ಲಬ್ಬೆ ಅವರು ನಮ್ಮೊಂದಿಗೆ ಹಂಚಿಕೊಂಡಿರುವ ಮಾಹಿತಿ ಇಂತಿದೆ:

ಕಾದಂಬರಿ ಬರಹಗಾರರು ಬಹಳ ಕಡಿಮೆಯಾಗಿರುವ ಈ ಕಾಲಘಟ್ಟದಲ್ಲಿ ಕಾದಂಬರಿ ಸ್ಪರ್ಧೆ ಯನ್ನು ಸ್ವಸ್ತಿ ಪ್ರಕಾಶನ ಕೈಗೆತ್ತಿಕೊಳ್ಳಲು ಕಾರಣ, ನಮ್ಮನ್ನು ಪ್ರೋತ್ಸಾಹಿಸುತ್ತ ಸದಾಕಾಲ ಮಾರ್ಗದರ್ಶಿಯಾಗಿರುವ ಜಯಂತ್ ಕಾಯ್ಕಿಣಿ ಸರ್ ಹಾಗೂ ಆತ್ಮೀಯರು ಖ್ಯಾತ ಕಾದಂಬರಿಕಾರರೂ ಆಗಿರುವ ಕರಣಂ ಪವನ್ ಪ್ರಸಾದ್ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ಅರ್ಪಿಸುತ್ತ ಸ್ವಸ್ತಿ ಪ್ರಕಾಶನ ಕುಮಟಾ ಏರ್ಪಡಿಸಿದ್ದ ಕಾದಂಬರಿ ಸ್ಪರ್ಧೆ -2017 ರ ಫಲಿತಾಂಶ ಪ್ರಕಟಿಸುವ ಸಮಯ.
ಈ ಸ್ಪರ್ಧೆಯಲ್ಲಿ ನಾವು ಕೊಟ್ಟಿರುವ ಅತಿ ಚಿಕ್ಕ ಸಮಯದಲ್ಲಿ 7 ಕಾದಂಬರಿಗಳು ಬಂದಿದ್ದು ಮೂರು ಕಾದಂಬರಿಗಳು ಕೊನೆಯ ಸುತ್ತಿಗೆ ಆಯ್ಕೆಯಾಗಿದ್ದವು. ಕೊನೆಯ ಸುತ್ತಿನಲ್ಲಿ ನಿರ್ಣಾಯಕರಿಂದ ಆರಿಸಲ್ಪಟ್ಟಿದ್ದು ಶ್ರೀಮತಿ ತೇಜಸ್ವಿನಿ ಹೆಗಡೆ ಯವರ ಮೊದಲ ಕಾದಂಬರಿ "ಹೊರಳುದಾರಿ"
ಈ ಪೂರ್ಣ ಪ್ರಕ್ರಿಯೆಯಲ್ಲಿ ನಮ್ಮ ಜೊತೆಗಿದ್ದು ನಿರ್ಣಾಯಕತ್ವದ ಜವಾಬ್ಧಾರಿ ವಹಿಸಿದ ಸ್ವಸ್ತಿ ಪ್ರಕಾಶನದ ಸದಸ್ಯರು ಹಾಗೂ ಸಾಹಿತಿ ಡಾ.ಶ್ರೀಧರ್ ಬಳಗಾರ್ ಅವರಿಗೆ ಸ್ವಸ್ತಿ ಪ್ರಕಾಶನ ವು ತುಂಬು ಹೃದಯದ ಕೃತಜ್ಞತೆಗಳನ್ನು ಅರ್ಪಿಸುತ್ತದೆ. ಹಾಗೂ ವಿಜೇತರಿಗೆ ಹಾರ್ದಿಕ ಅಭಿನಂದನೆಗಳು.
ಕಾದಂಬರಿ ಸ್ಪರ್ಧೆಯಲ್ಲಿ ಆಯ್ಕೆಯಾದ ಕಾದಂಬರಿಯನ್ನು ಸ್ವಸ್ತಿ ಪ್ರಕಾಶನ ಪ್ರಕಟಿಸಲಿದೆ. ಪ್ರಶಸ್ತಿ ಪ್ರಧಾನ ಸಮಾರಂಭ ಜನವರಿಯಲ್ಲಿ ಶಿರಸಿಯ ಬಕ್ಕಳದ " ಶ್ರೀ ಶಂಕರ " ಬೆಣ್ಣೆಗದ್ದೆಯಲ್ಲಿ ನಡೆಯಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications