ತಾಲೂಕು ಪಂಚಾಯಿತಿ ವ್ಯವಸ್ಥೆ ತೆಗೆಯುವುದಿಲ್ಲ: ಸಚಿವರ ಸ್ಪಷ್ಟನೆ
ಶಿರಸಿ, ಫೆಬ್ರವರಿ 7: "ಯಾವುದೇ ಕಾರಣಕ್ಕೂ ತಾಲೂಕು ಪಂಚಾಯತಿ ವ್ಯವಸ್ಥೆಯನ್ನು ತೆಗೆಯಲು ಸಾಧ್ಯವಿಲ್ಲ. ತಾಲೂಕು ಪಂಚಾಯತಿ ತೆಗೆಯುವ ಹಕ್ಕು ಕೂಡ ರಾಜ್ಯಕ್ಕಿಲ್ಲ" ಎಂದು ಕಾರ್ಮಿಕ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ್ ಹೆಬ್ಬಾರ್ ಸ್ಪಷ್ಟನೆ ನೀಡಿದ್ದಾರೆ.
ಶಿರಸಿಯಲ್ಲಿ ಮಾತನಾಡಿದ ಅವರು, "ಗ್ರಾಮೀಣ ಭಾಗದಲ್ಲಿ ಮೂರು ಹಂತದ ಪಂಚಾಯತ್ ವ್ಯವಸ್ಥೆ ರಚನೆ ಮಾಡಿ ಸಂವಿಧಾನಾತ್ಮಕವಾಗಿ ಕಾನೂನನ್ನು ಮಾಡಲಾಗಿದೆ. ಗ್ರಾಮ ಪಂಚಾಯತಿ, ತಾಲೂಕು ಪಂಚಾಯಿತಿ, ನಂತರ ಜಿಲ್ಲಾ ಪಂಚಾಯತಿ ಎನ್ನುವ ವ್ಯವಸ್ಥೆಯನ್ನು ಕೇಂದ್ರ ಮಾಡಿದ್ದು, ಇದನ್ನ ತೆಗೆಯಲು ಕೇಂದ್ರಕ್ಕೆ ಮಾತ್ರ ಅವಕಾಶವಿದೆ" ಎಂದರು.
"ಒಂದೊಮ್ಮೆ ಎರಡು ಹಂತದ ವ್ಯವಸ್ಥೆಯನ್ನು ಮಾಡಬೇಕಾದರೆ ಕೇಂದ್ರವೇ ಆ ಬಗ್ಗೆ ನಿರ್ಧರಿಸಬೇಕು. ಈ ಹಿನ್ನಲೆಯಲ್ಲಿ ಈ ವ್ಯವಸ್ಥೆಯನ್ನು ತೆಗೆಯಲು ರಾಜ್ಯ ಸರ್ಕಾರಕ್ಕೆ ಅವಕಾಶವಿಲ್ಲ" ಎಂದು ಸಚಿವರು ಹೇಳಿದ್ದಾರೆ.

"ನನಗೂ ಈ ಬಗ್ಗೆ ಗೊಂದಲವಿತ್ತು. ಇತ್ತೀಚಿಗೆ ಗ್ರಾಮೀಣಾಭಿವೃದ್ಧಿ ಸಚಿವರು ಈ ಬಗ್ಗೆ ತನಗೂ ತಾಲೂಕು ಪಂಚಾಯಿತಿ ತೆಗೆಯಲು ಅವಕಾಶವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಜನರಲ್ಲಿ ಈ ಬಗ್ಗೆ ಗೊಂದಲ ಬೇಡ. ಈ ಬಾರಿ ತಾಲೂಕು ಪಂಚಾಯತಿ ಚುನಾವಣೆ ನಡೆಯಲಿದೆ" ಎಂದು ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ.
ಯಾಕೆ ಈ ಚರ್ಚೆ; ಗುರುವಾರ ವಿಧಾನಸಭೆ ಕಲಾಪದಲ್ಲಿ ಸೊರಬ ಶಾಸಕ ಕುಮಾರ್ ಬಂಗಾರಪ್ಪ ಶೂನ್ಯ ವೇಳೆಯಲ್ಲಿ, "ತಾಲೂಕು ಪಂಚಾಯಿತಿಗೆ ಹೆಚ್ಚಿನ ಅನುದಾನ ಸಿಗುತ್ತಿಲ್ಲ. ಗ್ರಾಮ ಮತ್ತು ಜಿಲ್ಲಾ ಪಂಚಾಯಿತಿಗೆ ಸಿಗುವ ಮಹತ್ವ ತಾಲೂಕು ಪಂಚಾಯಿತಿಗೆ ಸಿಗುತ್ತಿಲ್ಲ. ಮೂರು ಹಂತದ ಪಂಚಾಯಿತಿ ವ್ಯವಸ್ಥೆಯನ್ನು 2 ಹಂತಕ್ಕೆ ಇಳಿಸುವುದು ಸೂಕ್ತ" ಎಂದರು.
ಸದಸನದಲ್ಲಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ಸಚಿವ ಕೆ. ಎಸ್. ಈಶ್ವರಪ್ಪ, "ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಕೇಂದ್ರ ಸರ್ಕಾರದ ಕಾನೂನಿನ ಮೂಲಕ ಅಸ್ತಿತ್ವಕ್ಕೆ ಬಂದಿವೆ" ಎಂದರು.
"ತಾಲೂಕು ಪಂಚಾಯಿತಿ ರದ್ದು ಬಗ್ಗೆ ನಾವೇ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಕಳಿಸಲಾಗುತ್ತದೆ" ಎಂದು ಹೇಳಿದರು.
ಶೀಘ್ರದಲ್ಲಿಯೇ ತಾಲೂಕು ಪಂಚಾಯಿತಿ ಚುನಾವಣೆ ಎದುರಾಗುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ತಾಲೂಕು ಪಂಚಾಯಿತಿ ರದ್ದು ಬಗ್ಗೆ ಮಾತನಾಡಿದ್ದು, ಗೊಂದಲ ಹುಟ್ಟು ಹಾಕಿದೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications