ತೇಜಸ್ವಿನಿ ಅವರ 'ಹೊರಳುದಾರಿ' ಕೃತಿಗೆ ಸ್ವಸ್ತಿ ಪ್ರಕಾಶನ ಪ್ರಶಸ್ತಿ ಪ್ರದಾನ
ಶಿರಸಿ, ಜನವರಿ 04: ಕುಮಟಾದ ಸ್ವಸ್ತಿ ಪ್ರಕಾಶನ ಏರ್ಪಡಿಸಿದ್ದ ಕಾದಂಬರಿ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಸಮಾರಂಭ ದಿನಾಂಕ ಡಿ.31 ರಂದು ಶಿರಸಿ ತಾಲೂಕಿನ ಬಕ್ಕಳ ದ "ಶ್ರೀ ಶಂಕರ" ದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಸ್ವಸ್ತಿ ಪ್ರಕಾಶನದ ಬಹುಮಾನಿತ ಕೃತಿ ತೇಜಸ್ವಿನಿ ಹೆಗಡೆಯವರ "ಹೊರಳುದಾರಿ" ಕಾದಂಬರಿ ಲೋಕಾರ್ಪಣೆ ಹಾಗೂ ಶ್ರೀಮತಿ ತೇಜಸ್ವಿನಿಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಸ್ಪರ್ಧೆಯ ವಿಜೇತ ಕವಿಗಳಿಗೆ ಬಹುಮಾನ ವಿತರಣೆ ನಡೆದವು. ಪುಸ್ತಕ ಬಿಡುಗಡೆ ಮಾಡಿದ ಚಿಂತಕ ನಾರಾಯಣ ಶೇವಿರೆ ಅವರು ತೇಜಸ್ವಿನಿಯವರ ಸಾಹಿತ್ಯದ ಆಸಕ್ತಿ ಹಾಗೂ ಸಾಧನೆಯನ್ನು ಶ್ಲಾಘಿಸಿದರು.

ಬೆಳಗಿನ ಕಾರ್ಯಕ್ರಮದಲ್ಲಿ ಪೂರ್ಣಚಂದ್ರ ತೇಜಸ್ವಿಯವರ ಬದುಕು ಬರಹಗಳ ಕುರಿತು ಸಂವಾದ ಚರ್ಚೆ ಮಾತುಗಳು ನಡೆದವು. ಡಾ.ಗೋವಿಂದ ಹೆಗಡೆ, ಪ್ರಶಾಂತ್ ನಾಯ್ಕ ಕರ್ಕಿ, ಪ್ರಶಾಂತ್ ಪಟಗಾರ್ ದೇವರಬಾವಿ, ಗುರುಗಣೇಶ್, ಕರ್ಕಿ ಕೃಷ್ಣಮೂರ್ತಿ, ತೇಜಸ್ವಿನಿ ಹೆಗಡೆ, ಗಾಯತ್ರೀ ರಾಘವೇಂದ್ರ , ಇನ್ನೂ ಅನೇಕರು ಈ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕೃಷಿ ಪರಿಸರದ ನಡುವೆ ಈ ಮಾತುಕತೆ ಆತ್ಮೀಯವು ಪೂರಕವು ಆಗಿ ನಡೆಯಿತು.
ಸಂಜೆಯವರೆಗೆ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪರಿಸರ ತಜ್ಞ ಕೃಷಿ ವಿಜ್ಞಾನ ಬರಹಗಾರ ಶಿವಾನಂದ ಕಳವೆ ಯವರು ವಹಿಸಿದ್ದರು. ಸಾಹಿತ್ಯದ ಬದಲಾಗಬೇಕಾದ ದೃಷ್ಟಿಕೋನದ ಕುರಿತು ಮಾತನಾಡಿದ ಅವರು, ಹಳ್ಳಿಗಳ ಜೀವನದ ಕುರಿತು ಯಾವ ಬರಹಗಳೂ ಇತ್ತೀಚೆಗೆ ಕಾದಂಬರಿ ರೂಪದಲ್ಲಿ ಬರುತ್ತಿಲ್ಲ. ಜನಜೀವನವೇ ಇಂದಿಗೆ ಸಾಹಿತ್ಯದ ಪ್ರಸ್ತುತ ವಿಷಯವಾಗಬೇಕೆಂಬುದನ್ನು ವಿವರಿಸಿದರು. ಈ ಸಂದರ್ಭದಲ್ಲಿ ಸಾಹಿತಿ ಪೂರ್ಣಚಂದ್ರ ತೇಜಸ್ವಿಯವರ ಒಡನಾಟ, ಬದುಕು, ಬರಹಗಳ ಬಗೆಗೂ ಅನೇಕ ಮಾಹಿತಿ ತಿಳಿಸಿಕೊಟ್ಟರು.

ನಮ್ಮಿಂದ ನಿಮಗೆ ಕನ್ನಡವು ಮನೆಮನೆಗೆ ಎಂಬ ಸ್ವಸ್ತಿ ಪ್ರಕಾಶನದ ಆಶಯದಂತೆ ನಾಲ್ಕನೇ ವರ್ಷದ ಈ ಕಾರ್ಯಕ್ರಮ ಸಂಜಯ್ ಭಟ್ ಬೆಣ್ಣೆ ಯವರ ಮನೆ "ಶ್ರೀ ಶಂಕರ" ದ ಸುಂದರ ಪರಿಸರದಲ್ಲಿ ನಡೆಸಿಕೊಡಲಾಯಿತು. ಸ್ವತಃ ಸಂಜಯ್ ಭಟ್ ನಿರೂಪಿಸಿದರು. ರಾಜ್ಯದ ಅನೇಕ ಭಾಗಗಳಿಂದ ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications