ಉತ್ತರಕನ್ನಡ: ಯಲ್ಲಾಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಒಳಜಗಳದ ಭಾರೀ ಸದ್ದು!
ಶಿರಸಿ, ಅಕ್ಟೋಬರ್ 6: ಉತ್ತರ ಕನ್ನಡದ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಚಿವ ಆರ್.ವಿ. ದೇಶಪಾಂಡೆ ಪುತ್ರ ಪ್ರಶಾಂತ್ ದೇಶಪಾಂಡೆ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಸದ್ಯ ಕ್ಷೇತ್ರದ ಹಲವೆಡೆ ತಿರುಗಾಡಿ ಒಂದೆಡೆ ಪ್ರಶಾಂತ್ ದೇಶಪಾಂಡೆ ಪಕ್ಷ ಸಂಘಟನೆ ಮಾಡುತ್ತಿದ್ದರೆ, ಇನ್ನೊಂದೆಡೆ ಕ್ಷೇತ್ರದಲ್ಲಿ ಪಕ್ಷದ ಒಳಗಿನ ಜಗಳ ಕೆಲ ದಿನಗಳಿಂದ ಸಾಕಷ್ಟು ಸದ್ದು ಮಾಡುತ್ತಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಕ್ಷೇತ್ರದಲ್ಲಿ ಪಕ್ಷದ ಒಳಗಿನ ಜಗಳ ಸಾಕಷ್ಟು ಚರ್ಚೆಯಾಗುತ್ತಿದೆ. ಅದರಲ್ಲೂ ಶಿರಸಿ ತಾಲೂಕಿನ ಬಿಸಲಕೊಪ್ಪ ಘಟಕದ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಪ್ರಶಾಂತ್ ದೇಶಪಾಂಡೆ ವಿರುದ್ಧ ಮುನಿಸಿಕೊಂಡಿದ್ದು, ಬನವಾಸಿ ಬ್ಲಾಕ್ನಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳದೇ ಬಹಿಷ್ಕರಿಸಿ ಪಕ್ಷದ ಒಳಗೆ ಪ್ರತಿಭಟನೆಗೆ ಇಳಿದಿದ್ದಾರೆ.
ಕಳೆದ ಸೆಪ್ಟೆಂಬರ್ 29ರ ಶಿರಸಿ ನಗರದ ಅಂಬೇಡ್ಕರ್ ಸಮುದಾಯ ಭವನದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಹಮ್ಮಿಕೊಂಡಿದ್ದ ವೇಳೆ ಬನವಾಸಿ ಬ್ಲಾಕ್ನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳಿಗೆ ಬಿಸಲುಕೊಪ್ಪ ಘಟಕದ ಮುಖಂಡರನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಪಕ್ಷದ ಕಾರ್ಯಕ್ರಮಕ್ಕೆ ಕರೆಯದೆ ನಿರ್ಲಕ್ಷ್ಯ ವಹಿಸುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಪಕ್ಷದ ಮುಖಂಡರೊಬ್ಬರು ಕಿಡಿಕಾರಿದ್ದರಂತೆ.

ಈ ವಿಷಯವನ್ನು ಕೆಲ ಕಾಂಗ್ರೆಸ್ ಪಕ್ಷದ ಮುಖಂಡರು ಪ್ರಶಾಂತ್ ದೇಶಪಾಂಡೆಗೆ ತಿಳಿಸಿದ್ದು, ಇದು ಪ್ರಶಾಂತ್ ದೇಶಪಾಂಡೆ ಕಣ್ಣು ಕೆಂಪಾಗುವಂತೆ ಮಾಡಿದೆ. ಇದಲ್ಲದೇ ಕಳೆದ ಶುಕ್ರವಾರ ಬನವಾಸಿ ಬ್ಲಾಕ್ ಕಾಂಗ್ರೆಸ್ ಘಟಕದ ಕಾರ್ಯಕ್ರಮವನ್ನು ಪ್ರಶಾಂತ್ ದೇಶಪಾಂಡೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಅಸಮಾಧಾನ ತೋರಿದ ಮುಖಂಡರು ಬರಬಾರದು ಎಂದು ಬಿಸಲಕೊಪ್ಪ ಕಾಂಗ್ರೆಸ್ ಘಟಕದ ಅಧ್ಯಕ್ಷರಿಗೆ ಕರೆ ಮಾಡಿ ಪ್ರಶಾಂತ್ ದೇಶಪಾಂಡೆ ಹೇಳಿದ್ದಾರೆ ಎನ್ನುವ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ.
ತನ್ನ ವಿರುದ್ಧ ಅಸಮಾಧಾನ ತೋರಿದ ಮುಖಂಡನನ್ನು ಬೆಂಬಲಿಸಿದರೆ, ಬಿಸಲಕೊಪ್ಪ ಘಟಕದ ಅಧ್ಯಕ್ಷರು ಬೇಕಿದ್ದರೆ ಪಕ್ಷ ಬಿಟ್ಟು ಹೋಗುವಂತೆ ಪ್ರಶಾಂತ್ ದೇಶಪಾಂಡೆ ಹೇಳಿದ್ದಾರೆ ಎನ್ನಲಾಗಿದ್ದು, ಇದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೂ ಸಿಟ್ಟು ತರಿಸಿದೆ. ಇದೇ ಕಾರಣಕ್ಕೆ ಬಿಸಲಕೊಪ್ಪ ಘಟಕದ ಕಾಂಗ್ರೆಸ್ ಕಾರ್ಯಕರ್ತರು ಬನವಾಸಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದು, ಕಾರ್ಯಕ್ರಮ ಯಾವುದೇ ಕಾರಣಕ್ಕೂ ವಿಫಲ ಆಗಬಾರದು ಎಂದು ಬನವಾಸಿ ಬ್ಲಾಕ್ನ ಉಳಿದ 9 ಪಂಚಾಯತ್ ಘಟಕದಿಂದ ಅಧಿಕ ಜನರನ್ನು ಕರೆಸಿ ಪ್ರಶಾಂತ್ ದೇಶಪಾಂಡೆ ಕಾರ್ಯಕ್ರಮ ಮಾಡಿದ್ದಾರೆ ಎನ್ನಲಾಗಿದೆ.

ಇನ್ನು ಬಿಸಲಕೊಪ್ಪ ಭಾಗದ ಕಾಂಗ್ರೆಸ್ ಮುಖಂಡ ಯಾವ ಕಾರಣಕ್ಕೆ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದರು, ಪ್ರಶಾಂತ್ ದೇಶಪಾಂಡೆ ಘಟಕದ ಅಧ್ಯಕ್ಷರಿಗೆ ನಿಜವಾಗಿಯೂ ಮುಖಂಡನ ವಿರುದ್ಧ ಅಸಮಾಧಾನ ಹೊರಹಾಕಿದ್ದಾರಾ ಎನ್ನುವ ವಿಚಾರ ಮಾತ್ರ ಯಾರೂ ಸ್ಪಷ್ಟ ಪಡಿಸುತ್ತಿಲ್ಲ. ಇದೇ ಘಟಕ ಬನವಾಸಿ ಕಾಂಗ್ರೆಸ್ ಬ್ಲಾಕ್ನಲ್ಲಿ ಎರಡು ಗುಂಪಾಗಲು ಕಾರಣವಾಗಿದ್ದು, ಒಂದು ಗುಂಪು ಪ್ರಶಾಂತ್ ದೇಶಪಾಂಡೆ ಪರ ನಿಂತಿದ್ದರೆ, ಮತ್ತೊಂದು ಗುಂಪು ಪ್ರಶಾಂತ್ ದೇಶಪಾಂಡೆ ತನ್ನ ಹೇಳಿಕೆ ಹಿಂಪಡೆದು ಎಲ್ಲರೊಟ್ಟಿಗೆ ಕೆಲಸ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಇನ್ನೊಂದೆಡೆ ಘಟನೆ ಖಂಡಿಸಿ ಬಿಸಲಕೊಪ್ಪ ಭಾಗದ ಕಾಂಗ್ರೆಸ್ ಪಕ್ಷದ ಯುವಕನೋರ್ವ ಗೋಬ್ಯಾಕ್ ಪ್ರಶಾಂತ್ ದೇಶಪಾಂಡೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದು, ಯುವಕನ ವಿರುದ್ಧ ಬನವಾಸಿ ಠಾಣೆಯಲ್ಲಿ ಬನವಾಸಿ ಬ್ಲಾಕ್ ಅಧ್ಯಕ್ಷರು ದೂರನ್ನು ಸಹ ನೀಡಿದ್ದಾರೆ. ಕಳೆದ ಮೂರ್ನಾಲ್ಕು ದಿನಗಳಿಂದ ಬನವಾಸಿ ಬ್ಲಾಕ್ನಲ್ಲಿ ಪಕ್ಷದ ನಾಯಕರ ನಡುವಿನ ಮುಸುಕಿನ ಗುದ್ದಾಟ ಸಾಕಷ್ಟು ಚರ್ಚೆಯಾಗುತ್ತಿದ್ದು, ಇದು ಯಾವ ರೂಪ ಪಡೆಯಲಿದೆ ಎನ್ನುವುದನ್ನು ಕಾದು ನೋಡಬೇಕಾಗಿದೆ.
ಪ್ರಶಾಂತ್ ವರ್ತನೆ ಬದಲಿಸಿಕೊಳ್ಳಬೇಕು:
"ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಪ್ರಶಾಂತ್ ದೇಶಪಾಂಡೆ ತಮ್ಮ ವರ್ತನೆ ಬದಲಿಸಿಕೊಂಡರೆ ಮುಂದಿನ ದಿನದಲ್ಲಿ ಭವಿಷ್ಯದಲ್ಲಿ ಒಳ್ಳೆಯದಾಗಲಿದೆ," ಎಂದು ಕ್ಷೇತ್ರದ ಹೆಸರು ಹೇಳದ ಮುಖಂಡರೊಬ್ಬರು ಹೇಳಿದ್ದಾರೆ.
"ಅಭ್ಯರ್ಥಿ ಇಲ್ಲದೇ ಸೊರಗಿದ್ದ ಯಲ್ಲಾಪುರ ಕ್ಷೇತ್ರಕ್ಕೆ ಪ್ರಶಾಂತ್ ದೇಶಪಾಂಡೆ ಆಗಮಿಸಿರುವುದು ಖುಷಿ ತಂದಿದೆ. ಕ್ಷೇತ್ರದಲ್ಲಿ ಉತ್ತಮವಾಗಿ ಸಂಘಟನೆ ಸಹ ಮಾಡುತ್ತಿದ್ದಾರೆ. ಭವಿಷ್ಯದಲ್ಲಿ ಶಿವರಾಮ್ ಹೆಬ್ಬಾರ್ ವಿರುದ್ಧ ಗೆಲ್ಲಲು ಇನ್ನಷ್ಟು ಕೆಲಸ ಮಾಡಬೇಕಾಗಿದೆ. ಆದರೆ ಇದರ ನಡುವೆ ಕಾರ್ಯಕರ್ತರ ವಿರುದ್ಧ ಪ್ರಶಾಂತ್ ದೇಶಪಾಂಡೆ ಈಗಲೇ ಸಿಟ್ಟಾದರೆ ಕಷ್ಟವಾಗಲಿದೆ. ಎಲ್ಲಾ ಕಾರ್ಯಕರ್ತರನ್ನು ಪ್ರೀತಿಯಿಂದ ಕಂಡು ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಕಾರ್ಯ ಪ್ರಶಾಂತ್ ದೇಶಪಾಂಡೆ ಮಾಡಲಿ," ಎಂದು ಹೇಳಿದ್ದಾರೆ.
Recommended Video
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications