ರಸ್ತೆ ಅಪಘಾತದಲ್ಲಿ ವರದಿಗಾರ ಮೌನೇಶ್ ಪೋತರಾಜ್ ನಿಧನ
ಶಿರಸಿ, ಜನವರಿ 14: ಸುದ್ದಿ ಟಿವಿಯ ಉತ್ತರಕನ್ನಡ ಜಿಲ್ಲಾ ವರದಿಗಾರನಾಗಿ ಶಿರಸಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೌನೇಶ ಪೋತರಾಜ (28) ತನ್ನ ಸ್ವಂತ ಊರಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಮರಕ್ಕೆ ಢಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಶನಿವಾರ ಶಿರಸಿಯಲ್ಲಿ ನಡೆದ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಈ ವಿಷಯದ ಕುರಿತು ನಡೆದ ರಾಜ್ಯ ಸಮಾವೇಶದ ವರದಿಯನ್ನು ಮಾಡಿ ಬಳಿಕ ರಾತ್ರಿ ವೇಳೆ ತನ್ನ ಊರಾದ ಹಾವೇರಿಯ ಛಬ್ಬಿ ಗ್ರಾಮಕ್ಕೆ ತೆರಳುತ್ತಿದ್ದರು.

ರಾತ್ರಿ ವೇಳೆ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಗುಂಡೂರು ಗ್ರಾಮದ ಬಳಿ ದುರ್ಘಟನೆ ಸಂಭವಿಸಿದೆ.ತಿರುವಿನಿಂದ ಕೂಡಿದ ರಸ್ತೆಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ರಸ್ತೆ ಕಾಣದಾಗಿ ಈ ಘಟನೆ ನಡೆದಿರಬಹುದು ಎಂದು ಊಹಿಸಲಾಗಿದೆ.
ಸ್ಥಳಕ್ಕೆ ಹಾನಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮೌನೇಶ್, ತಮ್ಮ ಉತ್ತಮ ವರದಿಗಾರಿಕೆಯ ಜತೆಗೆ ಪ್ರಗತಿಪರ ಚಿಂತಕರಾಗಿ, ಸಾಹಿತಿಯಾಗಿಯೂ ಅತೀ ಚಿಕ್ಕ ವಯಸ್ಸಿನಲ್ಲಿಯೇ ಪ್ರತಿಭಾನ್ವಿತರಾಗಿ ಹೊರಹೊಮ್ಮಿದ್ದರು. ಸಿನಿಮಾಗಳಿಗೆ ಸಾಹಿತ್ಯಗಳನ್ನು ಕೂಡ ಅವರು ಬರೆಯುತ್ತಿದ್ದರು.
ಮೌನೇಶ್ ಅವರ ದುರಂತ ಸಾವಿಗೆ ಕಂಬನಿ ಮಿಡಿದು, ಅನೇಕ ಸ್ನೇಹಿತರು ಫೇಸ್ ಬುಕ್ ನಲ್ಲಿ ತಮ್ಮ ದುಃಖ ತೋಡಿಕೊಂಡಿದ್ದಾರೆ. ದಯಾನಂದ ಟಿ.ಕೆ ಅವರ ಫೇಸ್ ಬುಕ್ ಪೋಸ್ಟ್ ಹೀಗಿದೆ:
ಇತ್ತೀಚಿಗಷ್ಟೆ ಫಸ್ಟ್ ನ್ಯೂಸ್ ಗೆ ಬೆಳಗಾವಿ ಜಿಲ್ಲಾ ವರದಿಗಾರನಾಗಿ ಆಯ್ಕೆಯಾಗಿರುವುದಾಗಿ ಕೂಡ ಇತರ ವರದಿಗಾರರೊಂದಿಗೆ ಹಂಚಿಕೊಂಡಿದ್ದರು. ಎಲ್ಲರೊಂದಿಗೆ ಸ್ನೇಹಿಯಾಗಿದ್ದ ಅವರ ಅಗಲಿಕೆಗೆ ಮಿತ್ರ ವೃಂದ ಕಂಬನಿ ಮಿಡಿದಿದೆ.
-
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Asha Bosle Net Worth: ದೇಶ-ವಿದೇಶಗಳಲ್ಲಿ ರೆಸ್ಟೊರೆಂಟ್ಸ್, ನೂರಾರು ಕೋಟಿ ಒಡತಿ ಆಶಾ ಭೋಸ್ಲೆ ಒಟ್ಟು ಆಸ್ತಿ ವಿವರ ಹೀಗಿದೆ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications