ಆನ್ಲೈನ್ ಕ್ರಿಕೆಟ್ ಬೆಟ್ಟಿಂಗ್: ಮೂವರ ಬಂಧನ
ಬೆಂಗಳೂರು, ಅ.28: ಟಿ-20 ವಿಶ್ವಕಪ್ನಲ್ಲಿ ವಿವಿಧ ತಂಡಗಳ ಮೇಲೆ ಆ್ಯಪ್ಗಳ ಮೂಲಕ ಜನಸಾಮಾನ್ಯರನ್ನು ಬೆಟ್ಟಿಂಗ್ ಜೂಜಾಟದಲ್ಲಿ ತೊಡಗಿಸಿಕೊಳ್ಳುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಪಾಕಿಸ್ತಾನ- ನ್ಯೂಜಿಲ್ಯಾಂಡ್, ದಕ್ಷಿಣ ಆಫ್ರಿಕಾ- ವೆಸ್ಟ್ ಇಂಡೀಸ್ ಹಾಗೂ ಇಂಗ್ಲೆಂಡ್- ಬಾಂಗ್ಲಾದೇಶಗಳ ಮಧ್ಯೆ ನಡೆದ ಟಿ-20 ವಿಶ್ವಕಪ್ನಲ್ಲಿ ಪಂದ್ಯಗಳಿಗೆ ಆನ್ಲೈನ್ ಮೂಲಕ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದರು. ಸೋತವರಿಂದ ಹಣ ಪಡೆದು, ಅದನ್ನು ಗೆದ್ದವರಿಗೆ ಕೊಡುತ್ತಿದ್ದರು. ಇಂತಹ ಕೆಲಸದಲ್ಲಿ ತೊಡಗಿದ್ದ ಮೂವರನ್ನು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತರನ್ನು ಬೆಂಗಳೂರಿನ ನಿವಾಸಿಗಳಾದ ಓಂ ಪ್ರಕಾಶ್, ಸತ್ಪಾಲ್ ಸಿಂಗ್ ಹಾಗೂ ಗೇವರ್ ಚಂದ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 3.50 ಲಕ್ಷ ನಗದು ಹಾಗೂ ಮೂರು ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಇದರಲ್ಲಿ ಓಂ ಪ್ರಕಾಶ್ sky exchange.com, ಸತ್ಪಾಲ್ ಸಿಂಗ್ jet exchange9.com ಹಾಗೂ ಗೇವರ್ ಚಂದ್ lords exchange.com ಮೂಲಕ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದರು.
ಆನ್ಲೈನ್ ಆ್ಯಪ್ ಹಾಗೂ ವೆಬ್ಸೈಟ್ಗಳ ಮೂಲಕ ಬೆಟ್ಟಿಂಗ್ ರೇಷ್ಯೂಗಳನ್ನು ನೋಡಿಕೊಂಡು ಮೊಬೈಲ್ ಫೋನ್, ವಾಟ್ಸ್ಆ್ಯಪ್ ಮೂಲಕ ಜನರನ್ನು ಸಂಪರ್ಕಿಸಿ ಅವರ ಇಷ್ಟದ ತಂಡಗಳ ಮೇಲೆ ಬೆಟ್ಟಿಂಗ್ ಕಟ್ಟಿಸಿಕೊಳ್ಳುತ್ತಿದ್ದರು. ಪಂದ್ಯ ಮುಗಿದ ಬಳಿಕ ಸೋತವರಿಂದ ಪಡೆದ ಹಣದಲ್ಲಿ ಒಂದಷ್ಟು ಪಾಲು ತಮ್ಮ ಕಮಿಷನ್ ಇಟ್ಟುಕೊಂಡು ಗೆದ್ದವರಿಗೆ ನೀಡುತ್ತಿದ್ದರು.
ಸಿಸಿಬಿ ವಿಶೇಷ ವಿಚಾರದಣಾ ದಳದ ಅಧಿಕಾರಿ ಮತ್ತು ಸಿಬ್ಬಂದಿ ಈ ದಾಳಿ ನಡೆಸಿದ್ದು, ಆರೋಪಿಗಳ ವಿರುದ್ಧ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಮೂರು ದೂರುಗಳನ್ನು ದಾಖಲಿಸಲಾಗಿದೆ.
-
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications