ಪ್ಲೀಸ್ ವಿರಾಟ್ ಇದೇ ಕ್ರಮಾಂಕದಲ್ಲಿ ಆಡಿ: ಸ್ನೇಹಿತ ಎಬಿಡಿ ಕಳಕಳಿಯ ಮನವಿ
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಆರಂಭಿಕರಾಗಿ ರನ್ ಕಲೆ ಹಾಕುವಲ್ಲಿ ವಿಫಲರಾಗುತ್ತಿದ್ದಾರೆ. ಅಫ್ಘಾನಿಸ್ತಾನದ ವಿರುದ್ಧ ಪಂದ್ಯದಲ್ಲಿ 24 ರನ್ಗಳಿಗೆ ಆಟ ಮುಗಿಸಿದರು. ಉಳಿದಂತೆ ಲೀಗ್ ಹಂತದ ಮೂರು ಪಂದ್ಯಗಳಲ್ಲಿ ವಿರಾಟ್ ಸಿಂಗಲ್ ಡಿಜಿಟ್ನಲ್ಲಿ ಆಟ ಮುಗಿಸಿದ್ದರು.
ಐಪಿಎಲ್ನಲ್ಲಿ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕೆ ಇಳಿದು ಯಶಸ್ಸು ಕಂಡಿದ್ದರು. ಅಲ್ಲದೆ ಅವರಿಗೆ ಟಿ20 ವಿಶ್ವಕಪ್ 2024ನಲ್ಲಿ ಅವರು ಭಾರತದ ಪರ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ. ಅಮೆರಿಕದಲ್ಲಿ ನಡೆದ ಲೀಗ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾಗಿದ್ದರು. ಹೀಗಾಗಿ ಅವರ ಅಭಿಮಾನಿಗಳು ತಮ್ಮ ಸ್ಥಾನದಲ್ಲೇ ವಿರಾಟ್ ಆಡಲಿ ಎಂದು ಹೇಳಿದ್ದರು. ಈಗ ವಿರಾಟ್ ಸ್ನೇಹಿತ ಎಬಿ ಡಿ ವಿಲಿಯರ್ಸ್ ಸಹ ಇದಕ್ಕೆ ಧ್ವನಿ ಗುಡಿಸಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿರುವ ಎಬಿ ಡಿ ವಿಲಿಯರ್ಸ್ ಆರಂಭಿಕರಾಗಿ ಆಡಬೇಕೋ ಬೇಡವೋ ಎಂಬುದರ ಬಗ್ಗೆ ತಮ್ಮ ಅನಿಸಿಕೆ ತಿಳಿಸಿದ್ದಾರೆ. ಎಬಿಡಿ ಪ್ರಕಾರ ವಿರಾಟ್, ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದರೆ ಬೆಸ್ಟ್ ಎಂದು ಹೇಳಿದ್ದಾರೆ.
ನಾಯಕ, ಕೋಚ್ಗೆ ಮನವಿ
ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಲಿ ಎಂದು ಮಿಸ್ಟರ್ 360 ಡಿಗ್ರಿ ಎಬಿಡಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮನವಿ ಮಾಡಿದ್ದಾರೆ.
ಡಿವಿಲಿಯರ್ಸ್ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಈ ಬಗ್ಗೆ ಚರ್ಚಿಸುತ್ತಿದ್ದರು. ವಿರಾಟ್ರನ್ನು 3ನೇ ಸ್ಥಾನದಲ್ಲಿ ಆಡಿ ಎಂದು ನಾನು ಯಾವಾಗಲೂ ಹೇಳುತ್ತಿದ್ದೆ. ವಿಶೇಷವಾಗಿ ಅವರು ಈಗ ಅವರು ಉತ್ತಮ ವಿಕೆಟ್ಗಳ ಮೇಲೆ ಆಡುತ್ತಾರೆ. ಮೂರನೇ ಕ್ರಮಾಂಕದಲ್ಲಿ ಆಡಿದರೆ ಬೆಸ್ಟ್. ಅವರು ಇಲ್ಲಿ ಆಕ್ರಮಣಕಾರಿ ಆಟವನ್ನೂ ಆಡಬಹುದು ಮತ್ತು ಅಗತ್ಯವಿದ್ದರೆ ಒತ್ತಡವನ್ನು ಮೆಟ್ಟಿ ನಿಲ್ಲಬಹುದು. ಅವರು ಮಧ್ಯಮ ಓವರ್ಗಳಲ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್ಮನ್ ಎಂದು ತಿಳಿಸಿದ್ದಾರೆ.

ಕಳೆದ ಕೆಲವು ವಿಶ್ವಕಪ್ಗಳಲ್ಲಿ, ಅವರು ಸ್ವಲ್ಪ ಸಾಂಪ್ರದಾಯಿಕ ಶೈಲಿಯಲ್ಲಿ ಬ್ಯಾಟ್ ಮಾಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ಅವರ ಆಟವನ್ನು ನೋಡಿದ ನಂತರ ನನಗೆ ಹೀಗೆ ಅನಿಸುತ್ತದೆ. ಅವರು ನಿಜವಾಗಿಯೂ ಸ್ವಲ್ಪ ರಿಸ್ಕ್ ತೆಗೆದುಕೊಳ್ಳಬಹುದೆಂದು ನಾನು ಭಾವಿಸುತ್ತೇನೆ ಏಕೆಂದರೆ ಅವರು ಒಮ್ಮೆ ಲಯವನ್ನು ಪಡೆದರೆ, ವಿರಾಟ್ ಕೊಹ್ಲಿ ಹಿಂತಿರುಗಿ ನೋಡುವ ಪ್ರಶ್ನೆಯೇ ಇಲ್ಲ ಎಂದು ಎಬಿಡಿ ಹೇಳಿದ್ದಾರೆ.
ಆಫ್ಘನ್ ವಿರುದ್ಧ 24 ರನ್
ವಿರಾಟ್ ಕೊಹ್ಲಿ ಅಫ್ಘಾನಿಸ್ತಾನದ ವಿರುದ್ಧ ಪಂದ್ಯದಲ್ಲಿ 24 ರನ್ ಸಿಡಿಸಿ ಲಯಕ್ಕೆ ಮರಳುವ ಸೂಚನೆ ನೀಡಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ಗಳಲ್ಲಿ 8 ವಿಕೆಟ್ಗೆ 181 ರನ್ ಸೇರಿಸಿತು. ಟೀಮ್ ಇಂಡಿಯಾ ಪರ ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ 28 ಎಸೆತಗಳಲ್ಲಿ 53 ರನ್ ಸಿಡಿಸಿದ್ದರು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಆಫ್ಘನ್ 20 ಓವರ್ಗಳಲ್ಲಿ 134 ರನ್ಗಳಿಗೆ ಆಲೌಟ್ ಆಗಿದೆ.
-
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB Vs SHR: ಚಿನ್ನಸ್ವಾಮಿಯಲ್ಲಿ ಎಸ್ಆರ್ಎಚ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್ಸಿಬಿ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
IPL 2026: RCB ಫ್ಯಾನ್ಸ್ಗಾಗಿ ಬಿಎಂಟಿಸಿ ಬಸ್ಗಳ ಕಾರ್ಯಾಚರಣೆ, ಎಲ್ಲಿಂದ ಎಲ್ಲಿಗೆ? ಮಾರ್ಗ ಡಿಟೇಲ್ಸ್ -
RCB: ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾಲುದಾರ ನವಿ ಯುಪಿಐ, ಫ್ಯಾನ್ಸ್ ಗಮನಿಸಿ -
IPL VIP Ticket: ಐಪಿಎಲ್ ಟಿಕೆಟ್ ನನಗಂತೂ ಬೇಡ: ಆರ್ಸಿಬಿ ಪಂದ್ಯದ ಟಿಕೆಟ್ ನಿರಾಕರಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಮೈದಾನಕ್ಕೆ ಬರ್ತಾರಾ ಆರ್ಸಿಬಿ ಅಭಿಮಾನಿಗಳ ಹೊಸ ಕ್ರಶ್ ಬಿರ್ಲಾ ಕುಡಿ ಅನನ್ಯಾ?; ಕಾವ್ಯಾ ಮಾರನ್ ಬಗ್ಗೆ ಹೊಸ ಚರ್ಚೆ -
RCB Playing 11 Prediction: ಎಸ್ಆರ್ಎಚ್ ವಿರುದ್ಧ ಆರ್ಸಿಬಿ ಪ್ಲೇಯಿಂಗ್ 11 -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ









Click it and Unblock the Notifications