RCB: ಆರ್ಸಿಬಿ vs ಕೆಕೆಆರ್ ಫೈನಲ್ ಆಡ್ತಾರೆ; ಕಪ್ ಗೆಲ್ಲೋದು ನಾವೇ ಎಂದ ಎಬಿಡಿ
ಐಪಿಎಲ್ 2024ರ ರಣರೋಚಕ ಲೀಗ್ ಹಂತದ ಪಂದ್ಯಗಳು ಮುಕ್ತಾಯಗೊಂಡಿದ್ದು, ಪ್ಲೇಆಫ್ನಲ್ಲಿ ನಡೆದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದ ಕೋಲ್ಕತಾ ನೈಟ್ ರೈಡರ್ಸ್ ಫೈನಲ್ಗೆ ಲಗ್ಗೆಯಿಟ್ಟಿದೆ.
ಕೆಕೆಆರ್ ವಿರುದ್ಧ ಸೋತರೂ ಸನ್ರೈಸರ್ಸ್ ಹೈದರಾಬಾದ್ಗೆ ಪ್ಲೇಆಫ್ಗೆ ಹೋಗಲು ಇನ್ನೊಂದು ಅವಕಾಶ ಇದೆ. ಇಂದು (ಬುಧವಾರ) ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ಆರ್ಸಿಬಿ ರಾಜಸ್ಥಾನ ರಾಯಲ್ಸ್ ವಿರುದ್ಧ ಸೆಣೆಸಲಿದೆ. ಈ ಪಂದ್ಯದಲ್ಲಿ ಗೆದ್ದವರು ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕ್ವಾಲಿಫೈಯರ್ 2 ಪಂದ್ಯದಲ್ಲಿ ಆಡಲಿದ್ದಾರೆ, ಅಲ್ಲಿ ಗೆಲ್ಲುವ ತಂಡ ಫೈನಲ್ನಲ್ಲಿ ಕೆಕೆಆರ್ ತಂಡವನ್ನು ಎದುರಿಸಲಿದೆ.

ಕ್ವಾಲಿಫೈಯರ್ 1 ಪಂದ್ಯಕ್ಕೆ ಮುನ್ನವೇ ಆರ್ಸಿಬಿ ಮಾಜಿ ಆಟಗಾರ ಎಬಿ ಡಿ ವಿಲಿಯರ್ಸ್ ಐಪಿಎಲ್ 2024 ಫೈನಲ್ನ ಭವಿಷ್ಯ ನುಡಿದಿದ್ದಾರೆ. ಕೆಕೆಆರ್ ಮತ್ತು ಆರ್ಸಿಬಿ ಈ ಬಾರಿ ಫೈನಲ್ನಲ್ಲಿ ಸೆಣೆಸಲಿದ್ದು, ಆರ್ಸಿಬಿ ಕಪ್ ಗೆಲ್ಲಲಿದೆ ಎಂದು ಹೇಳಿದ್ದಾರೆ.
16 ವರ್ಷಗಳ ಐಪಿಎಲ್ನಲ್ಲಿ ಮೂರು ಬಾರಿ ಫೈನಲ್ ಪ್ರವೇಶಿಸಿದ್ದರೂ, ಆರ್ಸಿಬಿ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಈ ಬಾರಿ ಟೂರ್ನಿಯಿಂದಲೇ ಹೊರಬಿದ್ದರು ಎನ್ನುವಾಗ 10ನೇ ಸ್ಥಾನದಲ್ಲಿದ್ದ ಆರ್ಸಿಬಿ ಸತತ 6 ಪಂದ್ಯಗಳನ್ನು ಗೆದ್ದು ಪ್ಲೇಆಫ್ಗೆ ಪ್ರವೇಶ ಪಡೆದುಕೊಂಡಿದ್ದು ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿದೆ.
ಪ್ರಶಸ್ತಿ ಗೆಲ್ಲಲು ಮೂರು ಹೆಜ್ಜೆ
ಆರ್ಸಿಬಿ ಪ್ರಶಸ್ತಿಯ ಬರವನ್ನು ಕೊನೆಗಾಣಿಸಲು ಇನ್ನು ಮೂರು ಸರಿಯಾದ ಹೆಜ್ಜೆಗಳನ್ನು ಇಡಬೇಕಿದೆ. ಸತತ ಆರು ಪಂದ್ಯ ಗೆದ್ದವರು ಇನ್ನು ಮೂರು ಪಂದ್ಯ ಗೆದ್ದರೆ ಹೊಸ ಇತಿಹಾಸ ಬರೆಯಲಿದ್ದಾರೆ. ಅದು ಆರ್ಸಿಬಿ ಕೋಟ್ಯಂತರ ಅಭಿಮಾನಿಗಳ ಆಸೆ, ಹಾರೈಕೆ ಕೂಡ ಆಗಿದೆ.
ಅಹಮದಾಬಾದ್ನಲ್ಲಿ ಇಂದು ನಡೆಯಲಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಸೆಣೆಸಲಿದೆ. ಆರ್ಸಿಬಿ ಸತತ ಆರು ಪಂದ್ಯ ಗೆದ್ದು ಪ್ಲೇಆಫ್ಗೆ ಬಂದರೆ, ರಾಜಸ್ಥಾನ ರಾಯಲ್ಸ್ ಕೊನೆಯ 5 ಪಂದ್ಯಗಳಲ್ಲಿ 4 ಪಂದ್ಯಗಳನ್ನು ಸೋತಿದ್ದು, ಒಂದು ಪಂದ್ಯ ಮಳೆಯಿಂದ ರದ್ದಾಗಿದೆ. ಹೀಗಾಗಿ ಇಂದು ಆರ್ಸಿಬಿ ಹೆಚ್ಚಿನ ವಿಶ್ವಾಸದಿಂದ ಮೈದಾನಕ್ಕಿಳಿಯಲಿದೆ.
ಭಾರತಕ್ಕೆ ಬಂದ ಎಬಿಡಿ
ಇನ್ನು ಆರ್ಸಿಬಿ ಪ್ಲೇಆಫ್ ಪ್ರವೇಶಿಸಿದ ಬೆನ್ನಲ್ಲೇ ಎಬಿ ಡಿವಿಲಿಯರ್ಸ್ ಭಾರತಕ್ಕೆ ಬಂದಿದ್ದಾರೆ. ಮುಂಬೈಗೆ ಆಗಮಿಸಿರುವ ಅವರು, ಇಂದು ಅಹಮದಾಬಾದ್ನಲ್ಲಿ ಕ್ರೀಡಾಂಗಣಕ್ಕೆ ಹೋಗಬಹುದು ಎನ್ನಲಾಗಿದೆ.
ಸಿಎಸ್ಕೆ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ ಮಾಜಿ ಆಟಗಾರ ಕ್ರಿಸ್ಗೇಲ್ ಬಂದಿದ್ದರು, ಸಿಎಸ್ಕೆ ವಿರುದ್ಧ ಗೆದ್ದ ಬಳಿಕ ಡ್ರೆಸ್ಸಿಂಗ್ ರೂಮ್ನಲ್ಲಿ ಆಟಗಾರರ ಜೊತೆ ಕಾಲ ಕಳೆದಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications