RCB: ಸೋಲಿನಿಂದ ಕಂಗೆಟ್ಟಿರುವ ಆರ್ಸಿಬಿ ತಂಡಕ್ಕೆ ಮಹತ್ವದ ಸಂದೇಶ ಕೊಟ್ರು ಎಬಿಡಿ
ಆರ್ಸಿಬಿ ಹೊಸ ಅಧ್ಯಾಯ ಯಾಕೋ ಸರಿಯಾಗಿ ಆರಂಭವಾಗಿಲ್ಲ. ತಂಡದ ಆಯ್ಕೆಯಲ್ಲಿ ಮಾಡುತ್ತಿರುವ ಎಡವಟ್ಟುಗಳು, ದೊಡ್ಡ ಆಟಗಾರರ ವೈಫಲ್ಯದ ಪರಿಣಾಮ ಆರ್ಸಿಬಿ ಐಪಿಎಲ್ 2024ರಲ್ಲಿ ಆಡಿರುವ 4 ಪಂದ್ಯಗಳಲ್ಲಿ ಮೂರು ಸೋಲು ಕಂಡಿದೆ.
ತಂಡದ ಪ್ರದರ್ಶನ ಕಂಡು ಒಂದೆಡೆ ಅಭಿಮಾನಿಗಳು ಆಕ್ರೋಶಗೊಂಡಿದ್ದರೆ, ಮಾಜಿ ಕ್ರಿಕೆಟಿಗರು ಕೂಡ ಬ್ಯಾಟಿಂಗ್ ವೈಫಲ್ಯದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತವರಿನಲ್ಲಿ ಸತತ ಎರಡು ಪಂದ್ಯಗಳನ್ನು ಸೋತಿರುವ ಆರ್ಸಿಬಿ ಮುಂದಿನ ಪಂದ್ಯದಲ್ಲಿ ಬಲಿಷ್ಠ ರಾಜಸ್ಥಾನ ರಾಯಲ್ಸ್ ತಂಡವನ್ನು ಅವರ ತವರಿನಲ್ಲಿ ಎದುರಿಸಲಿದೆ.

ಆರ್ಆರ್ ವಿರುದ್ಧದ ಪಂದ್ಯಕ್ಕೆ ಮುನ್ನ ಆರ್ಸಿಬಿ ತಂಡಕ್ಕೆ ಮಾಜಿ ಆಟಗಾರ, ಬ್ಯಾಟಿಂಗ್ ದಿಗ್ಗಜ ಎಬಿ ಡಿ ವಿಲಿಯರ್ಸ್ ಮಹತ್ವದ ಸಂದೇಶ ರವಾನಿಸಿದ್ದಾರೆ. ಅದರಲ್ಲೂ ವಿರಾಟ್ ಕೊಹ್ಲಿ ಅವರಿಗೆ ವಿಶೇಷ ಸಂದೇಶ ನೀಡಿದ್ದಾರೆ.
ಸ್ಫೋಟಕ ಬ್ಯಾಟಿಂಗ್ ಮಾಡಿ
ಆರ್ಸಿಬಿ ತಂಡದಲ್ಲಿ ಸದ್ಯ ಫಾರ್ಮ್ನಲ್ಲಿರುವ ಬ್ಯಾಟರ್ ವಿರಾಟ್ ಕೊಹ್ಲಿ ಒಬ್ಬರೇ. ಮಧ್ಯಮ ಕ್ರಮಾಂಕದ ಓವರ್ ಗಳಲ್ಲಿ ಅವರು ಕ್ರೀಸ್ನಲ್ಲಿರಬೇಕು ಎಂದು ಎಬಿಡಿ ಸಲಹೆ ನೀಡಿದ್ದಾರೆ. ಅವರ ಸುತ್ತ ಉಳಿದ ಬ್ಯಾಟರ್ ಗಳು ಸ್ಫೋಟಕ ಇನ್ನಿಂಗ್ಸ್ ಆಡಬೇಕು ಎಂದು ಹೇಳಿದರು.
ವಿರಾಟ್ ಕೊಹ್ಲಿ ಈ ಬಾರಿ ಐಪಿಎಲ್ನಲ್ಲಿ ನಾಲ್ಕು ಪಂದ್ಯಗಳಲ್ಲಿ 67.66 ಸರಾಸರಿಯಲ್ಲಿ ಎರಡು ಅರ್ಧಶತಕಗಳೊಂದಿಗೆ 203 ರನ್ ಗಳಿಸಿದ್ದಾರೆ. ಹೆಚ್ಚು ರನ್ ಗಳಿಸಿದ ಅವರು ಪ್ರಸ್ತುತ ಆರೆಂಜ್ ಕ್ಯಾಪ್ ಹೊಂದಿದ್ದಾರೆ.
ತನ್ನ ಯೂಟ್ಯೂಬ್ ಚಾನೆಲ್ನಲ್ಲಿ ಮಾತನಾಡುತ್ತಾ, ಡಿವಿಲಿಯರ್ಸ್, "ವಿರಾಟ್ ಕೊಹ್ಲಿ ಆರಂಭಿಕರಾಗಿ ಉತ್ತಮ ಪ್ರದರ್ಶನ ಮುಂದುವರೆಸಬೇಕು. ಅವರು ಆರಂಭದಲ್ಲಿ ಎಚ್ಚರಿಕೆಯಿಂದ ಆಡಲಿ, ಫಾಫ್ ಡುಪ್ಲೆಸಿಸ್ ಸ್ಫೋಟಕ ಇನ್ನಿಂಗ್ಸ್ ಆಡಬೇಕು. ಕೊಹ್ಲಿ 6-15 ಓವರ್ ವರೆಗೆ ಬ್ಯಾಟಿಂಗ್ ಮಾಡಿದರೆ, ಎಲ್ಲಾ ಆಟಗಾರರು ಸ್ಫೋಟಕ ಇನ್ನಿಂಗ್ಸ್ ಆಡಬಹುದು" ಎಂದು ಹೇಳಿದರು.
"ಆರ್ಸಿಬಿ ಕೆಟ್ಟ ಆರಂಭವಲ್ಲ ಆದರೆ ಉತ್ತಮವಾಗಿಲ್ಲ. ಇದು ಮಧ್ಯದಲ್ಲಿದೆ, ಅವರಿಗೆ ಒಂದೆರಡು ಗೆಲುವುಗಳು ಬೇಕು. ಅವರು ಗೆಲುವಿನ ಹಾದಿಗೆ ಬರುತ್ತಾರೆ ಮತ್ತು ಮತ್ತೆ ತವರಿನಲ್ಲಿ ಆಡಲು ಬರುವ ಮುನ್ನ ಅವರು ಗೆಲುವನ್ನು ಪಡೆಯಲಿ" ಎಂದು ಆಶಿಸಿದರು.
ಆರ್ಸಿಬಿ ತನ್ನ ಮುಂದಿನ ಎರಡು ಪಂದ್ಯಗಳನ್ನು ತವರಿನಿಂದ ಹೊರಗೆ ಆಡಲಿದೆ. ಏಪ್ರಿಲ್ 6 ರಂದು ಶನಿವಾರ ಆರ್ಸಿಬಿ ರಾಜಸ್ಥಾನ ರಾಯಲ್ಸ್ ತಂಡವನ್ನು ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಎದುರಿಸಲಿದೆ. ಅದಾದ ಬಳಿಕ ಏಪ್ರಿಲ್ 11ರಂದು ವಾಂಖೆಡೆ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.
-
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
ಮೈದಾನಕ್ಕೆ ಬರ್ತಾರಾ ಆರ್ಸಿಬಿ ಅಭಿಮಾನಿಗಳ ಹೊಸ ಕ್ರಶ್ ಬಿರ್ಲಾ ಕುಡಿ ಅನನ್ಯಾ?; ಕಾವ್ಯಾ ಮಾರನ್ ಬಗ್ಗೆ ಹೊಸ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ












Click it and Unblock the Notifications