ಅಹಮದಾಬಾದ್ ವಿಮಾನ ದುರಂತ: ಕ್ರಿಕೆಟ್ ಆಟಗಾರರ ಸಂತಾಪ
ಗುರುವಾರ ಮಧ್ಯಾಹ್ನ ಗುಜರಾತ್ನ ಅಹಮದಾಬಾದ್ನಲ್ಲಿ ವಿಮಾನ ದುರ್ಘಟನೆ ಸಂಭವಿಸಿದೆ. ಏರ್ ಇಂಡಿಯಾ ಸಂಸ್ಥೆಗೆ ವಿಮಾನ ಸಂಖ್ಯೆ AI-171 ಅಹಮದಾಬಾದ್ನಿಂದ ಮಧ್ಯಾಹ್ನ 1.38ಕ್ಕೆ ಹಾರಾಟ ನಡೆಸಿತು. ಆದರೆ ಟೇಕ್ ಆಫ್ ಆಗುವ ವೇಳೆ ವಿಮಾನ ಅಪಘಾತಕ್ಕೆ ಈಡಾಯಿತು. ಈ ವಿಮಾನ ಸುಮಾರು 242 ಜನರನ್ನು ಹೊತ್ತು ಹೊರಟಿತ್ತು ಎಂಬ ಮಾಹಿತಿ ತಿಳಿದು ಬಂದಿದೆ. ವಿಮಾನ ನಿಲ್ದಾಣವನ್ನು ಬಿಟ್ಟ 10 ನಿಮಿಷದ ಒಳಗೆ ವಿಮಾನ ದುರ್ಘಟನೆ ಸಂಭವಿಸಿದೆ.
ವಿಮಾನದ ಕ್ಯಾಪ್ಟನ್ ಸುಮಿತ್ ಸಭರ್ವಾಲ್ ಚಲಾಯಿಸುತ್ತಿದ್ದರು. ಇವರು ಸುಮಾರು 8,250 ಗಂಟೆಗಳ ಹಾರಾಟ ಅನುಭವ ಹೊಂದಿದ್ದಾರೆ. ಇವರೊಂದಿಗೆ ಇದ್ದ ಸಹ-ಪೈಲಟ್ ಕ್ಲೈವ್ ಕುಂದರ್ 1,000 ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ಮಾಡಿದ ಅನುಭವ ಹೊಂದಿದ್ದರು. ಆದರೆ ಈ ವಿಮಾನ ಕಟ್ಟಡಕ್ಕೆ ಅಪ್ಪಳಿಸಿದ ಪರಿಣಾಮ ದುರಂತ ಸಂಭವಿಸಿದೆ. ವಿಮಾನ ಟೇಕ್ ಆಫ್ ಆದ ತಕ್ಷಣ, ಕ್ಯಾಪ್ಟನ್ಗೆ ವಿಮಾನದಲ್ಲಿನ ತಾಂತ್ರಿಕ ದೋಷದ ಬಗ್ಗೆ ಮಾಹಿತಿ ಸಿಕ್ಕಿತು. ಆದರೆ ಇದಕ್ಕೆ ಸರಿಯಾದ ಸ್ಪಂದನೆ ಸಿಗದ ಕಾರಣ ವಿಮಾನ ದುರಂತಕ್ಕೆ ಈಡಾಗಿದೆ. ಆದರೆ ವಿಮಾನ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಇನ್ನು ನಿಖರವಾಗಿ ಹೊರ ಬಂದಿಲ್ಲ.

ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆಗುವ ಮುನ್ನ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆ, ವಿಮಾನ ಮೊದಲು ಒಂದು ಮರಕ್ಕೆ ಡಿಕ್ಕಿ ಹೊಡೆದು ಬಳಿಕ ಕಟ್ಟಡಕ್ಕೆ ಬಡೆದಿದೆ.
Breaking!🚨
— 𝗩eena Jain (@DrJain21) June 12, 2025
Nationality of Passengers travelling in crashed plane in Ahmedabad, confirmed by Air India
169 Indian nationals
53 British nationals
1 Canadian national
7 Portuguese nationals
The worst air crash in recent times 😑#planecrash #Boeing pic.twitter.com/yLlk6XQQcg
ಕ್ರಿಕೆಟ್ ಆಟಗಾರರ ಸಂತಾಪ
ಈ ದುರಂತದ ಬಗ್ಗೆ ಕ್ರಿಕೆಟ್ ಆಟಗಾರರು ಸಮಾಜಿಕ ತಾಣದಲ್ಲಿ ಪೋಸ್ಟ್ಗಳನ್ನು ಮಾಡಿದ್ದಾರೆ. ಈ ಅಪಘಾತದ ಬಗ್ಗೆ ಸ್ಪಿನ್ ಮಾಂತ್ರಿಕ ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದು, ವಿಮಾನ ಅಪಘಾತಕ್ಕೀಡಾಗಿದೆ ಎಂದು ತಿಳಿದು ನನಗೆ ತೀವ್ರ ಆಘಾತ ಹಾಗೂ ದುಃಖವಾಗಿದೆ. ಈ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಸಂತಾಪಗಳು. ಈ ದುರ್ಘಟನೆಯನ್ನು ಪದಗಳಲ್ಲಿ ಹೇಳಲು ಸಾಧ್ಯವಿಲ್ಲ. ಇದರಲ್ಲಿ ಅಪಘಾತಾಕ್ಕಿಡಾದ ಸಂತ್ರಸ್ತರಿಗೆ ಶಕ್ತಿ, ಧೈರ್ಯ ಹಾಗೂ ಬೆಂಬಲ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.
ಟೀಮ್ ಇಂಡಿಯಾದ ಮಾಜಿ ಆಲ್ರೌಂಡರ್ ಇರ್ಫಾನ್ ಪಠಾಣ್ ಸಹ ಸಾಮಾಜಿಕ ತಾಣದಲ್ಲಿ ತಮ್ಮ ದುಃಖವನ್ನು ಹೊರ ಹಾಕಿದ್ದಾರೆ. ಇಂದು ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಿಂದ ತುಂಬಾ ದುಃಖವಾಗಿದೆ. ಪ್ರಯಾಣಿಕರು, ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ನಾನು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಬರೆದಿದ್ದಾರೆ.

ಅಹಮದಾಬಾದ್ನಲ್ಲಿ ನಡೆದ ವಿಮಾನ ದುರಂತದ ಬಗ್ಗೆ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಶಿಖರ್ ಧವನ್ ಸಹ ತಮ್ಮ ಸಾಮಾಜಿಕ ತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಈ ದುರ್ಘಟನೆ ನೋವು ತಂದಿದೆ. 'ಮೇಘನಿ ಬಳಿ ಅಪಘಾತದಿಂದ ಹಾನಿಗೊಳಗಾದ ಎಲ್ಲರಿಗೂ ನನ್ನ ಸಂತಾಪ. ಅವರ ಕುಟುಂಬಕ್ಕೆ ನಾನು ಶಕ್ತಿ ಮತ್ತು ಪ್ರಾರ್ಥನೆಗಳನ್ನು ಬಯಸುತ್ತೇನೆ ಎಂದು ಶಿಖರ್ ಧವನ್ ಬರೆದುಕೊಂಡಿದ್ದಾರೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications