T20 World Cup: ಬಲಿಷ್ಠ ತಂಡ ಪ್ರಕಟಿಸಿದ ದಕ್ಷಿಣ ಆಫ್ರಿಕಾ
ಜೂನ್ 1ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ ಪಂದ್ಯಾವಳಿಗೆ ದಕ್ಷಿಣ ಆಫ್ರಿಕಾ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಐಪಿಎಲ್ನಲ್ಲಿ ಅಬ್ಬರಿಸುತ್ತಿರುವ ಆಟಗಾರರು ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ನಲ್ಲಿ ಪಂದ್ಯಾವಳಿ ನಡೆಯುವ ಕಾರಣ ಸ್ಪಿನ್ನರ್ ಗಳಿಗೂ ತಂಡದಲ್ಲಿ ಅವಕಾಶ ಸಿಕ್ಕಿದೆ.
ಐಡೆನ್ ಮಾರ್ಕ್ರಾಮ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಡೇವಿಡ್ ಮಿಲ್ಲರ್ ಕೂಡ ತಂಡದಲ್ಲಿ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಪಿನ್ನರ್ ಗಳಾದ ಕೇಶವ್ ಮಹರಾಜ್ ಮತ್ತು ತಬ್ರೈಜ್ ಶಂಸಿ ಅವಕಾಶ ಪಡೆದುಕೊಂಡಿದ್ದಾರೆ.

ಸ್ಫೋಟಕ ಬ್ಯಾಟರ್ ಗಳಾದ ಕ್ವಿಂಟನ್ ಡಿ ಕಾಕ್, ಹೆನ್ರಿಚ್ ಕ್ಲಾಸೆನ್ ಕೂಡ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ವೇಗಿಗಳಾದ ಜೆರಾಲ್ಡ್ ಕೊಯೆಟ್ಜಿ, ಆನ್ರಿಚ್ ನೊಕಿಯಾ, ಕಗಿಸೊ ರಬಾಡಾ ಅವಕಾಶ ಪಡೆದುಕೊಂಡಿದ್ದಾರೆ.
ಜೂನ್ 2ರಿಂದ ಟಿ20 ವಿಶ್ವಕಪ್ಗೆ ಚಾಲನೆ ಸಿಗಲಿದೆ. ಜೂನ್ 3ರಂದು ದಕ್ಷಿಣ ಆಫ್ರಿಕಾ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಕಳೆದ ವಿಶ್ವಕಪ್ನಲ್ಲಿ ಅಷ್ಟೇನೂ ಉತ್ತಮ ಪ್ರದರ್ಶನ ನೀಡದ ದಕ್ಷಿಣ ಆಫ್ರಿಕಾ ಈ ಬಾರಿ ವೇಗದ ಬೌಲಿಂಗ್, ಸ್ಪಿನ್ ಮತ್ತು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದ್ದು, ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ.
ಟಿ20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ತಂಡ
ಐಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್ಮ್ಯಾನ್, ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫಾರ್ಟುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಆನ್ರಿಚ್ ನೊಕಿಯಾ, ಕಗಿಸೊ ರಬಾಡಾ, ರಿಯಾನ್ ರಿಕೆಲ್ಟನ್, ಟ್ರೀಸ್ಟಾನ್ ಸ್ಟಬ್ಸ್, ತಬ್ರೈಜ್ ಶಂಸಿ.
ಮೀಸಲು ಆಟಗಾರರು: ನಾಂದ್ರೆ ಬರ್ಗರ್, ಲುಂಗಿ ಎನ್ಗಿಡಿ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications