ರಾಷ್ಟ್ರೀಯ ಗೇಮ್ಸ್ ಗೀತೆ, ಮ್ಯಾಸ್ಕಟ್ ಇಂದು ಅನಾವರಣ; ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿ
ಅಹಮದಾಬಾದ್, ಸೆಪ್ಟೆಂಬರ್ 4: 36ನೇ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಗುಜರಾತ್ ಸಜ್ಜಾಗಿದ್ದು, ಭಾನುವಾರ (ಸೆಪ್ಟೆಂಬರ್ 4) ಸಂಜೆ ನಡೆಯಲಿರುವ ಇಲ್ಲಿನ ಇಕೆಎ ಅರೆನಾ ಟ್ರಾನ್ಸ್ಸ್ಟೇಡಿಯಾದಲ್ಲಿ ನಡೆಯಲಿರುವ ಅದ್ಧೂರಿ ಕಾರ್ಯಕ್ರಮದಲ್ಲಿ ಗಣ್ಯಾತಿಗಣ್ಯರ ಸಮ್ಮುಖದಲ್ಲಿ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಕೂಡಾ ಭಾಗವಹಿಸಲಿದ್ದಾರೆ. ಗುಜರಾತ್ನ ವಿವಿಧ ಕ್ಷೇತ್ರಗಳ ಗಣ್ಯರು ಸೇರಿ ಒಟ್ಟು 9000ಕ್ಕೂ ಹೆಚ್ಚು ಮಂದಿ ಈ ಆಕರ್ಷಕ ಸಮಾರಂಭಕ್ಕೆ ಸಾಕ್ಷಿಯಾಗುವ ನಿರೀಕ್ಷೆ ಇದೆ.
ಈ ಕಾರ್ಯಕ್ರಮದಲ್ಲಿ ಕ್ರೀಡಾಕೂಟದ ಅಧಿಕೃತ ಗೀತೆ ಮತ್ತು ಮ್ಯಾಸ್ಕಟ್(ಲಾಂಛನ)ವನ್ನು ಅನಾವರಣಗೊಳಿಸಲಾಗುತ್ತದೆ. ಇದರ ಜೊತೆಗೆ ಕ್ರೀಡಾಕೂಟದ ವೆಬ್ಸೈಟ್, ಮೊಬೈಲ್ ಆ್ಯಪ್ಗಳೂ ಬಿಡುಗಡೆಗೊಳ್ಳಲಿವೆ. ಇದರೊಂದಿಗೆ ದೇಶದ ಅತಿದೊಡ್ಡ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ ದೊರೆಯಲಿದೆ.

'ಕ್ರೀಡಾಕೂಟವನ್ನು ಆಯೋಜಿಸಲು ನಾವು ಉತ್ಸುಕಗೊಂಡಿದ್ದು, ಆತಿಥ್ಯ ಹಕ್ಕು ಸಿಕ್ಕಿರುವುದು ಹೆಮ್ಮೆ ನೀಡಿದೆ. ಭಾರತದ ಅಗ್ರ ಕ್ರೀಡಾಪಟುಗಳು ಹಾಗೂ ಅಧಿಕಾರಿಗಳು ನಮ್ಮ ರಾಜ್ಯಕ್ಕೆ ಆಗಮಿಸಲಿದ್ದಾರೆ ಎನ್ನುವ ವಿಚಾರ ಬಹಳ ಖುಷಿ ನೀಡುತ್ತಿದೆ. ಕ್ರೀಡಾಕೂಟಕ್ಕೆ ಬೇಕಿರುವ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ' ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದ್ದಾರೆ.
ಗುಜರಾತ್ನ ಕ್ರೀಡಾ ಸಚಿವ ಹರ್ಷ್ ಸಾಂಗ್ವಿ, ಅಹಮದಾಬಾದ್ನ ಮಹಾಪೌರ ಕಿರಿಟ್ಕುಮಾರ್ ಜೆ. ಪರ್ಮಾರ್, ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ)ಯ ಹಂಗಾಮಿ ಅಧ್ಯಕ್ಷ ಅನಿಲ್ ಖನ್ನಾ, ಕೇಂದ್ರ ಕ್ರೀಡಾ ಸಚಿವಾಲಯದ ಕಾರ್ಯದರ್ಶಿ ಸುಜಾತ ಚತುರ್ವೇದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
36ನೇ ರಾಷ್ಟ್ರೀಯ ಕ್ರೀಡಾಕೂಟವು 7 ವರ್ಷಗಳ ಬಳಿಕ ಆಯೋಜನೆಗೊಳ್ಳುತ್ತಿದ್ದು, ಸೆಪ್ಟೆಂಬರ್ 29ರಿಂದ ಅಕ್ಟೋಬರ್ 12ರ ವರೆಗೂ ನಡೆಯಲಿದೆ. ಗುಜರಾತ್ನ 6 ನಗರಗಳಾದ ಅಹಮದಾಬಾದ್, ಗಾಂಧಿನಗರ, ಸೂರತ್, ವಡೋದರ, ರಾಜ್ಕೋಟ್ ಮತ್ತು ಭಾವ್ನಗರಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ಸೈಕ್ಲಿಂಗ್ ಸ್ಪರ್ಧೆಗಳನ್ನು ನವದೆಹಲಿಯಲ್ಲಿ ನಡೆಸಲಾಗುತ್ತದೆ.

28 ರಾಜ್ಯ ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 7000ಕ್ಕೂ ಹೆಚ್ಚು ಕ್ರೀಡಾಪಟುಗಳು, 36ಕ್ಕೂ ಹೆಚ್ಚು ಕ್ರೀಡಾ ವಿಭಾಗಗಳಲ್ಲಿ ಸ್ಪರ್ಧಿಸಲಿದ್ದಾರೆ. ಇದೇ ಮೊದಲ ಬಾರಿಗೆ ಕ್ರೀಡಾಕೂಟದಲ್ಲಿ ದೇಸಿ ಕ್ರೀಡೆಗಳಾದ ಮಲ್ಲಕಂಭ ಮತ್ತು ಯೋಗಾಸನವನ್ನು ಸೇರ್ಪಡೆಗೊಳಿಸಲಾಗಿದೆ.
ಕಳೆದ ಆವೃತ್ತಿಯ ರಾಷ್ಟ್ರೀಯ ಕ್ರೀಡಾಕೂಟವು 2015ರಲ್ಲಿ ಕೇರಳದಲ್ಲಿ ನಡೆದಿತ್ತು.
ಅಮಿತ್ ಶಾ ಇತರ ಕಾರ್ಯಕ್ರಮಗಳು:
ಇದೇ ವೇಳೆ, ಅಮಿತ್ ಶಾ ರಾಷ್ಟ್ರೀಯ ಕ್ರೀಡಾಕೂಟದ ಲಾಂಛನ ಮತ್ತು ಅಧಿಕೃತ ಗೀತೆಯನ್ನು ಉದ್ಘಾಟನೆ ಮಾಡುವುದರ ಜೊತೆಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಮತ್ತು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಜೊತೆ ಕರ್ಟನ್ ರೈಸರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಹಾಗೆಯೇ, ಅಮಿತ್ ಶಾ ಅಹ್ಮದಾಬಾದ್ ಪೌರ ಸಂಸ್ಥೆಯ ಸ್ಮಾರ್ಟ್ ಸ್ಕೂಲ್ಗಳಿಗೆ ಚಾಲನೆ ಕೊಡಲಿದ್ದಾರೆ. ಅದಾದ ಬಳಿಕ ೬ನೇ ಆಲ್ ಇಂಡಿಯಾ ಪ್ರಿಸ್ ಡ್ಯೂಟಿ ಮೀಟ್ ಅನ್ನು ಉದ್ಘಾಟಿಸುವ ಯೋಜನೆ ಇದೆ. ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಮತ್ತು ಆ ರಾಜ್ಯದ ಗೃಹ ಸಚಿವ ಹರ್ಷ್ ಸಾಂಘವಿ ಉಪಸ್ಥಿತರಿರಲಿದ್ದಾರೆ. ಪ್ರಿಸನ್ ಡ್ಯೂಟಿ ಸಮಾವೇಶ ಎರಡು ವರ್ಷಗಳಿಗೊಮ್ಮೆ ನಡೆಯುತ್ತದೆ. ಸೆಪ್ಟೆಂಬರ್ 4ರಿಂದ 6ರವರೆಗೂ ಇದು ನಡೆಯುತ್ತದೆ. ಬ್ಯೂರೋ ಆಫ್ ಪೊಲೀಸ್ ರೀಸರ್ಚ್ ಅಂಡ್ ಡೆವಲಪ್ಮೆಂಟ್ ಸಂಸ್ಥೆ ಈ ಕಾರ್ಯಕ್ರಮವನ್ನು ಆಯೋಜಿಸುತ್ತದೆ.
ಸಂಜೆ ನಡೆಯಲಿರುವ ಕರ್ಟನ್ ರೈಸರ್ ಕಾರ್ಯಕ್ರಮ ವೇಳೆ ಲಾಂಛನ ಮತ್ತು ಗೀತೆಯನ್ನು ಬಿಡುಗಡೆ ಮಾಡಲಾಗುತ್ತದೆ. ನ್ಯಾಷನಲ್ ಗೇಮ್ಸ್ನ ವೆಬ್ಸೈಟ್ ಮತ್ತು ಮೊಬೈಲ್ ಆ್ಯಪ್ ಕೂಡ ಅನಾವರಣಗೊಳ್ಳಲಿದೆ.
ಗುಜರಾತ್ ಸರಕಾರ ನಡೆಸಿದ 11ನೇ ಖೇಲ್ ಮಹಾಕುಂಭ ಕ್ರೀಡೋತ್ಸವ ಕೂಡ ಇದೇ ವೇಳೆ ಅಂತ್ಯಗೊಳ್ಳಲಿದೆ.
(ಒನ್ಇಂಡಿಯಾ ಸುದ್ದಿ)
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications