Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ
Ananya Birla: ಆರ್ಸಿಬಿ ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಮಿತ್ರ ಸಂಸ್ಥೆಗಳ ಒಕ್ಕೂಟ ಖರೀದಿಸಿದ ಬೆನ್ನಲ್ಲೇ, ಉದ್ಯಮಿ ಮತ್ತು ಗಾಯಕಿ ಅನನ್ಯಾ ಬಿರ್ಲಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಈಗ ವೈರಲ್ ಆಗಿದೆ. "ಈ ಸಲ ಕಪ್ ನಮ್ದು" ಎಂಬ ಘೋಷಣೆಯೊಂದಿಗೆ ಅವರು ಆರ್ಸಿಬಿ ಕುಟುಂಬಕ್ಕೆ ಪಾದಾರ್ಪಣೆ ಮಾಡಿದ್ದಾರೆ.
ತಮ್ಮ ಪೋಸ್ಟ್ನಲ್ಲಿ ಆರ್ಸಿಬಿ ಅಭಿಮಾನಿಗಳಿಗೆ ಧನ್ಯವಾದ ತಿಳಿಸಿರುವ ಅನನ್ಯಾ, "ಎಲ್ಲಾ ಆರ್ಸಿಬಿ ಅಭಿಮಾನಿಗಳ ಪ್ರೀತಿಗೆ ಧನ್ಯವಾದಗಳು. ಈ ಸಲ ಕಪ್ ನಮ್ದು" ಎಂದು ಬರೆದುಕೊಳ್ಳುವ ಮೂಲಕ ಕನ್ನಡಿಗರು ಹಾಗೂ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಸಹೋದರನಿಗೆ ಬೆಂಬಲದ ಭರವಸೆ
ತಮ್ಮ ಸಹೋದರ ಆರ್ಯಮನ್ ವಿಕ್ರಮ್ ಬಿರ್ಲಾ ಅವರು ಫ್ರಾಂಚೈಸಿಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಅವರು, "ಅಧ್ಯಕ್ಷರಾಗುತ್ತಿರುವ ಆರ್ಯಮನ್ಗೆ ಅಭಿನಂದನೆಗಳು. ನೀನು ಈ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿಭಾಯಿಸುತ್ತೀಯ ಎಂಬ ನಂಬಿಕೆಯಿದೆ. ನಾನು ಯಾವಾಗಲೂ ನಿನ್ನ ಜೊತೆಗಿರುತ್ತೇನೆ" ಎಂದು ಹಾರೈಸಿದ್ದಾರೆ. ಅಲ್ಲದೆ ತಮ್ಮ ಮತ್ತೊಬ್ಬ ಸಹೋದರಿ ಅದ್ವೈತೇಶ ಬಿರ್ಲಾ ಅವರ ಬಗ್ಗೆಯೂ ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಈ ಬೃಹತ್ ಡೀಲ್ ಪ್ರಕ್ರಿಯೆಯಲ್ಲಿ ಸಾಥ್ ನೀಡಿದ ಬ್ಲ್ಯಾಕ್ಸ್ಟೋನ್, ಸತ್ಯನ್ ಮತ್ತು ಬೋಲ್ಟ್ ವೆಂಚರ್ಸ್ ಪಾಲುದಾರರಿಗೆ ಅನನ್ಯಾ ಧನ್ಯವಾದ ತಿಳಿಸಿದ್ದಾರೆ. ತಮ್ಮ ಈ ಯಶಸ್ಸಿನ ಹಿಂದೆ ನಿಂತಿರುವ ತಮ್ಮ ತಂಡ ಮತ್ತು ಆತ್ಮೀಯರನ್ನು 'ಆಯ್ದ ಕುಟುಂಬ' ಎಂದು ಕರೆದು ಗೌರವಿಸಿದ್ದಾರೆ.
ಅನನ್ಯಾ ಬಿರ್ಲಾ ಅವರು 'ಈ ಸಲ ಕಪ್ ನಮ್ದು" ಎಂದು ಬರೆದುಕೊಳ್ಳುವ ಮೂಲಕ ಅಭಿಮಾನಿಗಳಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಈ ಮೂಲಕ ಬಿರ್ಲಾ ಕುಟುಂಬದ ಯುವ ಪೀಳಿಗೆ ಈಗ ಕ್ರೀಡಾ ಜಗತ್ತಿನಲ್ಲಿ ಹೊಸ ಇತಿಹಾಸ ಬರೆಯಲು ಸಜ್ಜಾಗಿದೆ. ಒಟ್ಟಿನಲ್ಲಿ ಹೂಡಿಕೆದಾರರ ಬಲಿಷ್ಠ ಬೆಂಬಲದೊಂದಿಗೆ ಆರ್ಸಿಬಿ ತಂಡವು ಆರ್ಥಿಕವಾಗಿ ಮತ್ತು ಆಟದ ದೃಷ್ಟಿಯಿಂದ ಮತ್ತಷ್ಟು ಪ್ರಬಲವಾಗುವ ಮುನ್ಸೂಚನೆ ಸಿಕ್ಕಾಂತಾಗಿದೆ.
-
IPL 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಐಪಿಎಲ್ನಲ್ಲಿ ಯಾರೂ ಕೊಳ್ಳದಿದ್ದರೂ ಅಯೋಧ್ಯೆಯಲ್ಲಿ ಅಬ್ಬರಿಸಿದ ಆರ್ಸಿಬಿ ಮಾಜಿ ಆಟಗಾರ; 195 ರನ್ ಚಚ್ಚಿದ ಸ್ವಸ್ತಿಕ್ ಚಿಕಾರ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ











Click it and Unblock the Notifications