RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ
Ananya Birla RCB Post Viral: ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ನಡೆಯುತ್ತಿರುವ ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್ಸಿಬಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಿವೆ. ಈ ನಡುವೆಯೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಖರೀದಿಸಿದ ಆರ್ಯಮನ್ ವಿಕ್ರಮ್ ಬಿರ್ಲಾ ಅವರ ಸಹೋದರಿ ಅನನ್ಯಾ ಬಿರ್ಲಾ ಅವರು ವಿಶೇಷ ಪೋಸ್ಟ್ ಹಂಚಿಕೊಂಡು ಕನ್ನಡ ಅಭಿಮಾನಿಗಳ ಮನಸು ಗೆದ್ದಿದ್ದಾರೆ. ಇದು ಇದೀಗ ಭಾರೀ ವೈರಲ್ ಆಗುತ್ತಿದೆ.
ಆರ್ಸಿಬಿ ತಂಡದ ಹೊಸ ಮಾಲೀಕತ್ವದ ಭಾಗವಾಗಿರುವ ಅನನ್ಯಾ ಬಿರ್ಲಾ ಅವರು ಆರ್ಸಿಬಿ ಕುರಿತ ಸ್ಕೆಚ್ವೊಂದನ್ನು ತಮ್ಮ ಇನ್ಸ್ಟಾಗ್ರಾಂ ಸ್ಟೋರಿಯನ್ನು ಹಂಚಿಕೊಂಡಿದ್ದಾರೆ. ಕಲಾವಿದ ಅಮಿತ್ ಮಾಲೆ ಅವರು ಬಿಡಿಸಿರುವ ಈ ಚಿತ್ರದಲ್ಲಿ ಅರ್ಧ ಭಾಗ ಅನನ್ಯಾ ಬಿರ್ಲಾ ಅವರ ಮುಖ ಮತ್ತು ಇನ್ನರ್ಧ ಭಾಗ ಆರ್ಸಿಬಿ ಹೆಲ್ಮೆಟ್ ಧರಿಸಿದ ಮುಖವನ್ನು ಬಹಳ ಸುಂದರವಾಗಿ ಸಂಯೋಜಿಸಲಾಗಿದೆ.

ಆರ್ಸಿಬಿ ಹೆಸರು ಬದಲಾವಣೆ ವದಂತಿಗಳಿಗೆ ತೆರೆ
ಇತ್ತೀಚೆಗಷ್ಟೇ ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟವು ಆರ್ಸಿಬಿ ಫ್ರಾಂಚೈಸಿಯನ್ನು ಸುಮಾರು $1.78 ಬಿಲಿಯನ್ (₹16,700 ಕೋಟಿ) ಮೊತ್ತಕ್ಕೆ ಖರೀದಿಸಿದೆ. ಕುಮಾರ್ ಮಂಗಳಂ ಬಿರ್ಲಾ ಅವರ ಪುತ್ರಿ ಅನನ್ಯಾ ಬಿರ್ಲಾ ಈ ಮಾಲೀಕತ್ವದ ಪ್ರಮುಖ ಮುಖವಾಗಿ ಗುರುತಿಸಿಕೊಂಡಿದ್ದಾರೆ. ಖರೀದಿ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಆರ್ಸಿಬಿ ಹೆಸರು ಬದಲಾವಣೆ ಆಗುತ್ತದೆ ಎನ್ನುವ ವದಂತಿಗಳು ಹಬ್ಬಿದ್ದವು. ಇದಕ್ಕೆ ಅನನ್ಯಾ ಅವರು ತೆರೆ ಎಳೆಯುವ ಕೆಲಸ ಮಾಡಿದ್ದಾರೆ.
'ಆರ್ಸಿಬಿ ಹೆಸರು ಬದಲಾವಣೆ ಇಲ್ಲ
ತಂಡದ ಮಾಲೀಕತ್ವ ಬದಲಾದ ತಕ್ಷಣ "ರಾಯಲ್ ಚಾಲೆಂಜರ್ಸ್ ಬೆಂಗಳೂರು" ಎಂಬ ಹೆಸರನ್ನು ಬದಲಾಯಿಸಲಾಗುತ್ತದೆ ಎಂಬ ಊಹಾಪೋಹಗಳು ಎದ್ದಿದ್ದವು. ಆದರೆ ಅನನ್ಯಾ ಬಿರ್ಲಾ ಅವರು ಸಾಮಾಜಿಕ ಜಾಲತಾಣದ ಮೂಲಕ ಈ ಹೆಸರಿನಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಿ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅನನ್ಯಾ ಬಿರ್ಲಾ ಅವರು ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ ಕನ್ನಡದ ಪ್ರಸಿದ್ಧ ಸ್ಲೋಗನ್ "ಈ ಸಲ ಕಪ್ ನಮ್ದು" (Ee Sala Cup Namdu) ಎಂದು ಬರೆಯುವ ಮೂಲಕ ಆರ್ಸಿಬಿ ಅಭಿಮಾನಿಗಳ ಮನಗೆದ್ದಿದ್ದಾರೆ.
ಅನನ್ಯಾ ಅವರ ಸಹೋದರ ಮತ್ತು ಮಾಜಿ ಕ್ರಿಕೆಟಿಗ ಆರ್ಯಮನ್ ವಿಕ್ರಮ್ ಬಿರ್ಲಾ ಅವರು ಆರ್ಸಿಬಿ ತಂಡದ ನೂತನ ಚೇರ್ಮನ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇನ್ನೂ ಅನನ್ಯಾ ಹಂಚಿಕೊಂಡಿರುವ ಈ ಸ್ಕೆಚ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಇದು ಹೊಸ ಮಾಲೀಕತ್ವಕ್ಕೆ ಅಭಿಮಾನಿಗಳು ನೀಡುತ್ತಿರುವ ಸ್ವಾಗತದ ಸಂಕೇತವಾಗಿದೆ. ಅನನ್ಯಾ ಬಿರ್ಲಾ ಅವರು ಕೇವಲ ಉದ್ಯಮಿಯಷ್ಟೇ ಅಲ್ಲದೆ, ಪ್ರಸಿದ್ಧ ಗಾಯಕಿ ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿದ್ದಾರೆ. ಅವರು ತಂಡದೊಂದಿಗೆ ಸೇರಿಕೊಂಡಿರುವುದು ಆರ್ಸಿಬಿ ಬ್ರ್ಯಾಂಡ್ ಮೌಲ್ಯವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯುವ ನಿರೀಕ್ಷೆಯಿದೆ.
-
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
IPL 2026: RCB ಫ್ಯಾನ್ಸ್ಗಾಗಿ ಬಿಎಂಟಿಸಿ ಬಸ್ಗಳ ಕಾರ್ಯಾಚರಣೆ, ಎಲ್ಲಿಂದ ಎಲ್ಲಿಗೆ? ಮಾರ್ಗ ಡಿಟೇಲ್ಸ್ -
RCB Playing 11 Prediction: ಎಸ್ಆರ್ಎಚ್ ವಿರುದ್ಧ ಆರ್ಸಿಬಿ ಪ್ಲೇಯಿಂಗ್ 11 -
ಮೈದಾನಕ್ಕೆ ಬರ್ತಾರಾ ಆರ್ಸಿಬಿ ಅಭಿಮಾನಿಗಳ ಹೊಸ ಕ್ರಶ್ ಬಿರ್ಲಾ ಕುಡಿ ಅನನ್ಯಾ?; ಕಾವ್ಯಾ ಮಾರನ್ ಬಗ್ಗೆ ಹೊಸ ಚರ್ಚೆ -
IPL VIP Ticket: ಐಪಿಎಲ್ ಟಿಕೆಟ್ ನನಗಂತೂ ಬೇಡ: ಆರ್ಸಿಬಿ ಪಂದ್ಯದ ಟಿಕೆಟ್ ನಿರಾಕರಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ











Click it and Unblock the Notifications