ಟೆಸ್ಟ್ ಕ್ರಿಕೆಟ್ನಿಂದ ರೋಹಿತ್, ಕೊಹ್ಲಿ ನಿವೃತ್ತಿ; ಬಿಸಿಸಿಐ ಸ್ಪಷ್ಟನೆ ಕೊಡಬೇಕು ಎಂದ ಕನ್ನಡಿಗ ಅನಿಲ್ ಕುಂಬ್ಳೆ
ಭಾರತ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದಾರೆ. ಭಾರತ ಟೆಸ್ಟ್ ತಂಡವನ್ನು ಮುನ್ನಡೆಸಿದ್ದ ಈ ಇಬ್ಬರು ದಿಗ್ಗಜ ಆಟಗಾರರನ್ನು ಬಿಸಿಸಿಐ ನಡೆಸಿಕೊಂಡ ರೀತಿಗೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಬ್ಬರಿಗೂ ವಿದಾಯ ಪಂದ್ಯವನ್ನು ಆಡುವಂತೆ ಕೇಳಿ, ಗೌರವಯುತವಾಗಿ ಅವರನ್ನು ಬೀಳ್ಕೊಡಬೇಕಿತ್ತು ಎನ್ನುವುದು ಅಭಿಮಾನಿಗಳ ಒತ್ತಾಯ.
ಭಾರತ ತಂಡದ ಮಾಜಿ ಕ್ರಿಕೆಟಿಗ, ಕನ್ನಡಿಗ ಅನಿಲ್ ಕುಂಬ್ಳೆ ಕೂಡ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯನ್ನು (ಬಿಸಿಸಿಐ) ಪ್ರಶ್ನೆ ಮಾಡಿದ್ದಾರೆ. ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಟೆಸ್ಟ್ ನಿವೃತ್ತಿಯನ್ನು ಕಳಪೆಯಾಗಿ ನಿರ್ವಹಿಸಿದ್ದಕ್ಕೆ ಸ್ಪಷ್ಟನೆ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಐದು ದಿನಗಳ ಅಂತರದಲ್ಲಿ ಇಬ್ಬರು ದಿಗ್ಗಜ ಆಟಗಾರರು ತಮ್ಮ ಟೆಸ್ಟ್ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಎಳೆದರು, ಮುಂಬರುವ ಇಂಗ್ಲೆಂಡ್ ಟೆಸ್ಟ್ ಪ್ರವಾಸಕ್ಕೆ ತಂಡವನ್ನು ಆಯ್ಕೆ ಮಾಡುಲು ಸಭೆಗೆ ಹದಿನೈದು ದಿನಗಳ ಮೊದಲು ನಿರ್ಧಾರ ತೆಗೆದುಕೊಳ್ಳಲಾಗಿದೆ.
ರೋಹಿತ್ ಮತ್ತು ಕೊಹ್ಲಿ ಇಬ್ಬರಿಗೂ ಟೆಸ್ಟ್ ಕ್ರಿಕೆಟ್ನಿಂದ ಬೀಳ್ಕೊಡುಗೆ ನೀಡಬೇಕಿತ್ತು. ವಿದಾಯ ಪಂದ್ಯವನ್ನು ಆಡಿಸಿ ಗೌರವಯುತವಾಗಿ ಕಳಿಸಿದ್ದರೆ ಅಭಿಮಾನಿಗಳಿಗೂ ಸಮಾಧಾನವಾಗುತ್ತಿತ್ತು, ಆದರೆ ಕೊನೆಯ ಪಂದ್ಯ ಆಡಲೂ ಬಿಸಿಸಿಐ ಏಕೆ ಅವಕಾಶ ನೀಡಿಲ್ಲ ಎಂದು ಇಎಸ್ಪಿಎನ್ ಕ್ರಿಕ್ ಇನ್ಫೊ ಜೊತೆ ಮಾತನಾಡಿದ ಕುಂಬ್ಳೆ ಪ್ರಶ್ನೆ ಮಾಡಿದ್ದಾರೆ.
ಕೆಲವು ದಿನಗಳ ಹಿಂದೆ ರೋಹಿತ್ ಶರ್ಮಾ ಮತ್ತು ನಂತರ ವಿರಾಟ್ ಕೊಹ್ಲಿ. ಇವರು ಮೈದಾನದಲ್ಲಿ ಸರಿಯಾದ ವಿದಾಯಕ್ಕೆ ಅರ್ಹರು ಎಂದು ನಾನು ಭಾವಿಸುತ್ತೇನೆ. ಬಿಸಿಸಿಐ ನಾಯಕರು ಪರಿಹರಿಸಬೇಕು ಎಂದು ನಾನು ಬಲವಾಗಿ ನಂಬುತ್ತೇನೆ. "ಇದು ಸಾಮಾಜಿಕ ಮಾಧ್ಯಮ ಯುಗ ಎಂದು ನನಗೆ ತಿಳಿದಿದೆ, ಹೌದು, ಅಭಿಮಾನಿಗಳು ಮೈದಾನಕ್ಕೆ ಬರಲು ಬಯಸುತ್ತಾರೆ, ಸಾಕಷ್ಟು ಅಭಿಮಾನಿಗಳು ಇರುತ್ತಿದ್ದರು ಮತ್ತು ಅವರಿಗೆ ಅದ್ದೂರಿ ವಿದಾಯ ಹೇಳುತ್ತಿದ್ದರು" ಎಂದು ಕುಂಬ್ಳೆ ಹೇಳಿದ್ದಾರೆ.
ಕೊಹ್ಲಿ ಮತ್ತು ರೋಹಿತ್ ಅವರ ನಿವೃತ್ತಿಯಿಂದ ಭಾರತೀಯ ಟೆಸ್ಟ್ ತಂಡದಲ್ಲಿ ದೊಡ್ಡ ಕೊರತೆ ಬಗ್ಗೆ ಅನಿಲ್ ಕುಂಬ್ಳೆ ಕಳವಳ ವ್ಯಕ್ತಪಡಿಸಿದರು, ರೋಹಿತ್ ನಿವೃತ್ತಿ ಹೊಂದಿದ್ದಾರೆ, ಅವರು ಸ್ವಲ್ಪ ಸಮಯದವರೆಗೆ ನಾಯಕರಾಗಿದ್ದರು ಮತ್ತು ವಿರಾಟ್ ಬಹುಶಃ ಭಾರತ ಟೆಸ್ಟ್ ಕ್ರಿಕೆಟ್ನ ಯಶಸ್ವಿ ನಾಯಕ ಮತ್ತು ನೀವು ಅವರಲ್ಲಿ ಒಬ್ಬರಾದರೂ ತಂಡದಲ್ಲಿ ಇರಬೇಕೆಂದು ಬಯಸುತ್ತೀರಿ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಕಠಿಣವಾಗಲಿದೆ. ಆಯ್ಕೆದಾರರಿಗೂ ಇದ್ದ ಆಶ್ಚರ್ಯ ತಂದಿರಬೇಕು ಎಂದು ನಾನು ಭಾವಿಸುತ್ತೇನೆ ಎಂದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications