ಹಾಂಕಾಂಗ್ ವಿರುದ್ಧ ಗೆದ್ದ ಪಾಕಿಸ್ತಾನ: ಸೆಪ್ಟೆಂಬರ್ 4ರಂದು ಮತ್ತೆ ಭಾರತ-ಪಾಕಿಸ್ತಾನ ಪಂದ್ಯ
ನಿರೀಕ್ಷೆಯಂತೆ ಪಾಕಿಸ್ತಾನ ತಂಡ ದುರ್ಬಲ ಹಾಂಗ್ಕಾಂಗ್ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ದುರ್ಬಲ ಹಾಂಗ್ಕಾಂಗ್ ತಂಡವನ್ನು 155 ರನ್ಗಳ ಅಂತರದಿಂದ ಸೋಲಿಸಿದ ಪಾಕಿಸ್ತಾನ ಏಷ್ಯಾಕಪ್ನಲ್ಲಿ ಸೂಪರ್ 4 ಹಂತವನ್ನು ಪ್ರವೇಶಿಸಿದೆ. ಈ ಮೂಲಕ ಸೆಪ್ಟೆಂಬರ್ 4ರಂದು ಮತ್ತೆ ಭಾರತ ಪಾಕಿಸ್ತಾನ ಪಂದ್ಯ ನಡೆಯುವುದು ಖಚಿತವಾಗಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಹಾಂಗ್ ಕಾಂಗ್ ಪಾಕಿಸ್ತಾನ ನಾಯಕ ಬಾಬರ್ ಅಜಂರನ್ನು ಬೇಗನೇ ಔಟ್ ಮಾಡುವಲ್ಲಿ ಯಶಸ್ವಿಯಾಯಿತು. ಮೊದಲ 10 ಓವರ್ ಗಳಲ್ಲಿ ಹಾಂಗ್ಕಾಂಗ್ ಬೌಲರ್ ಗಳು ಉತ್ತಮ ಪ್ರದರ್ಶನ ನೀಡಿದರು. ಮೊದಲ 10 ಓವರ್ ಗಳಲ್ಲಿ ಪಾಕಿಸ್ತಾನ 1 ವಿಕೆಟ್ ನಷ್ಟಕ್ಕೆ ಕೇವಲ 64 ರನ್ ಗಳಿಸಿತ್ತು. ಆದರ ನಂತರ 10 ಓವರ್ ಗಳಲ್ಲಿ ಭರ್ಜರಿಯಾಗಿ ಬ್ಯಾಟ್ ಮಾಡಿದ ಪಾಕಿಸ್ತಾನ 129 ರನ್ ಗಳಿಸಿದರು. ಅಂತಿಮವಾಗಿ ಪಾಕಿಸ್ತಾನ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 193 ರನ್ ಗಳಿಸಿತು.
ಬೃಹತ್ ಮೊತ್ತವನ್ನು ಬೆನ್ನಟ್ಟಿದ ಹಾಂಗ್ ಕಾಂಗ್ ತಂಡ ಯಾವ ಹಂತದಲ್ಲೂ ಪಾಕಿಸ್ತಾನ ಬೌಲರ್ ಗಳನ್ನು ಸಮರ್ಥವಾಗಿ ಎದುರಿಸಲೇ ಇಲ್ಲ. ಕೇವಲ 10.4 ಓವರ್ ಗಳಲ್ಲಿ 38 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಗುವ ಮೂಲಕ ಹೀನಾಯ ಸೋಲನುಭವಿಸಿತು. ಹಾಂಗ್ಕಾಂಗ್ನ ಯಾವೊಬ್ಬ ಆಟಗಾರನು ಎರಡಂಕಿ ರನ್ ಗಳಿಸಲು ಸಾಧ್ಯವಾಗಲಿಲ್ಲ. ಹಾಂಗ್ ಕಾಂಗ್ ನಾಯಕ ನಿಜಾಕತ್ ಖಾನ್ 8 ರನ್ ಗಳಿಸಿದ್ದು ತಂಡದ ಗರಿಷ್ಠ ರನ್ ಆಗಿದೆ.

ಪಾಕಿಸ್ತಾನದ ಪರ ಶಾದಾಬ್ ಖಾನ್ ನಾಲ್ಕು ವಿಕೆಟ್ ಗಳಿಸುವ ಮೂಲಕ ತಂಡದ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಮೊಹಮ್ಮದ್ ನವಾಜ್ 3 ವಿಕೆಟ್ ಪಡೆದು ಮಿಂಚಿದರೆ. ನಸೀಮ್ ಶಾ 2 ವಿಕೆಟ್ ಪಡೆದರು.
ಸೆಪ್ಟೆಂಬರ್ 4ರಂದು ಭಾರತ-ಪಾಕಿಸ್ತಾನ ಪಂದ್ಯ
ಅಪರೂಪಕ್ಕೆ ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತವೆ. ಆದರೆ ಈ ಬಾರಿ ಕೆಲವೇ ದಿನಗಳ ಅಂತರದಲ್ಲಿ ಸಾಂಪ್ರದಾಯಿಕ ಎದುರಾಳಿಗಳು ಎರಡನೇ ಬಾರಿ ಮುಖಾಮುಖಿಯಾಗುತ್ತಿರುವುದು ವಿಶೇಷವಾಗಿದೆ. ಏಷ್ಯಾಕಪ್ ಟೂರ್ನಿ ಗುಂಪು ಹಂತದ ಪಂದ್ಯದಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ರೋಚಕ 5 ವಿಕೆಟ್ಗಳ ಜಯ ಸಾಧಿಸಿತ್ತು. ಈಗ ಭಾನುವಾರ ಮತ್ತೆ ಎರಡೂ ತಂಡಗಳ ನಡುವೆ ಸೂಪರ್ 4 ಹಂತದ ಪಂದ್ಯದಲ್ಲಿ ಜಯಕ್ಕಾಗಿ ಹೋರಾಡಲಿವೆ.

ಸೆಪ್ಟೆಂಬರ್ 4ರಂದು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತ-ಪಾಕಿಸ್ತಾನ ಪಂದ್ಯ ನಡೆಯಲಿದೆ. ಭಾರತೀಯ ಕಾಲಮಾನ 7-30ಕ್ಕೆ ಪಂದ್ಯ ಆರಂಭವಾಗಲಿದೆ. ಡಿಸ್ನಿ ಹಾಟ್ಸ್ಟಾರ್ ನಲ್ಲಿ ಪಂದ್ಯದ ನೇರ ಪ್ರಸಾರವನ್ನು ವೀಕ್ಷಣೆ ಮಾಡಬಹುದಾಗಿದೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications