ಏಷ್ಯಾಕಪ್: ಭಾರತ ವಿರುದ್ಧ ಪಾಕಿಸ್ತಾನ ಟಿ20 ಪಂದ್ಯ ಯಾವಾಗ?
ಬೆಂಗಳೂರು, ಜುಲೈ 07: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಮೆಂಟ್ಗೂ ಮುನ್ನ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಹಾಗೂ ಪಾಕಿಸ್ತಾನ ಮುಖಾಮುಖಿಯಾಗಲಿವೆ. ಏಷ್ಯಾಕಪ್ 2022ರಲ್ಲಿ ಬದ್ಧವೈರಿಗಳ ಕಾಳಗಕ್ಕೆ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 27ರಿಂದ ಸೆಪ್ಟೆಂಬರ್ 11ರ ತನಕ ಏಷ್ಯಾಕಪ್ ಟೂರ್ನಮೆಂಟ್ ನಡೆಯಲಿದೆ.
ಈ ವರ್ಷದ ಏಷ್ಯಾಕಪ್ ಕದನವೂ ಕೂಡಾ ಟಿ20 ಮಾದರಿಯಲ್ಲೇ ನಡೆಸಲಾಗುತ್ತದೆ. ಈ ಹಿಂದೆ ಏಕದಿನ ಪಂದ್ಯದ ಮಾದರಿಯಲ್ಲಿ ನಡೆಸಲಾಗುತ್ತಿತ್ತು. ಟಿ20 ವಿಶ್ವಕಪ್ ಗೂ ಮುನ್ನ ಭಾರತದ ಉಪಖಂಡದ ತಂಡಗಳ ತಯಾರಿಗೆ ಏಷ್ಯಾಕಪ್ ಉತ್ತಮ ವೇದಿಕೆ ಒದಗಿಸಬಲ್ಲುದು.
ಏಷ್ಯಾಕಪ್ ಟೂರ್ನಮೆಂಟ್ನಲ್ಲಿ ಉತ್ತಮ ದಾಖಲೆ ಹೊಂದಿರುವ ಭಾರತ ಮತ್ತೊಮ್ಮೆ ಕಪ್ ಎತ್ತುವ ಉತ್ಸಾಹದಲ್ಲಿದೆ. 2018ರ ನಂತರ ಮತ್ತೊಮ್ಮೆ ಪ್ರೇಕ್ಷಕರ ಸಮ್ಮುಖದಲ್ಲಿ ಹೊಡಿ ಬಡಿ ಆಟ ಆಯೋಜನೆಗೊಳ್ಳಲಿದೆ. ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೂ ಶ್ರೀಲಂಕಾ ದೇಶದ ಕ್ರಿಕೆಟ್ ಮಂಡಳಿಯು ಈ ಪ್ರತಿಷ್ಠಿತ ಟೂರ್ನಮೆಂಟ್ನಲ್ಲಿ ಭಾಗವಹಿಸುವ ಇಚ್ಛೆ ವ್ಯಕ್ತಪಡಿಸಿದೆ. ಏಷ್ಯಾಕಪ್ 2022ರ ಅಧಿಕೃತ ವೇಳಾಪಟ್ಟಿ ಇನ್ನೂ ನಿಗದಿಯಾಗಿಲ್ಲ. ಲಭ್ಯ ಮಾಹಿತಿಯಂತೆ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಾವಳಿ ಆಗಸ್ಟ್ 28ರಂದು ನಡೆಯುವ ಸಾಧ್ಯತೆ ಹೆಚ್ಚಿದೆ.

ಏಷ್ಯಾಕಪ್ ನಂತರ ಟಿ20 ವಿಶ್ವಕಪ್ 2022ರಲ್ಲಿ ಕೂಡಾ ಭಾರತ ಹಾಗೂ ಪಾಕಿಸ್ತಾನ ಮತ್ತೊಮ್ಮೆ ಎದುರಾಗಲಿವೆ. ಮೆಲ್ಬೋರ್ನ್ ಮೈದಾನದಲ್ಲಿ ಅಕ್ಟೋಬರ್ 23ರಂದು ಪರಸ್ಪರ ಸೆಣಸಲಿವೆ.
ವಿರಾಟ್ ಕೊಹ್ಲಿ ನೇತೃತ್ವದ ಟೀಂ ಇಂಡಿಯಾ ತಂಡವನ್ನು ಬಾಬರ್ ಅಜಂ ನೇತೃತ್ವ ಪಾಕಿಸ್ತಾನ ತಂಡ ಸೋಲಿಸಿತ್ತು. ಈ ಮೂಲಕ ವಿಶ್ವಕಪ್ ಪಂದ್ಯಾವಳಿಗಳಲ್ಲಿ ಪಾಕಿಸ್ತಾನ ಮೊದಲ ಜಯ ದಾಖಲಿಸಿತ್ತು. ಈ ಬಾರಿ ರೋಹಿತ್ ಶರ್ಮ ಪಡೆ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಜೊತೆಗೆ ಕಪ್ ಎತ್ತುವ ಉತ್ಸಾಹದಲ್ಲಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications