Asian Games: ಶ್ರೀಲಂಕಾ ವಿರುದ್ಧ ರೋಚಕ ಹಣಾಹಣಿಯಲ್ಲಿ ಗೆದ್ದ ಭಾರತ ಮಹಿಳಾ ತಂಡಕ್ಕೆ ಚಿನ್ನ
ಏಷ್ಯನ್ ಗೇಮ್ಸ್ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಇತಿಹಾಸ ಸೃಷ್ಟಿಸಿದೆ. ಇದೇ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ನಲ್ಲಿ ಕ್ರಿಕೆಟ್ ಅನ್ನು ಸೇರಿಸಲಾಗಿತ್ತು. ಮೊದಲ ಆವೃತ್ತಿಯಲ್ಲೇ ಭಾರತ ತಂಡ ಚಿನ್ನದ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದೆ.
ಚೀನಾದ ಹ್ಯಾಂಗ್ಝೌನ ಪಿಂಗ್ಫೆಂಗ್ ಕ್ಯಾಂಪಸ್ ಕ್ರಿಕೆಟ್ ಫೀಲ್ಡ್ ಮೈದಾನದಲ್ಲಿ ನಡೆದ ರೋಚಕ ಪಂದ್ಯದಲ್ಲಿ ಭಾರತ ಶ್ರೀಲಂಕಾ ತಂಡವನ್ನು 19 ರನ್ಗಳಿಂದ ಸೋಲಿಸಿತು. ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು.

ಮಂದಾನ, ರೋಡ್ರಿಗಸ್ ಉತ್ತಮ ಆಟ
ಬ್ಯಾಟಿಂಗ್ ಮಾಡಲು ಕಷ್ಟಕರವಾದ ಪಿಚ್ನಲ್ಲಿ ಸ್ಮೃತಿ ಮಂದಾನ ಮತ್ತು ಜೆಮಿಮಾ ರೋಡ್ರಿಗಸ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಮಂದಾನ 45 ಎಸೆತಗಳಲ್ಲಿ 46 ರನ್ ಗಳಿಸಿದರೆ, ರೋಡ್ರಿಗಸ್ 40 ಎಸೆತಗಳಲ್ಲಿ 42 ರನ್ ಗಳಿಸಿದರು.
ಇವರಿಬ್ಬರನ್ನೂ ಹೊರತುಪಡಿಸಿದರೆ ಭಾರತದ ಯಾವೊಬ್ಬ ಬ್ಯಾಟರ್ ಕೂಡ ಎರಡಂಕಿ ಮೊತ್ತ ದಾಖಲಿಸಲಿಲ್ಲ. ರಿಷಾ ಘೋಷ್, ಶೆಫಾಲಿ ವರ್ಮಾ ತಲಾ 9 ರನ್ ಗಳಿಸಿದರು. ಅಂತಿಮವಾಗಿ ಭಾರತ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 116 ರನ್ ಗಳಿಸಿತು. ಶ್ರೀಲಂಕಾ ಪರ ಪ್ರಬೋಧಿನಿ, ಸುಗಂಧಿಕಾ ಕುಮಾರಿ, ಇನೋಕಾ ರಣವೀರ ತಲಾ ಎರಡು ವಿಕೆಟ್ ಪಡೆದರು.
ಮೋಡಿ ಮಾಡಿದ ತಿತಾಸ್ ಸಧು
ಈ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಶ್ರೀಲಂಕಾ ಮೊದಲ ಓವರ್ ನಲ್ಲೇ 13 ರನ್ ಗಳಿಸಿ ಉತ್ತಮ ಆರಂಭ ಪಡೆಯಿತು. ಆದರೆ ಮೂರನೇ ಓವರ್ ನಲ್ಲಿ ದಾಳಿಗೆ ಇಳಿದ ತಿತಾಸ್ ಸಧು ಒಂದೇ ಓವರ್ ನಲ್ಲಿ ಎರಡು ವಿಕೆಟ್ ಪಡೆದು ಶ್ರೀಲಂಕಾಗೆ ಆಘಾತ ನೀಡಿದರು.
ನಂತರ ತಮ್ಮ ಎರಡನೇ ಓವರ್ ನ ಮೊದಲ ಎಸೆತದಲ್ಲೇ ಪ್ರಮುಖ ಬ್ಯಾಟರ್ ಚಾಮರಿ ಅಟಪಟ್ಟು ಅವರ ವಿಕೆಟ್ ಪಡೆದು ಶ್ರೀಲಂಕಾ ಗೆಲುವಿನ ಆಸೆಗೆ ಕಡಿವಾಣ ಹಾಕಿದರು. ಹಾಸಿನಿ ಪೆರೇರಾ (25) , ನೀಲಾಕ್ಷಿ ಡಿ ಸಿಲ್ವ (23) ಗೆಲುವಿಗೆ ಹೋರಾಟ ಮಾಡಿದರೂ ಕೂಡ ಲಂಕಾ ಗೆಲುವಿಗೆ ಸಹಾಯ ಮಾಡಲಿಲ್ಲ.
ಅಂತಿಮವಾಗಿ ಶ್ರೀಲಂಕಾ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 97 ರನ್ ಮಾತ್ರ ಗಳಿಸುವ ಮೂಲಕ ಸೋಲೊಪ್ಪಿಕೊಂಡಿತು. ತಿತಾಸ್ ಸಧು 4 ಓವರ್ ನಲ್ಲಿ 3 ವಿಕೆಟ್ ಪಡೆದು ಕೇವಲ 6 ರನ್ ಮಾತ್ರ ಬಿಟ್ಟುಕೊಟ್ಟರು. ರಾಜೇಶ್ವರಿ ಗಾಯಕ್ವಾಡ್ 2 ವಿಕೆಟ್ ಪಡೆದರೆ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್ ಮತ್ತು ದೇವಿಕಾ ವೈದ್ಯ ತಲಾ ಒಂದು ವಿಕೆಟ್ ಪಡೆದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications